AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ಟ್ರೋಫಿಯನ್ನು ಕಳೆದು ಹಾಕಿದ್ದ ಎ.ಆರ್​. ರೆಹಮಾನ್; ನಂತರ ಅದು ಸಿಕ್ಕಿದ್ದೆಲ್ಲಿ?

AR Rahman: ‘ಸ್ಲಮ್​ಡಾಗ್​ ಮಿಲಿಯನೇರ್’​ ಚಿತ್ರ 2008ರಲ್ಲಿ ರಿಲೀಸ್ ಆಯಿತು. ಇದು ರೆಹಮಾನ್ ವೃತ್ತಿಜೀವನದಲ್ಲಿ ಮಹತ್ವದ ಸಿನಿಮಾ ಎನಿಸಿಕೊಂಡಿದೆ.

ಆಸ್ಕರ್ ಟ್ರೋಫಿಯನ್ನು ಕಳೆದು ಹಾಕಿದ್ದ ಎ.ಆರ್​. ರೆಹಮಾನ್; ನಂತರ ಅದು ಸಿಕ್ಕಿದ್ದೆಲ್ಲಿ?
ಎಆರ್​ ರೆಹಮಾನ್
ರಾಜೇಶ್ ದುಗ್ಗುಮನೆ
|

Updated on:Mar 14, 2023 | 7:36 AM

Share

ಮಾರ್ಚ್ 13ರಂದು ನಡೆದ 95ನೇ ಸಾಲಿನ ಅಕಾಡೆಮಿ ಅವಾರ್ಡ್ಸ್​ (Academy Awards) ಕಾರ್ಯಕ್ರಮದಲ್ಲಿ ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಬಂದಿವೆ. ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ (Naatu Naatu Song) ಹಾಡು ಹಾಗೂ ‘ದಿ ಎಲಿಫೆಂಟ್ ವಿಸ್ಪರರ್ಸ್​’ ಡಾಕ್ಯುಮೆಂಟರಿಗೆ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಇದರಿಂದ ಭಾರತೀಯರ ಖುಷಿ ಹೆಚ್ಚಿದೆ. ಈ ಸಂದರ್ಭದಲ್ಲಿ ಹಳೆಯ ಘಟನೆಯನ್ನು ನೆನಪಿಸಿಕೊಳ್ಳಲಾಗುತ್ತಿದೆ. ‘ಸ್ಲಮ್ ಡಾಗ್​ ಮಿಲಿಯನೇರ್​’ ಚಿತ್ರಕ್ಕಾಗಿ ಎರಡು ಆಸ್ಕರ್ ಗೆದ್ದ ರೆಹಮಾನ್ ಅವರು ಅದನ್ನು ಕಳೆದುಕೊಂಡಿದ್ದಾರೆ! ಅದು ಹೇಗೆ ಎನ್ನುವ ವಿವರ ಇಲ್ಲಿದೆ.

ರೆಹಮಾನ್ ಅವರು ಬಹಳ ಸಣ್ಣ ವಯಸ್ಸಿಗೆ ಸಂಗೀತದ ಬಗ್ಗೆ ಆಸಕ್ತಿ ಬೆಳೆಸಿಕೊಂಡರು. ಝಾಕಿರ್​ ಹುಸೇನ್​, ಇಳಯರಾಜ, ವೈದ್ಯನಾಥನ್​, ಎಕ್​. ಶಂಕರ್​ ಜತೆ ರೆಹಮಾನ್​ ಒಳ್ಳೆಯ ಒಡನಾಟ ಹೊಂದಿದ್ದರು. ಇವರಿಂದ ರೆಹಮಾನ್​ ಸಾಕಷ್ಟು ಪ್ರಭಾವಕ್ಕೆ ಒಳಗಾಗಿದ್ದರು. 1992ರಲ್ಲಿ ತೆರೆಗೆ ಬಂದ ತಮಿಳಿನ ‘ರೋಜಾ’ ಸಿನಿಮಾದ ಹಾಡುಗಳು ಹಿಟ್ ಆದವು. ಇದಕ್ಕೆ ಸಂಗೀತ ಸಂಯೋಜನೆ ಮಾಡಿದ್ದು ರೆಹಮಾನ್. ಮೊದಲ ಸಿನಿಮಾದಲ್ಲೇ ಖ್ಯಾತಿ ಹೆಚ್ಚಿತು. ಮೊದಲ ಚಿತ್ರಕ್ಕೆ ಅವರಿಗೆ ರಾಷ್ಟ್ರಪ್ರಶಸ್ತಿ ಸಿಕ್ಕಿತು.

ಇದನ್ನೂ ಓದಿ
Image
‘ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ಆಸ್ಕರ್​ಗೆ ಹೋದ್ರೆ ಭಾರತಕ್ಕೆ ಮುಜುಗರ; ಇದು ದ್ವೇಷ ಹಬ್ಬಿಸುವ ಕಸ’: ಕೇಳಿಬಂತು ಕಟು ಟೀಕೆ
Image
Aamir Khan: ವಿರೋಧದ ನಡುವೆಯೂ ‘ಆಸ್ಕರ್​’ ಗಮನ ಸೆಳೆದ ‘ಲಾಲ್​ ಸಿಂಗ್​ ಚಡ್ಡಾ’; ಆಮಿರ್​ ಖಾನ್​ ಫ್ಯಾನ್ಸ್​ ಖುಷ್​
Image
ಪತ್ನಿಗಾಗಿ ನಟನ ಕೆನ್ನೆಗೆ ಬಾರಿಸಿದ್ದ ವಿಲ್​ ಸ್ಮಿತ್​ಗೆ ಆಸ್ಕರ್​ನಿಂದ 10 ವರ್ಷ ಬ್ಯಾನ್​; ಅಕಾಡೆಮಿ ನಿರ್ಧಾರ
Image
ಆಸ್ಕರ್​ ವೇದಿಕೆಯಲ್ಲಿ ನಟ ಕ್ರಿಸ್​ ರಾಕ್​ ಕೆನ್ನೆಗೆ ಹೊಡೆದ ವಿಲ್​ ಸ್ಮಿತ್​ ಬಗ್ಗೆ ತಾಯಿಯ ಪ್ರತಿಕ್ರಿಯೆ ಏನು?

‘ಸ್ಲಮ್​ಡಾಗ್​ ಮಿಲಿಯನೇರ್’​ ಚಿತ್ರ 2008ರಲ್ಲಿ ರಿಲೀಸ್ ಆಯಿತು. ಇದು ರೆಹಮಾನ್ ವೃತ್ತಿಜೀವನದಲ್ಲಿ ಮಹತ್ವದ ಸಿನಿಮಾ ಎನಿಸಿಕೊಂಡಿದೆ. ಈ ಚಿತ್ರಕ್ಕೆ ರೆಹಮಾನ್ ಅವರಿಗೆ ಎರಡು ಆಸ್ಕರ್ ಅವಾರ್ಡ್​ಗಳು ಲಭಿಸಿದ್ದವು. ಇದನ್ನು ರೆಹಮಾನ್ ಅವರು ತಾಯಿ ಕರೀಮಾ ಬೇಗಮ್​ಗೆ ನೀಡಿದ್ದರು. ಅವರು ಆಸ್ಕರ್​ ಟ್ರೋಫಿಯನ್ನು ಕಬೋರ್ಡ್​ನಲ್ಲಿ ಬಟ್ಟೆಮುಚ್ಚಿ ಜೋಪಾನವಾಗಿರಿಸಿದ್ದರು.

ಇದನ್ನೂ ಓದಿ: A R Rahman: ‘ನಾಟು ನಾಟು ಹಾಡಿಗೆ ಆಸ್ಕರ್​ ಮಾತ್ರವಲ್ಲ, ಗ್ರ್ಯಾಮಿ ಪ್ರಶಸ್ತಿ ಕೂಡ ಬರಬೇಕು’: ಎ.ಆರ್​. ರೆಹಮಾನ್​

2020ರ ಡಿಸೆಂಬರ್​ನಲ್ಲಿ ರೆಹಮಾನ್ ತಾಯಿ ಕರೀಮಾ ಬೇಗಮ್ ನಿಧನ ಹೊಂದಿದರು. ಈ ವೇಳೆ ತಾಯಿ ಆಸ್ಕರ್​ ಟ್ರೋಫಿಯನ್ನು ಎಲ್ಲಿಟ್ಟಿದ್ದಾರೆ ಎನ್ನುವ ಗೊಂದಲ ರೆಹಮಾನ್​ಗೆ ಕಾಡಿತ್ತು. ಇದಕ್ಕಾಗಿ ಅವರು ಸಾಕಷ್ಟು ಹುಡುಕಾಡಿದ್ದರು. ಆದರೆ, ಈ ಪ್ರಶಸ್ತಿ ಸಿಗಲೇ ಇಲ್ಲ. ಕೆಲ ಸಮಯದ ನಂತರ ಅದು ಮತ್ತೊಂದು ಕಬೋರ್ಡ್​ನಲ್ಲಿ ಸಿಕ್ಕಿತ್ತು. ಈ ವಿಚಾರವನ್ನು ರೆಹಮಾನ್ ಸಂದರ್ಶನದಲ್ಲಿ ಈ ಮೊದಲು ಹೇಳಿಕೊಂಡಿದ್ದರು.

ಶುಭಾಶಯ ತಿಳಿಸಿದ ರೆಹಮಾನ್

ಆಸ್ಕರ್ ಗೆದ್ದ ಎಂ.ಎಂ ಕೀರವಾಣಿ ಹಾಗೂ ಕಾರ್ತಿಕಿ ಗೊನ್ಸಾಲ್ವೆಸ್​ ಅವರಿಗೆ ರೆಹಮಾನ್ ಅವರು ಟ್ವಿಟರ್ ಮೂಲಕ ಶುಭಾಶಯ ತಿಳಿಸಿದ್ದಾರೆ. ಒರಿಜಿನಲ್ ಸಾಂಗ್ ಹಾಗೂ ಡಾಕ್ಯುಮೆಂಟರಿ ಶಾರ್ಟ್ ಫಿಲ್ಮ್​ ವಿಭಾಗದಲ್ಲಿ ಭಾರತಕ್ಕೆ ಪ್ರಶಸ್ತಿ ತಂದ ಮೊದಲಿಗರು ಎನ್ನುವ ಖ್ಯಾತಿ ಇವರಿಗೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:16 am, Tue, 14 March 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?