ಆಸ್ಕರ್ ಟ್ರೋಫಿಯನ್ನು ಕಳೆದು ಹಾಕಿದ್ದ ಎ.ಆರ್​. ರೆಹಮಾನ್; ನಂತರ ಅದು ಸಿಕ್ಕಿದ್ದೆಲ್ಲಿ?

AR Rahman: ‘ಸ್ಲಮ್​ಡಾಗ್​ ಮಿಲಿಯನೇರ್’​ ಚಿತ್ರ 2008ರಲ್ಲಿ ರಿಲೀಸ್ ಆಯಿತು. ಇದು ರೆಹಮಾನ್ ವೃತ್ತಿಜೀವನದಲ್ಲಿ ಮಹತ್ವದ ಸಿನಿಮಾ ಎನಿಸಿಕೊಂಡಿದೆ.

ಆಸ್ಕರ್ ಟ್ರೋಫಿಯನ್ನು ಕಳೆದು ಹಾಕಿದ್ದ ಎ.ಆರ್​. ರೆಹಮಾನ್; ನಂತರ ಅದು ಸಿಕ್ಕಿದ್ದೆಲ್ಲಿ?
ಎಆರ್​ ರೆಹಮಾನ್

Updated on: Mar 14, 2023 | 7:36 AM

ಮಾರ್ಚ್ 13ರಂದು ನಡೆದ 95ನೇ ಸಾಲಿನ ಅಕಾಡೆಮಿ ಅವಾರ್ಡ್ಸ್​ (Academy Awards) ಕಾರ್ಯಕ್ರಮದಲ್ಲಿ ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಬಂದಿವೆ. ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ (Naatu Naatu Song) ಹಾಡು ಹಾಗೂ ‘ದಿ ಎಲಿಫೆಂಟ್ ವಿಸ್ಪರರ್ಸ್​’ ಡಾಕ್ಯುಮೆಂಟರಿಗೆ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಇದರಿಂದ ಭಾರತೀಯರ ಖುಷಿ ಹೆಚ್ಚಿದೆ. ಈ ಸಂದರ್ಭದಲ್ಲಿ ಹಳೆಯ ಘಟನೆಯನ್ನು ನೆನಪಿಸಿಕೊಳ್ಳಲಾಗುತ್ತಿದೆ. ‘ಸ್ಲಮ್ ಡಾಗ್​ ಮಿಲಿಯನೇರ್​’ ಚಿತ್ರಕ್ಕಾಗಿ ಎರಡು ಆಸ್ಕರ್ ಗೆದ್ದ ರೆಹಮಾನ್ ಅವರು ಅದನ್ನು ಕಳೆದುಕೊಂಡಿದ್ದಾರೆ! ಅದು ಹೇಗೆ ಎನ್ನುವ ವಿವರ ಇಲ್ಲಿದೆ.

ರೆಹಮಾನ್ ಅವರು ಬಹಳ ಸಣ್ಣ ವಯಸ್ಸಿಗೆ ಸಂಗೀತದ ಬಗ್ಗೆ ಆಸಕ್ತಿ ಬೆಳೆಸಿಕೊಂಡರು. ಝಾಕಿರ್​ ಹುಸೇನ್​, ಇಳಯರಾಜ, ವೈದ್ಯನಾಥನ್​, ಎಕ್​. ಶಂಕರ್​ ಜತೆ ರೆಹಮಾನ್​ ಒಳ್ಳೆಯ ಒಡನಾಟ ಹೊಂದಿದ್ದರು. ಇವರಿಂದ ರೆಹಮಾನ್​ ಸಾಕಷ್ಟು ಪ್ರಭಾವಕ್ಕೆ ಒಳಗಾಗಿದ್ದರು. 1992ರಲ್ಲಿ ತೆರೆಗೆ ಬಂದ ತಮಿಳಿನ ‘ರೋಜಾ’ ಸಿನಿಮಾದ ಹಾಡುಗಳು ಹಿಟ್ ಆದವು. ಇದಕ್ಕೆ ಸಂಗೀತ ಸಂಯೋಜನೆ ಮಾಡಿದ್ದು ರೆಹಮಾನ್. ಮೊದಲ ಸಿನಿಮಾದಲ್ಲೇ ಖ್ಯಾತಿ ಹೆಚ್ಚಿತು. ಮೊದಲ ಚಿತ್ರಕ್ಕೆ ಅವರಿಗೆ ರಾಷ್ಟ್ರಪ್ರಶಸ್ತಿ ಸಿಕ್ಕಿತು.

ಇದನ್ನೂ ಓದಿ
‘ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ಆಸ್ಕರ್​ಗೆ ಹೋದ್ರೆ ಭಾರತಕ್ಕೆ ಮುಜುಗರ; ಇದು ದ್ವೇಷ ಹಬ್ಬಿಸುವ ಕಸ’: ಕೇಳಿಬಂತು ಕಟು ಟೀಕೆ
Aamir Khan: ವಿರೋಧದ ನಡುವೆಯೂ ‘ಆಸ್ಕರ್​’ ಗಮನ ಸೆಳೆದ ‘ಲಾಲ್​ ಸಿಂಗ್​ ಚಡ್ಡಾ’; ಆಮಿರ್​ ಖಾನ್​ ಫ್ಯಾನ್ಸ್​ ಖುಷ್​
ಪತ್ನಿಗಾಗಿ ನಟನ ಕೆನ್ನೆಗೆ ಬಾರಿಸಿದ್ದ ವಿಲ್​ ಸ್ಮಿತ್​ಗೆ ಆಸ್ಕರ್​ನಿಂದ 10 ವರ್ಷ ಬ್ಯಾನ್​; ಅಕಾಡೆಮಿ ನಿರ್ಧಾರ
ಆಸ್ಕರ್​ ವೇದಿಕೆಯಲ್ಲಿ ನಟ ಕ್ರಿಸ್​ ರಾಕ್​ ಕೆನ್ನೆಗೆ ಹೊಡೆದ ವಿಲ್​ ಸ್ಮಿತ್​ ಬಗ್ಗೆ ತಾಯಿಯ ಪ್ರತಿಕ್ರಿಯೆ ಏನು?

‘ಸ್ಲಮ್​ಡಾಗ್​ ಮಿಲಿಯನೇರ್’​ ಚಿತ್ರ 2008ರಲ್ಲಿ ರಿಲೀಸ್ ಆಯಿತು. ಇದು ರೆಹಮಾನ್ ವೃತ್ತಿಜೀವನದಲ್ಲಿ ಮಹತ್ವದ ಸಿನಿಮಾ ಎನಿಸಿಕೊಂಡಿದೆ. ಈ ಚಿತ್ರಕ್ಕೆ ರೆಹಮಾನ್ ಅವರಿಗೆ ಎರಡು ಆಸ್ಕರ್ ಅವಾರ್ಡ್​ಗಳು ಲಭಿಸಿದ್ದವು. ಇದನ್ನು ರೆಹಮಾನ್ ಅವರು ತಾಯಿ ಕರೀಮಾ ಬೇಗಮ್​ಗೆ ನೀಡಿದ್ದರು. ಅವರು ಆಸ್ಕರ್​ ಟ್ರೋಫಿಯನ್ನು ಕಬೋರ್ಡ್​ನಲ್ಲಿ ಬಟ್ಟೆಮುಚ್ಚಿ ಜೋಪಾನವಾಗಿರಿಸಿದ್ದರು.

ಇದನ್ನೂ ಓದಿ: A R Rahman: ‘ನಾಟು ನಾಟು ಹಾಡಿಗೆ ಆಸ್ಕರ್​ ಮಾತ್ರವಲ್ಲ, ಗ್ರ್ಯಾಮಿ ಪ್ರಶಸ್ತಿ ಕೂಡ ಬರಬೇಕು’: ಎ.ಆರ್​. ರೆಹಮಾನ್​

2020ರ ಡಿಸೆಂಬರ್​ನಲ್ಲಿ ರೆಹಮಾನ್ ತಾಯಿ ಕರೀಮಾ ಬೇಗಮ್ ನಿಧನ ಹೊಂದಿದರು. ಈ ವೇಳೆ ತಾಯಿ ಆಸ್ಕರ್​ ಟ್ರೋಫಿಯನ್ನು ಎಲ್ಲಿಟ್ಟಿದ್ದಾರೆ ಎನ್ನುವ ಗೊಂದಲ ರೆಹಮಾನ್​ಗೆ ಕಾಡಿತ್ತು. ಇದಕ್ಕಾಗಿ ಅವರು ಸಾಕಷ್ಟು ಹುಡುಕಾಡಿದ್ದರು. ಆದರೆ, ಈ ಪ್ರಶಸ್ತಿ ಸಿಗಲೇ ಇಲ್ಲ. ಕೆಲ ಸಮಯದ ನಂತರ ಅದು ಮತ್ತೊಂದು ಕಬೋರ್ಡ್​ನಲ್ಲಿ ಸಿಕ್ಕಿತ್ತು. ಈ ವಿಚಾರವನ್ನು ರೆಹಮಾನ್ ಸಂದರ್ಶನದಲ್ಲಿ ಈ ಮೊದಲು ಹೇಳಿಕೊಂಡಿದ್ದರು.

ಶುಭಾಶಯ ತಿಳಿಸಿದ ರೆಹಮಾನ್

ಆಸ್ಕರ್ ಗೆದ್ದ ಎಂ.ಎಂ ಕೀರವಾಣಿ ಹಾಗೂ ಕಾರ್ತಿಕಿ ಗೊನ್ಸಾಲ್ವೆಸ್​ ಅವರಿಗೆ ರೆಹಮಾನ್ ಅವರು ಟ್ವಿಟರ್ ಮೂಲಕ ಶುಭಾಶಯ ತಿಳಿಸಿದ್ದಾರೆ. ಒರಿಜಿನಲ್ ಸಾಂಗ್ ಹಾಗೂ ಡಾಕ್ಯುಮೆಂಟರಿ ಶಾರ್ಟ್ ಫಿಲ್ಮ್​ ವಿಭಾಗದಲ್ಲಿ ಭಾರತಕ್ಕೆ ಪ್ರಶಸ್ತಿ ತಂದ ಮೊದಲಿಗರು ಎನ್ನುವ ಖ್ಯಾತಿ ಇವರಿಗೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:16 am, Tue, 14 March 23

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us