AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AR Ameen: ಕೂದಲೆಳೆ ಅಂತರದಲಲ್ಲಿ ಪಾರಾದ ರೆಹಮಾನ್ ಪುತ್ರ, ಶಾಕ್​ನಿಂದ ಹೊರಬರಲಾಗುತ್ತಿಲ್ಲವೆಂದು ಅಳಲು

ಎ.ಆರ್.ರೆಹಮಾನ್ ಪುತ್ರ ಎಆರ್ ಅಮೀನ್ ಅಪಘಾತವೊಂದರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಅಪಘಾತ ಹೇಗೆ ಸಂಭವಿಸಿತು ಎಂಬುದನ್ನು ಚಿತ್ರ ಸಮೇತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

AR Ameen: ಕೂದಲೆಳೆ ಅಂತರದಲಲ್ಲಿ ಪಾರಾದ ರೆಹಮಾನ್ ಪುತ್ರ, ಶಾಕ್​ನಿಂದ ಹೊರಬರಲಾಗುತ್ತಿಲ್ಲವೆಂದು ಅಳಲು
ಎಆರ್ ಅಮೀನ್
ಮಂಜುನಾಥ ಸಿ.
|

Updated on:Mar 05, 2023 | 8:29 PM

Share

ಆಸ್ಕರ್ (Oscar) ವಿಜೇತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ (AR Rahaman) ಪುತ್ರ ಎಆರ್ ಅಮೀನ್ (AR Ameen) ಭೀಕರ ಅಪಘಾತವೊಂದರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಅಪಘಾತ ಹೇಗೆ ಸಂಭವಿಸಿತು ಎಂಬುದನ್ನು ಚಿತ್ರ ಸಮೇತ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿದ್ದು, ಆ ಶಾಕ್​ನಿಂದ ಹೊರಗೆ ಬರಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

”ದೇವರು, ನನ್ನ ಪೋಷಕರು, ಕುಟುಂಬ, ಹಿತೈಷಿಗಳು ಹಾಗೂ ನನ್ನ ಆಧ್ಯಾತ್ಮಿಕ ಗುರುಗಳಿಗೆ ನಾನು ಧನ್ಯವಾದ ಹೇಳುತ್ತೇನೆ. ಅವರ ಹಾರೈಕೆಗಳಿಂದಲೇ ನಾನು ಇಂದು ಜೀವಂತವಾಗಿದ್ದೇನೆ. ಮೂರು ದಿನಗಳ ಹಿಂದೆ ಹಾಡೊಂದರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದೆ. ನನ್ನ ತಂಡ ವಹಿಸಿದ್ದ ಸುರಕ್ಷತಾ ಕ್ರಮಗಳ ಮೇಲೆ ನಂಬಿಕೆ ಇಟ್ಟು ವೇದಿಕೆ ಏರಿ ಕ್ಯಾಮೆರಾ ನೋಡುತ್ತಾ ನಾನು ನನ್ನ ಪರ್ಫಾಮೆನ್ಸ್ ಕಡೆ ಗಮನ ವಹಿಸಿದ್ದೆ. ಆಗ ಕ್ರೇನ್​ಗೆ ಕಟ್ಟಲಾಗಿದ್ದ ರಿಗ್, ಜೂಮರ್ ಇತ್ಯಾದಿಗಳು ಕೆಳಗೆ ಬಿದ್ದವು. ಕೆಲವು ಇಂಚು ಹಿಂದೆ-ಮುಂದೆ ಅಥವಾ ಕೆಲವು ಸೆಕೆಂಡ್ ತಡವಾಗಿದ್ದರೂ ಆ ಕಬ್ಬಿಣದ ರಿಗ್, ಗಾಜಿನ ಜೂಮರ್ ನೇರವಾಗಿ ನನ್ನ ತಲೆಯ ಮೇಲೆ ಬೀಳುತ್ತಿತ್ತು. ಈ ಅಪಘಾತದ ಆಘಾತದಿಂದ ನಾನು ಹಾಗೂ ನನ್ನ ತಂಡ ಶಾಕ್​ಗೆ ಒಳಗಾಗಿದ್ದೇವೆ. ಅದರಿಂದ ಹೊರಬರಲು ನಮಗೆ ಆಗುತ್ತಿಲ್ಲ ಎಂದು ಅಮೀನ್ ಬರೆದುಕೊಂಡಿದ್ದಾರೆ.

ಘಟನೆಯ ಕೆಲವು ಚಿತ್ರಗಳನ್ನು ಅಮೀನ್ ಹಂಚಿಕೊಂಡಿದ್ದು, ಕ್ರೇನ್​ಗೆ ಕಟ್ಟಲಾಗಿದ್ದ ಕಬ್ಬಿಣದ ಸ್ಟ್ಯಾಂಡ್ ವೇದಿಕೆ ಮೇಲೆ ಬಿದ್ದಿದೆ. ಅದನ್ನು ಹಿಡಿದುಕೊಂಡಿದ್ದ ಕ್ರೇನ್​ನ ಭಾಗವೂ ವೇದಿಕೆಗೆ ಬಿದ್ದಿದೆ. ಕ್ರೇನ್​ಗೆ ಕಟ್ಟಲಾಗಿದ್ದ ಗಾಜಿನ ಜೂಮರ್​ಗಳು ಸಹ ವೇದಿಕೆ ಮೇಲೆ ಬಿದ್ದು ಪುಡಿ-ಪುಡಿ ಆಗಿವೆ. ಘಟನೆಗೆ ಮುಂಚಿನ ಹಾಗೂ ಘಟನೆಯ ಬಳಿಕದ ಚಿತ್ರಗಳನ್ನು ಅಮೀನ್ ಇನ್​ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ.

ಅಮೀನ್ ಹಾಡುಗಾರರಾಗಿದ್ದು ಈಗಾಗಲೇ ಮೂರು ಆಲ್ಬಂಗಳನ್ನು ಬಿಡುಗಡೆ ಮಾಡಿದ್ದಾರೆ ಹಾಗೂ ತಂದೆ ಎ.ಆರ್.ರೆಹಮಾನ್ ಸಂಗೀತ ನೀಡಿರುವ ಒಂದು ಇಂಗ್ಲೀಷ್ ಸಿನಿಮಾ ಸೇರಿದಂತೆ ತಮಿಳು, ಹಿಂದಿ ಸಿನಿಮಾಗಳಿಗೆ ಹಾಡು ಹಾಡಿದ್ದಾರೆ. ಬೇರೆ ಸಂಗೀತ ನಿರ್ದೇಶಕರ ಹಾಡುಗಳಿಗೂ ದನಿ ನೀಡಿದ್ದಾರೆ. ಲೈವ್ ಕಾನ್ಸರ್ಟ್​ಗಳನ್ನು ಸಹ ನೀಡುತ್ತಾರೆ. ಇದೀಗ ತಮ್ಮದೇ ಹೊಸ ಆಲ್ಬಂಗಾಗಿ ಚಿತ್ರೀಕರಣ ಮಾಡುವಾಗ ಈ ಅವಘಡ ಸಂಭವಿಸಿದೆ.

ಅಮೀನ್​ರ ಪೋಸ್ಟ್​ಗೆ ಸ್ಪಂದಿಸಿರುವ ಕೆಲವು ಸೆಲೆಬ್ರಿಟಿಗಳು ದೇವರಿಗೆ ಧನ್ಯವಾದ ಹೇಳಿದ್ದಾರೆ. ಹೆಚ್ಚು ಜಾಗರೂಕರಾಗಿರುವಂತೆ ಸಲಹೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Sun, 5 March 23

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್