AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​-ಹಮಾಸ್​ ಯುದ್ಧದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​​​ ಮಾಡಿದ್ದಕ್ಕೆ ನಟಿಯ ಬಂಧನ

ಅಕ್ಟೋಬರ್​ 7ರಂದು ಇಸ್ರೇಲ್​ ಮೇಲೆ ಹಮಾಸ್​ ನಡೆಸಿದ ದಾಳಿಯ ಫೋಟೋವನ್ನು ಮೈಸಾ ಅದ್ಬೆಲ್​ ಹದಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ಹಮಾಸ್​ ಉಗ್ರರು ಬುಲ್ಡೋಜರ್​ ಬಳಸಿ ಇಸ್ರೇಲ್​ ಗಡಿಯ ಬೇಲಿಯನ್ನು ಮುರಿದು ನುಗ್ಗುತ್ತಿರುವ ದೃಶ್ಯ ಇದರಲ್ಲಿ ಇದೆ. ಇದರ ಕ್ಯಾಪ್ಷನ್​ಗೂ ಆಕ್ಷೇಪ ವ್ಯಕ್ತವಾಗಿದೆ.

ಇಸ್ರೇಲ್​-ಹಮಾಸ್​ ಯುದ್ಧದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​​​ ಮಾಡಿದ್ದಕ್ಕೆ ನಟಿಯ ಬಂಧನ
ಮೈಸಾ ಅದ್ಬೆಲ್​ ಹದಿ
Follow us
ಮದನ್​ ಕುಮಾರ್​
|

Updated on:Oct 25, 2023 | 2:49 PM

ಹಮಾಸ್​ ಉಗ್ರರು ಮತ್ತು ಇಸ್ರೇಲ್​ (Israel) ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಸಾವಿರಾರು ಜನರ ಸಾವು ಸಂಭವಿಸಿದೆ. ಈ ಯುದ್ಧಕ್ಕೆ (Israel-Hamas War) ಸಂಬಂಧಿಸಿದಂತೆ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಕೆಲವು ಸೆಲೆಬ್ರಿಟಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಳ್ಳುತ್ತಿದ್ದಾರೆ. ಆಕ್ಷೇಪಾರ್ಹ ರೀತಿಯಲ್ಲಿ ಪೋಸ್ಟ್​ ಮಾಡಿದ ಅನೇಕರನ್ನು ಬಂಧಿಸಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿವಾದಾತ್ಮಕ ಪೋಸ್ಟ್​ ಮಾಡಿದ್ದಕ್ಕಾಗಿ ಅರಬ್​-ಇಸ್ರೇಲಿ ನಟಿ ಮೈಸಾ ಅಬ್ದೆಲ್​ ಹದಿ (Maisa Abdel Hadi) ಅವರನ್ನು ಸೋಮವಾರ (ಅಕ್ಟೋಬರ್​ 23) ಬಂಧಿಸಲಾಗಿದೆ. ಭಯೋತ್ಪಾದನೆಗೆ ಪ್ರಚೋದನೆ ನೀಡುವ ರೀತಿಯಲ್ಲಿ ಅವರು ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ಟೋಬರ್​ 25ರ ತನಕ ಅವರನ್ನು ವಶದಲ್ಲಿ ಇರಿಸಿಕೊಳ್ಳಲಾಗುವುದು ಎಂಬ ಮಾಹಿತಿ ಸಿಕ್ಕಿದೆ.

ಇಸ್ರೇಲ್​ನ ನಝರತ್​ ನಗರದಲ್ಲಿ ಮೈಸಾ ಅದ್ಬೆಲ್​ ಹದಿ ವಾಸಿಸುತ್ತಿದ್ದಾರೆ. ಅಕ್ಟೋಬರ್​ 7ರಂದು ಇಸ್ರೇಲ್​ ಮೇಲೆ ಹಮಾಸ್​ ನಡೆಸಿದ ದಾಳಿಯ ಫೋಟೋವನ್ನು ಮೈಸಾ ಅದ್ಬೆಲ್​ ಹದಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ಹಮಾಸ್​ ಉಗ್ರರು ಬುಲ್ಡೋಜರ್​ ಬಳಸಿ ಇಸ್ರೇಲ್​ ಗಡಿಯ ಬೇಲಿಯನ್ನು ಮುರಿದು ನುಗ್ಗುತ್ತಿರುವ ದೃಶ್ಯ ಇದರಲ್ಲಿ ಇದೆ. ‘ಬರ್ಲಿನ್​ ಶೈಲಿಯಲ್ಲಿ ಹೋಗೋಣ’ ಎಂದು ಅವರು ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದರು. ಇದು ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಿದೆ ಎಂದು ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಹಮಾಸ್-ಇಸ್ರೇಲ್ ಸಂಘರ್ಷ: ಇಸ್ರೇಲ್​ ತನ್ನದೇ ಆದ ನಿರ್ಧಾರ ತೆಗೆದುಕೊಳ್ಳಬಹುದು ಎಂದ ಜೋ ಬೈಡನ್

1989ರ ನವೆಂಬರ್​ 9ರಂದು ಲಕ್ಷಾಂತರ ಜನರು ಬರ್ಲಿನ್​ ಗೋಡೆಯನ್ನು ನಾಶಪಡಿಸಿದ್ದರು. ಅದನ್ನೇ ಉಲ್ಲೇಖವಾಗಿ ಇಟ್ಟುಕೊಂಡು ಮೈಸಾ ಅದ್ಬೆಲ್​ ಹದಿ ಅವರು ಈ ಪೋಸ್ಟ್​ ಮಾಡಿದ್ದಾರೆ. ಬರ್ಲಿನ್​ ಗೋಡೆಯನ್ನು ನಾಶಪಡಿಸಿದ ರೀತಿಯಲೇ ಇಸ್ರೇಲ್​ನ ಗಡಿಯನ್ನು ನಾಶ ಮಾಡಬೇಕು ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ. ಇದು ಭಯೋತ್ಪಾದಕ ಚಟುವಟಿಕೆಗೆ ಕುಮ್ಮಕ್ಕು ನೀಡುತ್ತದೆ ಎಂಬ ಆರೋಪ ಎದುರಾಗಿರುವುದರಿಂದ ಅವರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಇಸ್ರೇಲ್​​​-ಹಮಾಸ್​ ಸಂಘರ್ಷ: ವರಸೆ ಬದಲಿಸಿದ ಚೀನಾ, ಇಸ್ರೇಲ್​​​ಗೆ ಸ್ವಯಂ ರಕ್ಷಣೆ ಮಾಡಿಕೊಳ್ಳುವ ಹಕ್ಕಿದೆ

ಇಸ್ರೇಲ್​ ಹಮಾಸ್​ ಯುದ್ಧದಿಂದಾಗಿ ಪ್ರಾಣ ಕಳೆದುಕೊಂಡವರ ಸಂಖ್ಯೆ ಹೆಚ್ಚುತ್ತಲೇ ಇದೆ. ಸತತ 17ದಿನಗಳಿಂದ ಯುದ್ಧ ನಡೆಯುತ್ತಿದೆ. 6400ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯ ಬಗ್ಗೆ ಬೇರೆ ಬೇರೆ ದೇಶಗಳಲ್ಲಿ ಇರುವ ಸೆಲೆಬ್ರಿಟಿಗಳು ಕೂಡ ಪ್ರತಿಕ್ರಿಯಿಸಿದ್ದಾರೆ. ಕೆಲವರು ಹಮಾಸ್​ ಕೃತ್ಯವನ್ನು ಖಂಡಿಸಿದ್ದಾರೆ. ಇನ್ನೂ ಕೆಲವರು ಇಸ್ರೇಲ್​ನ ಯುದ್ಧಾಪರಾಧದ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:33 am, Wed, 25 October 23

ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ