AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​-ಹಮಾಸ್​ ಯುದ್ಧದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​​​ ಮಾಡಿದ್ದಕ್ಕೆ ನಟಿಯ ಬಂಧನ

ಅಕ್ಟೋಬರ್​ 7ರಂದು ಇಸ್ರೇಲ್​ ಮೇಲೆ ಹಮಾಸ್​ ನಡೆಸಿದ ದಾಳಿಯ ಫೋಟೋವನ್ನು ಮೈಸಾ ಅದ್ಬೆಲ್​ ಹದಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ಹಮಾಸ್​ ಉಗ್ರರು ಬುಲ್ಡೋಜರ್​ ಬಳಸಿ ಇಸ್ರೇಲ್​ ಗಡಿಯ ಬೇಲಿಯನ್ನು ಮುರಿದು ನುಗ್ಗುತ್ತಿರುವ ದೃಶ್ಯ ಇದರಲ್ಲಿ ಇದೆ. ಇದರ ಕ್ಯಾಪ್ಷನ್​ಗೂ ಆಕ್ಷೇಪ ವ್ಯಕ್ತವಾಗಿದೆ.

ಇಸ್ರೇಲ್​-ಹಮಾಸ್​ ಯುದ್ಧದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​​​ ಮಾಡಿದ್ದಕ್ಕೆ ನಟಿಯ ಬಂಧನ
ಮೈಸಾ ಅದ್ಬೆಲ್​ ಹದಿ
ಮದನ್​ ಕುಮಾರ್​
|

Updated on:Oct 25, 2023 | 2:49 PM

Share

ಹಮಾಸ್​ ಉಗ್ರರು ಮತ್ತು ಇಸ್ರೇಲ್​ (Israel) ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಸಾವಿರಾರು ಜನರ ಸಾವು ಸಂಭವಿಸಿದೆ. ಈ ಯುದ್ಧಕ್ಕೆ (Israel-Hamas War) ಸಂಬಂಧಿಸಿದಂತೆ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಕೆಲವು ಸೆಲೆಬ್ರಿಟಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಳ್ಳುತ್ತಿದ್ದಾರೆ. ಆಕ್ಷೇಪಾರ್ಹ ರೀತಿಯಲ್ಲಿ ಪೋಸ್ಟ್​ ಮಾಡಿದ ಅನೇಕರನ್ನು ಬಂಧಿಸಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿವಾದಾತ್ಮಕ ಪೋಸ್ಟ್​ ಮಾಡಿದ್ದಕ್ಕಾಗಿ ಅರಬ್​-ಇಸ್ರೇಲಿ ನಟಿ ಮೈಸಾ ಅಬ್ದೆಲ್​ ಹದಿ (Maisa Abdel Hadi) ಅವರನ್ನು ಸೋಮವಾರ (ಅಕ್ಟೋಬರ್​ 23) ಬಂಧಿಸಲಾಗಿದೆ. ಭಯೋತ್ಪಾದನೆಗೆ ಪ್ರಚೋದನೆ ನೀಡುವ ರೀತಿಯಲ್ಲಿ ಅವರು ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ಟೋಬರ್​ 25ರ ತನಕ ಅವರನ್ನು ವಶದಲ್ಲಿ ಇರಿಸಿಕೊಳ್ಳಲಾಗುವುದು ಎಂಬ ಮಾಹಿತಿ ಸಿಕ್ಕಿದೆ.

ಇಸ್ರೇಲ್​ನ ನಝರತ್​ ನಗರದಲ್ಲಿ ಮೈಸಾ ಅದ್ಬೆಲ್​ ಹದಿ ವಾಸಿಸುತ್ತಿದ್ದಾರೆ. ಅಕ್ಟೋಬರ್​ 7ರಂದು ಇಸ್ರೇಲ್​ ಮೇಲೆ ಹಮಾಸ್​ ನಡೆಸಿದ ದಾಳಿಯ ಫೋಟೋವನ್ನು ಮೈಸಾ ಅದ್ಬೆಲ್​ ಹದಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ಹಮಾಸ್​ ಉಗ್ರರು ಬುಲ್ಡೋಜರ್​ ಬಳಸಿ ಇಸ್ರೇಲ್​ ಗಡಿಯ ಬೇಲಿಯನ್ನು ಮುರಿದು ನುಗ್ಗುತ್ತಿರುವ ದೃಶ್ಯ ಇದರಲ್ಲಿ ಇದೆ. ‘ಬರ್ಲಿನ್​ ಶೈಲಿಯಲ್ಲಿ ಹೋಗೋಣ’ ಎಂದು ಅವರು ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದರು. ಇದು ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಿದೆ ಎಂದು ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಹಮಾಸ್-ಇಸ್ರೇಲ್ ಸಂಘರ್ಷ: ಇಸ್ರೇಲ್​ ತನ್ನದೇ ಆದ ನಿರ್ಧಾರ ತೆಗೆದುಕೊಳ್ಳಬಹುದು ಎಂದ ಜೋ ಬೈಡನ್

1989ರ ನವೆಂಬರ್​ 9ರಂದು ಲಕ್ಷಾಂತರ ಜನರು ಬರ್ಲಿನ್​ ಗೋಡೆಯನ್ನು ನಾಶಪಡಿಸಿದ್ದರು. ಅದನ್ನೇ ಉಲ್ಲೇಖವಾಗಿ ಇಟ್ಟುಕೊಂಡು ಮೈಸಾ ಅದ್ಬೆಲ್​ ಹದಿ ಅವರು ಈ ಪೋಸ್ಟ್​ ಮಾಡಿದ್ದಾರೆ. ಬರ್ಲಿನ್​ ಗೋಡೆಯನ್ನು ನಾಶಪಡಿಸಿದ ರೀತಿಯಲೇ ಇಸ್ರೇಲ್​ನ ಗಡಿಯನ್ನು ನಾಶ ಮಾಡಬೇಕು ಎಂಬರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ. ಇದು ಭಯೋತ್ಪಾದಕ ಚಟುವಟಿಕೆಗೆ ಕುಮ್ಮಕ್ಕು ನೀಡುತ್ತದೆ ಎಂಬ ಆರೋಪ ಎದುರಾಗಿರುವುದರಿಂದ ಅವರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಇಸ್ರೇಲ್​​​-ಹಮಾಸ್​ ಸಂಘರ್ಷ: ವರಸೆ ಬದಲಿಸಿದ ಚೀನಾ, ಇಸ್ರೇಲ್​​​ಗೆ ಸ್ವಯಂ ರಕ್ಷಣೆ ಮಾಡಿಕೊಳ್ಳುವ ಹಕ್ಕಿದೆ

ಇಸ್ರೇಲ್​ ಹಮಾಸ್​ ಯುದ್ಧದಿಂದಾಗಿ ಪ್ರಾಣ ಕಳೆದುಕೊಂಡವರ ಸಂಖ್ಯೆ ಹೆಚ್ಚುತ್ತಲೇ ಇದೆ. ಸತತ 17ದಿನಗಳಿಂದ ಯುದ್ಧ ನಡೆಯುತ್ತಿದೆ. 6400ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯ ಬಗ್ಗೆ ಬೇರೆ ಬೇರೆ ದೇಶಗಳಲ್ಲಿ ಇರುವ ಸೆಲೆಬ್ರಿಟಿಗಳು ಕೂಡ ಪ್ರತಿಕ್ರಿಯಿಸಿದ್ದಾರೆ. ಕೆಲವರು ಹಮಾಸ್​ ಕೃತ್ಯವನ್ನು ಖಂಡಿಸಿದ್ದಾರೆ. ಇನ್ನೂ ಕೆಲವರು ಇಸ್ರೇಲ್​ನ ಯುದ್ಧಾಪರಾಧದ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:33 am, Wed, 25 October 23

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?