AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಬ್​ ಶೇಖ್​ ಬಾಯಲ್ಲಿ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಹಾಡು; ವೈರಲ್​ ಆಯ್ತು ವಿಡಿಯೋ

ಹೌದು, ‘ವಿರಿಂಚಿನೈ ವಿರ್ಚಿಂಚಿತಿನಿ’ ಹಾಡನ್ನು ಅರಬ್​ ಶೇಖ್​ ಹಾಡಿದ್ದಾರೆ. ಇದನ್ನು ಅವರು ಟಿಕ್​ ಟಾಕ್​ನಲ್ಲಿ ಹಂಚಿಕೊಂಡಿದ್ದರು. ನಂತರ ಈ ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದೆ.

ಅರಬ್​ ಶೇಖ್​ ಬಾಯಲ್ಲಿ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಹಾಡು; ವೈರಲ್​ ಆಯ್ತು ವಿಡಿಯೋ
ಅರಬ್​ ಶೇಖ್​ ಬಾಯಲ್ಲಿ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಹಾಡು; ವೈರಲ್​ ಆಯ್ತು ವಿಡಿಯೋ
TV9 Web
| Edited By: |

Updated on: Sep 10, 2021 | 8:56 PM

Share

ಹಲವು ಭಾಷೆಗಳನ್ನು ಮಾತನಾಡುವುದನ್ನು ಕಷ್ಟಪಟ್ಟಾದರೂ ಕಲಿಯಬಹುದು. ಆದರೆ, ಬೇರೆ ಭಾಷೆಯ ಸೊಗಡನ್ನು ಅರ್ಥ ಮಾಡಿಕೊಂಡು ಹಾಡುವುದು ಅಷ್ಟು ಸುಲಭದ ಮಾತಲ್ಲ. ಆದರೆ, ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಅದು ನೀರು ಕುಡಿದಷ್ಟೇ ಸುಲಭದ ಮಾತಾಗಿತ್ತು. ಅವರು 16 ಭಾಷೆಗಳಲ್ಲಿ ಹಾಡಿ ಭೇಷ್​ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಇದಕ್ಕೆ ಈಗ ಹೊಸ ಉದಾಹರಣೆ ಒಂದು ಸಿಕ್ಕಿದೆ. ಅರಬ್​ ಶೇಖ್​ ಅವರು ಎಸ್​ಪಿಬಿ ಹಾಡನ್ನು ಹಾಡಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ.

ಹೌದು, ‘ವಿರಿಂಚಿನೈ ವಿರ್ಚಿಂಚಿತಿನಿ’ ಹಾಡನ್ನು ಅರಬ್​ ಶೇಖ್​ ಹಾಡಿದ್ದಾರೆ. ಇದನ್ನು ಅವರು ಟಿಕ್​ ಟಾಕ್​ನಲ್ಲಿ ಹಂಚಿಕೊಂಡಿದ್ದರು. ನಂತರ ಈ ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಸಾಕಷ್ಟು ವೈರಲ್​ ಆಗುತ್ತಿದೆ. ಅರಬ್​ ಶೇಖ್​ ಸುಮಧುರವಾಗಿ ಹಾಡಿದ್ದು, ಎಸ್​ಪಿಬಿ ಅಭಿಮಾನಿಗಳಿಗೆ ಇದು ಇಷ್ಟವಾಗಿದೆ. ಅಲ್ಲದೆ, ಅರಬ್​ ರಾಷ್ಟ್ರಗಳಲ್ಲಿ ಎಸ್​ಪಿಬಿಗೆ ದೊಡ್ಡ ಅಭಿಮಾನಿ ಬಳಗ ಇದೆ ಅನ್ನೋ ವಿಚಾರ ಸಾಕಷ್ಟು ಖುಷಿ ನೀಡಿದೆ.

ಎಸ್​ಪಿಬಿ ಹೆಸರಲ್ಲಿ ಹಲವು ದಾಖಲೆ ಕೂಡ ಇವೆ. ಅವರು ಒಂದೇ ದಿನ 21 ಕನ್ನಡ ಹಾಡುಗಳನ್ನು ರೆಕಾರ್ಡ್​ ಮಾಡಿ ದಾಖಲೆ ಮಾಡಿದ್ದಾರೆ. ಇಲ್ಲಿಯವರೆಗೆ ಈ ದಾಖಲೆ ಮುರಿಯೋಕೆ ಯಾರಿಂದಲೂ ಸಾಧ್ಯವಾಗಿಲ್ಲ. ಎಸ್​ಪಿಬಿ ಅವರಿಗೆ ಆರು ಬಾರಿ ರಾಷ್ಟ್ರ ಪ್ರಶಸ್ತಿಗಳು ಲಭಿಸಿವೆ. ಎಸ್​ಪಿಬಿ ಅವರು ಭೌತಿಕವಾಗಿ ಇಂದು ನಮ್ಮೊಂದಿಗಿಲ್ಲ. ಆದರೆ, ಅವರು ಸಂಗೀತ ಪ್ರೇಮಿಗಳ ಹೃದಯದಲ್ಲಿ ಸುಮಧುರ ಗೀತೆಗಳ ಮೂಲಕ ಸದಾ ಜೀವಂತವಾಗಿರುತ್ತಾರೆ. ಅವರ ಹಾಡುಗಳು ಇಂದಿಗೂ ಕೇಳುಗರ ಕಿವಿಯಲ್ಲಿ ಗುನುಗುತ್ತಿವೆ. ಅವರನ್ನು ಇಂದು ಹಾಡುಗಳ ಮೂಲಕ ಎಲ್ಲರೂ ನೆನೆಯುತ್ತಿದ್ದಾರೆ. ಅದಕ್ಕೆ ಇದು ತಾಜಾ ಉದಾಹರಣೆ.

ಇದನ್ನೂ ಓದಿ: ನಿಧನರಾಗುವುದಕ್ಕೂ ಮುನ್ನ ಎಸ್.​ಪಿ. ಬಾಲಸುಬ್ರಹ್ಮಣ್ಯಂ ಮಾಡಿದ್ದರು ದೇವರು ಮೆಚ್ಚುವ ಕೆಲಸ

ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​

Follow Us
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!