ಅರಬ್​ ಶೇಖ್​ ಬಾಯಲ್ಲಿ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಹಾಡು; ವೈರಲ್​ ಆಯ್ತು ವಿಡಿಯೋ

ಹೌದು, ‘ವಿರಿಂಚಿನೈ ವಿರ್ಚಿಂಚಿತಿನಿ’ ಹಾಡನ್ನು ಅರಬ್​ ಶೇಖ್​ ಹಾಡಿದ್ದಾರೆ. ಇದನ್ನು ಅವರು ಟಿಕ್​ ಟಾಕ್​ನಲ್ಲಿ ಹಂಚಿಕೊಂಡಿದ್ದರು. ನಂತರ ಈ ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದೆ.

ಅರಬ್​ ಶೇಖ್​ ಬಾಯಲ್ಲಿ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಹಾಡು; ವೈರಲ್​ ಆಯ್ತು ವಿಡಿಯೋ
ಅರಬ್​ ಶೇಖ್​ ಬಾಯಲ್ಲಿ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಹಾಡು; ವೈರಲ್​ ಆಯ್ತು ವಿಡಿಯೋ
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 10, 2021 | 8:56 PM

ಹಲವು ಭಾಷೆಗಳನ್ನು ಮಾತನಾಡುವುದನ್ನು ಕಷ್ಟಪಟ್ಟಾದರೂ ಕಲಿಯಬಹುದು. ಆದರೆ, ಬೇರೆ ಭಾಷೆಯ ಸೊಗಡನ್ನು ಅರ್ಥ ಮಾಡಿಕೊಂಡು ಹಾಡುವುದು ಅಷ್ಟು ಸುಲಭದ ಮಾತಲ್ಲ. ಆದರೆ, ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಅದು ನೀರು ಕುಡಿದಷ್ಟೇ ಸುಲಭದ ಮಾತಾಗಿತ್ತು. ಅವರು 16 ಭಾಷೆಗಳಲ್ಲಿ ಹಾಡಿ ಭೇಷ್​ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಇದಕ್ಕೆ ಈಗ ಹೊಸ ಉದಾಹರಣೆ ಒಂದು ಸಿಕ್ಕಿದೆ. ಅರಬ್​ ಶೇಖ್​ ಅವರು ಎಸ್​ಪಿಬಿ ಹಾಡನ್ನು ಹಾಡಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ.

ಹೌದು, ‘ವಿರಿಂಚಿನೈ ವಿರ್ಚಿಂಚಿತಿನಿ’ ಹಾಡನ್ನು ಅರಬ್​ ಶೇಖ್​ ಹಾಡಿದ್ದಾರೆ. ಇದನ್ನು ಅವರು ಟಿಕ್​ ಟಾಕ್​ನಲ್ಲಿ ಹಂಚಿಕೊಂಡಿದ್ದರು. ನಂತರ ಈ ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಸಾಕಷ್ಟು ವೈರಲ್​ ಆಗುತ್ತಿದೆ. ಅರಬ್​ ಶೇಖ್​ ಸುಮಧುರವಾಗಿ ಹಾಡಿದ್ದು, ಎಸ್​ಪಿಬಿ ಅಭಿಮಾನಿಗಳಿಗೆ ಇದು ಇಷ್ಟವಾಗಿದೆ. ಅಲ್ಲದೆ, ಅರಬ್​ ರಾಷ್ಟ್ರಗಳಲ್ಲಿ ಎಸ್​ಪಿಬಿಗೆ ದೊಡ್ಡ ಅಭಿಮಾನಿ ಬಳಗ ಇದೆ ಅನ್ನೋ ವಿಚಾರ ಸಾಕಷ್ಟು ಖುಷಿ ನೀಡಿದೆ.

ಎಸ್​ಪಿಬಿ ಹೆಸರಲ್ಲಿ ಹಲವು ದಾಖಲೆ ಕೂಡ ಇವೆ. ಅವರು ಒಂದೇ ದಿನ 21 ಕನ್ನಡ ಹಾಡುಗಳನ್ನು ರೆಕಾರ್ಡ್​ ಮಾಡಿ ದಾಖಲೆ ಮಾಡಿದ್ದಾರೆ. ಇಲ್ಲಿಯವರೆಗೆ ಈ ದಾಖಲೆ ಮುರಿಯೋಕೆ ಯಾರಿಂದಲೂ ಸಾಧ್ಯವಾಗಿಲ್ಲ. ಎಸ್​ಪಿಬಿ ಅವರಿಗೆ ಆರು ಬಾರಿ ರಾಷ್ಟ್ರ ಪ್ರಶಸ್ತಿಗಳು ಲಭಿಸಿವೆ. ಎಸ್​ಪಿಬಿ ಅವರು ಭೌತಿಕವಾಗಿ ಇಂದು ನಮ್ಮೊಂದಿಗಿಲ್ಲ. ಆದರೆ, ಅವರು ಸಂಗೀತ ಪ್ರೇಮಿಗಳ ಹೃದಯದಲ್ಲಿ ಸುಮಧುರ ಗೀತೆಗಳ ಮೂಲಕ ಸದಾ ಜೀವಂತವಾಗಿರುತ್ತಾರೆ. ಅವರ ಹಾಡುಗಳು ಇಂದಿಗೂ ಕೇಳುಗರ ಕಿವಿಯಲ್ಲಿ ಗುನುಗುತ್ತಿವೆ. ಅವರನ್ನು ಇಂದು ಹಾಡುಗಳ ಮೂಲಕ ಎಲ್ಲರೂ ನೆನೆಯುತ್ತಿದ್ದಾರೆ. ಅದಕ್ಕೆ ಇದು ತಾಜಾ ಉದಾಹರಣೆ.

ಇದನ್ನೂ ಓದಿ: ನಿಧನರಾಗುವುದಕ್ಕೂ ಮುನ್ನ ಎಸ್.​ಪಿ. ಬಾಲಸುಬ್ರಹ್ಮಣ್ಯಂ ಮಾಡಿದ್ದರು ದೇವರು ಮೆಚ್ಚುವ ಕೆಲಸ

ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್