AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಬ್​ ಶೇಖ್​ ಬಾಯಲ್ಲಿ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಹಾಡು; ವೈರಲ್​ ಆಯ್ತು ವಿಡಿಯೋ

ಹೌದು, ‘ವಿರಿಂಚಿನೈ ವಿರ್ಚಿಂಚಿತಿನಿ’ ಹಾಡನ್ನು ಅರಬ್​ ಶೇಖ್​ ಹಾಡಿದ್ದಾರೆ. ಇದನ್ನು ಅವರು ಟಿಕ್​ ಟಾಕ್​ನಲ್ಲಿ ಹಂಚಿಕೊಂಡಿದ್ದರು. ನಂತರ ಈ ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದೆ.

ಅರಬ್​ ಶೇಖ್​ ಬಾಯಲ್ಲಿ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಹಾಡು; ವೈರಲ್​ ಆಯ್ತು ವಿಡಿಯೋ
ಅರಬ್​ ಶೇಖ್​ ಬಾಯಲ್ಲಿ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಹಾಡು; ವೈರಲ್​ ಆಯ್ತು ವಿಡಿಯೋ
TV9 Web
| Edited By: |

Updated on: Sep 10, 2021 | 8:56 PM

Share

ಹಲವು ಭಾಷೆಗಳನ್ನು ಮಾತನಾಡುವುದನ್ನು ಕಷ್ಟಪಟ್ಟಾದರೂ ಕಲಿಯಬಹುದು. ಆದರೆ, ಬೇರೆ ಭಾಷೆಯ ಸೊಗಡನ್ನು ಅರ್ಥ ಮಾಡಿಕೊಂಡು ಹಾಡುವುದು ಅಷ್ಟು ಸುಲಭದ ಮಾತಲ್ಲ. ಆದರೆ, ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಅದು ನೀರು ಕುಡಿದಷ್ಟೇ ಸುಲಭದ ಮಾತಾಗಿತ್ತು. ಅವರು 16 ಭಾಷೆಗಳಲ್ಲಿ ಹಾಡಿ ಭೇಷ್​ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಇದಕ್ಕೆ ಈಗ ಹೊಸ ಉದಾಹರಣೆ ಒಂದು ಸಿಕ್ಕಿದೆ. ಅರಬ್​ ಶೇಖ್​ ಅವರು ಎಸ್​ಪಿಬಿ ಹಾಡನ್ನು ಹಾಡಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ.

ಹೌದು, ‘ವಿರಿಂಚಿನೈ ವಿರ್ಚಿಂಚಿತಿನಿ’ ಹಾಡನ್ನು ಅರಬ್​ ಶೇಖ್​ ಹಾಡಿದ್ದಾರೆ. ಇದನ್ನು ಅವರು ಟಿಕ್​ ಟಾಕ್​ನಲ್ಲಿ ಹಂಚಿಕೊಂಡಿದ್ದರು. ನಂತರ ಈ ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಸಾಕಷ್ಟು ವೈರಲ್​ ಆಗುತ್ತಿದೆ. ಅರಬ್​ ಶೇಖ್​ ಸುಮಧುರವಾಗಿ ಹಾಡಿದ್ದು, ಎಸ್​ಪಿಬಿ ಅಭಿಮಾನಿಗಳಿಗೆ ಇದು ಇಷ್ಟವಾಗಿದೆ. ಅಲ್ಲದೆ, ಅರಬ್​ ರಾಷ್ಟ್ರಗಳಲ್ಲಿ ಎಸ್​ಪಿಬಿಗೆ ದೊಡ್ಡ ಅಭಿಮಾನಿ ಬಳಗ ಇದೆ ಅನ್ನೋ ವಿಚಾರ ಸಾಕಷ್ಟು ಖುಷಿ ನೀಡಿದೆ.

ಎಸ್​ಪಿಬಿ ಹೆಸರಲ್ಲಿ ಹಲವು ದಾಖಲೆ ಕೂಡ ಇವೆ. ಅವರು ಒಂದೇ ದಿನ 21 ಕನ್ನಡ ಹಾಡುಗಳನ್ನು ರೆಕಾರ್ಡ್​ ಮಾಡಿ ದಾಖಲೆ ಮಾಡಿದ್ದಾರೆ. ಇಲ್ಲಿಯವರೆಗೆ ಈ ದಾಖಲೆ ಮುರಿಯೋಕೆ ಯಾರಿಂದಲೂ ಸಾಧ್ಯವಾಗಿಲ್ಲ. ಎಸ್​ಪಿಬಿ ಅವರಿಗೆ ಆರು ಬಾರಿ ರಾಷ್ಟ್ರ ಪ್ರಶಸ್ತಿಗಳು ಲಭಿಸಿವೆ. ಎಸ್​ಪಿಬಿ ಅವರು ಭೌತಿಕವಾಗಿ ಇಂದು ನಮ್ಮೊಂದಿಗಿಲ್ಲ. ಆದರೆ, ಅವರು ಸಂಗೀತ ಪ್ರೇಮಿಗಳ ಹೃದಯದಲ್ಲಿ ಸುಮಧುರ ಗೀತೆಗಳ ಮೂಲಕ ಸದಾ ಜೀವಂತವಾಗಿರುತ್ತಾರೆ. ಅವರ ಹಾಡುಗಳು ಇಂದಿಗೂ ಕೇಳುಗರ ಕಿವಿಯಲ್ಲಿ ಗುನುಗುತ್ತಿವೆ. ಅವರನ್ನು ಇಂದು ಹಾಡುಗಳ ಮೂಲಕ ಎಲ್ಲರೂ ನೆನೆಯುತ್ತಿದ್ದಾರೆ. ಅದಕ್ಕೆ ಇದು ತಾಜಾ ಉದಾಹರಣೆ.

ಇದನ್ನೂ ಓದಿ: ನಿಧನರಾಗುವುದಕ್ಕೂ ಮುನ್ನ ಎಸ್.​ಪಿ. ಬಾಲಸುಬ್ರಹ್ಮಣ್ಯಂ ಮಾಡಿದ್ದರು ದೇವರು ಮೆಚ್ಚುವ ಕೆಲಸ

ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ