AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಲಿ ಎಲ್​ಎಲ್​ಬಿ 3, ಅರಸಯ್ಯನ ಪ್ರೇಮ ಪ್ರಸಂಗ, ಕಮಲ್ ಶ್ರೀದೇವಿ ನಡುವೆ ಈ ವಾರ ಪೈಪೋಟಿ

ಪ್ರತಿ ಶುಕ್ರವಾರದಂತೆ ಈ ಶುಕ್ರವಾರ (ಸೆಪ್ಟೆಂಬರ್ 19) ಕೂಡ ಬಾಕ್ಸ್ ಆಫೀಸ್​​ನಲ್ಲಿ ಪೈಪೋಟಿ ಏರ್ಪಡುತ್ತಿದೆ. ಪ್ರೇಕ್ಷಕರಿಗೆ ಸಿನಿಮಾ ನೋಡಿ ಆನಂದಿಸಲು ಬೇರೆ ಬೇರೆ ಆಯ್ಕೆಗಳಿವೆ. ಕಾಮಿಡಿ, ಸಸ್ಪನ್ಸ್, ಥ್ರಿಲ್ಲರ್ ಬಯಸುವ ಪ್ರೇಕ್ಷಕರಿಗೆ ‘ಜಾಲಿ ಎಲ್​ಎಲ್​ಬಿ 3’, ‘ಅರಸಯ್ಯನ ಪ್ರೇಮ ಪ್ರಸಂಗ’, ‘ಕಮಲ್ ಶ್ರೀದೇವಿ’ ಮುಂತಾದ ಸಿನಿಮಾಗಳು ಬಿಡುಗಡೆ ಆಗುತ್ತಿವೆ.

ಜಾಲಿ ಎಲ್​ಎಲ್​ಬಿ 3, ಅರಸಯ್ಯನ ಪ್ರೇಮ ಪ್ರಸಂಗ, ಕಮಲ್ ಶ್ರೀದೇವಿ ನಡುವೆ ಈ ವಾರ ಪೈಪೋಟಿ
This Week Release
ಮದನ್​ ಕುಮಾರ್​
|

Updated on: Sep 18, 2025 | 9:27 PM

Share

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಅವರು ಬಿಡುವಿಲ್ಲದಂತೆ ಕೆಲಸ ಮಾಡುತ್ತಾರೆ. ದಣಿವರಿಯದ ಅವರು ಸಮಯ ಪಾಲನೆ ವಿಚಾರದಲ್ಲಿ ಬಹಳ ಕಟ್ಟುನಿಟ್ಟು. ಹಾಗಾಗಿ ಸರಿಯಾಗಿ ಅಂದುಕೊಂಡ ಸಮಯಕ್ಕೆ ಅವರ ಸಿನಿಮಾಗಳ ಕೆಲಸಗಳು ಮುಕ್ತಾಯವಾಗಿ ಚಿತ್ರಮಂದಿರಕ್ಕೆ ಬರುತ್ತವೆ. 2025ರಲ್ಲಿ ಅಕ್ಷಯ್ ಕುಮಾರ್ ನಟಿಸಿರುವ ‘ಸ್ಕೈ ಫೋರ್ಸ್​’, ‘ಹೌಸ್​​ಫುಲ್ 5’, ‘ಕೇಸರಿ: ಚಾಪ್ಟರ್ 2’ ಚಿತ್ರಗಳು ಈಗಾಗಲೇ ಬಿಡುಗಡೆ ಆಗಿವೆ. ಈ ವಾರ (ಸೆಪ್ಟೆಂಬರ್ 19) ಅವರ ‘ಜಾಲಿ ಎಲ್​ಎಲ್​ಬಿ 3’ (Jolly LLB 3) ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ.

‘ಜಾಲಿ ಎಲ್​ಎಲ್​​ಬಿ 3’ ಸಿನಿಮಾದಲ್ಲಿ ಕೋರ್ಟ್​ ರೂಮ್ ಡ್ರಾಮಾ ಇದೆ. ಅಕ್ಷಯ್ ಕುಮಾರ್ ಅವರು ಜೊತೆಗೆ ಅರ್ಷದ್ ವಾರ್ಸಿ ಕೂಡ ಅಭಿನಯಿಸಿದ್ದಾರೆ. ಅವರಿಬ್ಬರದ್ದೂ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವಿದೆ. ಇಬ್ಬರೂ ಕೂಡ ಲಾಯರ್ ಪಾತ್ರವನ್ನು ನಿಭಾಯಿಸಿದ್ದಾರೆ. ಚಿತ್ರದಲ್ಲಿ ಭರ್ಜರಿ ಕಾಮಿಡಿ ಇರಲಿದೆ ಎಂಬುದಕ್ಕೆ ಟ್ರೇಲರ್​​ನಲ್ಲಿ ಸಾಕ್ಷಿ ಸಿಕ್ಕಿದೆ. ಸುಭಾಷ್ ಕಪೂರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಈ ವಾರ ಬಿಡುಗಡೆ ಆಗುತ್ತಿರುವ ಸಿನಿಮಾಗಳಲ್ಲಿ ‘ಅರಸಯ್ಯನ ಪ್ರೇಮಪ್ರಸಂಗ’ ಚಿತ್ರ ಕೂಡ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಮಹಂತೇಶ್ ಹಿರೇಮಠ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರದ ಮೂಲಕ ಅವರು ಹೀರೋ ಆಗಿದ್ದಾರೆ. ಹಾಸ್ಯ ಪ್ರಧಾನ ಕಥೆಯನ್ನು ಈ ಸಿನಿಮಾ ಹೊಂದಿದೆ. ಟ್ರೇಲರ್​ ನೋಡಿದ ಎಲ್ಲರಿಗೂ ಸಿನಿಮಾ ಮೇಲೆ ನಿರೀಕ್ಷೆ ಹುಟ್ಟಿದೆ. ಪ್ರೀಮಿಯರ್ ಶೋಗಳಲ್ಲಿ ಸಿನಿಮಾ ನೋಡಿದವರಿಂದ ಮೆಚ್ಚುಗೆ ಸಿಕ್ಕಿದೆ.

ಸಚಿನ್ ಚೆಲುವರಾಯಸ್ವಾಮಿ, ಸಂಗೀತಾ ಭಟ್, ಕಿಶೋರ್ ಮುಂತಾದವರು ನಟಿಸಿರುವ ‘ಕಮಲ್ ಶ್ರೀದೇವಿ’ ಸಿನಿಮಾ ತನ್ನ ಶೀರ್ಷಿಕೆಯಿಂದಲೇ ಕೌತುಕ ಮೂಡಿಸಿತ್ತು. ಟ್ರೇಲರ್ ಬಿಡುಗಡೆ ಆದ ಬಳಿಕ ಸಿನಿಮಾದ ಕಥೆಯ ಬಗ್ಗೆ ಸುಳಿವು ಸಿಕ್ಕಿತು. ಈ ಚಿತ್ರ ಕೂಡ ಸೆ.19ರಂದು ರಿಲೀಸ್ ಆಗುತ್ತಿದೆ. ಸುನಿಲ್ ಕುಮಾರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರಾಜವರ್ಧನ್ ಅವರು ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ‘ಗುಟ್ಕಾ ತಿನ್ನೋದು ಕೆಟ್ಟದ್ದು’: ಜನರಿಗೆ ಸಂದೇಶ ನೀಡಿದ ನಟ ಅಕ್ಷಯ್ ಕುಮಾರ್

‘ಅಜೇಯ್: ದಿ ಅನ್​ಟೋಲ್ಡ್ ಸ್ಟೋರಿ ಆಫ್​ ಎ ಯೋಗಿ’, ‘ಸೋಲ್ ಮೇಟ್ಸ್’, ‘ಖಾಲಿಡಬ್ಬ’, ‘ಜೊತೆಯಾಗಿ ಹಿತವಾಗಿ’ ಮುಂತಾದ ಸಿನಿಮಾಗಳು ಕೂಡ ಸೆಪ್ಟೆಂಬರ್ 19ರಂದು ತೆರೆಕಾಣುತ್ತಿದೆ. ಯಾವ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬುದು ಶುಕ್ರವಾರ ಮೊದಲ ಶೋ ನಂತರ ತಿಳಿಯುತ್ತದೆ. ಎಲ್ಲ ಸಿನಿಮಾಗಳು ಒಂದಲ್ಲಾ ಒಂದು ರೀತಿಯಿಂದ ಪ್ರೇಕ್ಷಕರನ್ನು ಸೆಳೆಯಲು ಪ್ರಯತ್ನಿಸುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು