ದಿವ್ಯಾ ಉರುಡುಗ ಸೆಳೆತದಲ್ಲಿ ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶವನ್ನೇ ಮರೆತರಾ ಅರವಿಂದ್?

ಅಚ್ಚರಿ ಎಂಬಂತೆ ಅರವಿಂದ್​ಗೆ ದಿವ್ಯಾ ಉರುಡುಗ ಹತ್ತಿರವಾಗಿದ್ದರು. ಜೋಡಿ ಟಾಸ್ಕ್​ ಪೂರ್ಣಗೊಂಡ ನಂತರ ಇಬ್ಬರೂ ಒಟ್ಟಾಗಿರುತ್ತಿದ್ದಾರೆ. ಇವರಿಬ್ಬರ ನಡುವೆ ಬಲವಾದ ಸೆಳೆತವಿದೆ ಎಂಬುದನ್ನು ಮನೆಯವರು ಹೇಳುವುದು ಮಾತ್ರವಲ್ಲ ಇವರೂ ಒಪ್ಪಿಕೊಂಡಿದ್ದಾರೆ.

ದಿವ್ಯಾ ಉರುಡುಗ ಸೆಳೆತದಲ್ಲಿ ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶವನ್ನೇ ಮರೆತರಾ ಅರವಿಂದ್?
ದಿವ್ಯಾ ಉರುಡುಗ-ಅರವಿಂದ್ ಕೆಪಿ
Follow us
|

Updated on: Apr 01, 2021 | 7:26 PM

ಉಡುಪಿ ಮೂಲದ ಅರವಿಂದ್ ಕೆ.ಪಿ. ಬಿಗ್​ ಬಾಸ್​ ಮನೆ ಪ್ರವೇಶಿಸಿದಾಗ ವೀಕ್ಷಕರಲ್ಲಿ ಸಾಕಷ್ಟು ನಿರೀಕ್ಷೆಗಳು ಮೂಡಿದ್ದವು. ವೃತ್ತಿಪರ ಬೈಕರ್ ಆಗಿರುವ ಅವರ ಕ್ರೀಡಾಸ್ಫೂರ್ತಿ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದರು. ಅವರ ಗಾಂಭೀರ್ಯತೆ ಎಲ್ಲರಿಗೂ ಇಷ್ಟವಾಗಿತ್ತು. ಆದರೆ, ಈಗ ಅರವಿಂದ್​ ಕೆ.ಪಿ. ಬಿಗ್​ ಬಾಸ್​ ಮನೆಯಲ್ಲಿ ಮೊದಲಿನ ರೀತಿ ಇಲ್ಲ. ಪ್ರೀತಿಯ ಸೆಳೆತದಲ್ಲಿ ಅವರು ದಿಕ್ಕು ತಪ್ಪುತ್ತಿದ್ದಾರೆ. ಈ ಮಾತನ್ನು ನಾವು ಹೇಳುತ್ತಿಲ್ಲ. ಹೀಗೆ ಅಭಿಪ್ರಾಯ ಹೊರ ಹಾಕಿದ್ದು ಪ್ರೇಕ್ಷಕರು. ಬಿಗ್​ ಬಾಸ್​ ಮನೆ ಪ್ರವೇಶಿಸುವಾಗ ಒಂದು ಹೂವಿನ ಬೊಕ್ಕೆ ನೀಡಿ ಅದನ್ನು ಮನೆಯ ಒಳಗೆ ಯಾರಿಗಾದರೂ ನೀಡಿ ಎಂದು ಕಿಚ್ಚ ಸುದೀಪ್​ ಹೇಳಿದ್ದರು. ಈ ಹೂಗುಚ್ಚವನ್ನು ದಿವ್ಯಾ ಸುರೇಶ್​ಗೆ ನೀಡಬೇಕು ಎನ್ನುವುದು ಅರವಿಂದ್ ಉದ್ದೇಶವಾಗಿತ್ತು. ಆದರೆ, ಮಂಜುಗೆ ದಿವ್ಯಾ ಸುರೇಶ್​ ಹತ್ತಿರವಾಗಿದ್ದರು.

ಅಚ್ಚರಿ ಎಂಬಂತೆ ಅರವಿಂದ್​ಗೆ ದಿವ್ಯಾ ಉರುಡುಗ ಹತ್ತಿರವಾಗಿದ್ದರು. ಜೋಡಿ ಟಾಸ್ಕ್​ ಪೂರ್ಣಗೊಂಡ ನಂತರ ಇಬ್ಬರೂ ಒಟ್ಟಾಗಿರುತ್ತಿದ್ದಾರೆ. ಇವರಿಬ್ಬರ ನಡುವೆ ಬಲವಾದ ಸೆಳೆತವಿದೆ ಎಂಬುದನ್ನು ಮನೆಯವರು ಹೇಳುವುದು ಮಾತ್ರವಲ್ಲ ಇವರೂ ಒಪ್ಪಿಕೊಂಡಿದ್ದಾರೆ. ಮನೆಯಿಂದ ಹೊರ ಬಿದ್ದ ನಂತರ ಇಬ್ಬರ ಮದುವೆ ನಡೆದರೂ ಅಚ್ಚರಿ ಇಲ್ಲ ಎನ್ನುವಷ್ಟು ಇಬ್ಬರೂ ಹತ್ತಿರವಾಗಿದ್ದಾರೆ.

ಆದರೆ, ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್​ ತಮ್ಮ ಮೂಲ ಉದ್ದೇಶ ಮರೆತಿರುವುದು ಪ್ರೇಕ್ಷಕರಿಗೆ ಸ್ಪಷ್ಟವಾಗುತ್ತಿದೆ. ಯಾವುದೇ ಗೇಮ್​ ಇರಲಿ, ಅವರು ಉತ್ತಮವಾಗಿ ಆಡುತ್ತಾರೆ. ಆದರೆ, ಕೆಲವೊಮ್ಮೆ ಆಟದ ಬಗ್ಗೆ ತೋರಿಸುವುದಕ್ಕಿಂತ ಆಸಕ್ತಿಯನ್ನು ದಿವ್ಯಾಗೆ ತೋರಿಸುತ್ತಿದ್ದಾರೆ.

ಆಟ ಆಡುವಾಗ ದಿವ್ಯಾಗೆ ಯಾರಾದರೂ ಮೈಮುಟ್ಟಿದರೆ ಅಥವಾ ಅವರ ಜತೆಗೆ ತಪ್ಪಾಗಿ ನಡೆದುಕೊಂಡರೆ ಅರವಿಂದ್​ ನೇರವಾಗಿ ಅವರ ವಿರುದ್ಧ ತಿರುಗಿ ಬೀಳುತ್ತಿದ್ದಾರೆ. ನಾನು ಅವರ ಮೈಮುಟ್ಟಿದೆ ಎಂದು ನಿನಗೆ ಬೇಸರವೇ ಎಂದು ಪ್ರಶಾಂತ್​ ಸಂಬರಗಿ ಅರವಿಂದ್​ಗೆ ನೇರವಾಗಿ ಪ್ರಶ್ನಿಸಿದ್ದು ಉತ್ತಮ ಉದಾಹರಣೆ.

ಪ್ರತಿ ಸ್ಪರ್ಧಿಯೂ ತಾನು ಬಿಗ್​ ಬಾಸ್ ಗೆಲ್ಲಬೇಕು ಎನ್ನುವ ಉದ್ದೇಶ ಇಟ್ಟುಕೊಂಡು ಬಂದಿರುತ್ತಾರೆ. ಅರವಿಂದ್​ ಅವರಲ್ಲಿ ಈ ಆಸೆ ಅದಮ್ಯವಾಗಿತ್ತು. ಆದರೆ, ಇತ್ತೀಚೆಗೆ ಅವರ ಆದ್ಯತೆ ಬದಲಾಗುತ್ತಿರುವುದು ವೀಕ್ಷಕರಿಗೆ ಸ್ಪಷ್ಟವಾಗುತ್ತಿದೆ. ಈ ಬಾರಿ ಅವರು ಡೇಂಜರ್​ ಜೋನ್​ನಲ್ಲಿ ಇರುವುದರಿಂದ ಅತ್ಯುತ್ತಮ ಪರ್ಫಾರ್ಮೆನ್ಸ್​ ಕೊಡಲೇಬೇಕಿದೆ.

ಇದನ್ನೂ ಓದಿ: ಎಷ್ಟೇ ಹೇಳಿದರೂ ಬಿಗ್​ ಬಾಸ್​ ನಿಯಮ ಉಲ್ಲಂಘನೆ ಮಾಡಿದ ದಿವ್ಯಾ ಉರುಡುಗಗೆ ಯಾವ ಶಿಕ್ಷೆ?

Bigg Boss Kannada: ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ; ಯಾರದು?

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ