AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಉರುಡುಗ ಸೆಳೆತದಲ್ಲಿ ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶವನ್ನೇ ಮರೆತರಾ ಅರವಿಂದ್?

ಅಚ್ಚರಿ ಎಂಬಂತೆ ಅರವಿಂದ್​ಗೆ ದಿವ್ಯಾ ಉರುಡುಗ ಹತ್ತಿರವಾಗಿದ್ದರು. ಜೋಡಿ ಟಾಸ್ಕ್​ ಪೂರ್ಣಗೊಂಡ ನಂತರ ಇಬ್ಬರೂ ಒಟ್ಟಾಗಿರುತ್ತಿದ್ದಾರೆ. ಇವರಿಬ್ಬರ ನಡುವೆ ಬಲವಾದ ಸೆಳೆತವಿದೆ ಎಂಬುದನ್ನು ಮನೆಯವರು ಹೇಳುವುದು ಮಾತ್ರವಲ್ಲ ಇವರೂ ಒಪ್ಪಿಕೊಂಡಿದ್ದಾರೆ.

ದಿವ್ಯಾ ಉರುಡುಗ ಸೆಳೆತದಲ್ಲಿ ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶವನ್ನೇ ಮರೆತರಾ ಅರವಿಂದ್?
ದಿವ್ಯಾ ಉರುಡುಗ-ಅರವಿಂದ್ ಕೆಪಿ
ರಾಜೇಶ್ ದುಗ್ಗುಮನೆ
|

Updated on: Apr 01, 2021 | 7:26 PM

Share

ಉಡುಪಿ ಮೂಲದ ಅರವಿಂದ್ ಕೆ.ಪಿ. ಬಿಗ್​ ಬಾಸ್​ ಮನೆ ಪ್ರವೇಶಿಸಿದಾಗ ವೀಕ್ಷಕರಲ್ಲಿ ಸಾಕಷ್ಟು ನಿರೀಕ್ಷೆಗಳು ಮೂಡಿದ್ದವು. ವೃತ್ತಿಪರ ಬೈಕರ್ ಆಗಿರುವ ಅವರ ಕ್ರೀಡಾಸ್ಫೂರ್ತಿ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದರು. ಅವರ ಗಾಂಭೀರ್ಯತೆ ಎಲ್ಲರಿಗೂ ಇಷ್ಟವಾಗಿತ್ತು. ಆದರೆ, ಈಗ ಅರವಿಂದ್​ ಕೆ.ಪಿ. ಬಿಗ್​ ಬಾಸ್​ ಮನೆಯಲ್ಲಿ ಮೊದಲಿನ ರೀತಿ ಇಲ್ಲ. ಪ್ರೀತಿಯ ಸೆಳೆತದಲ್ಲಿ ಅವರು ದಿಕ್ಕು ತಪ್ಪುತ್ತಿದ್ದಾರೆ. ಈ ಮಾತನ್ನು ನಾವು ಹೇಳುತ್ತಿಲ್ಲ. ಹೀಗೆ ಅಭಿಪ್ರಾಯ ಹೊರ ಹಾಕಿದ್ದು ಪ್ರೇಕ್ಷಕರು. ಬಿಗ್​ ಬಾಸ್​ ಮನೆ ಪ್ರವೇಶಿಸುವಾಗ ಒಂದು ಹೂವಿನ ಬೊಕ್ಕೆ ನೀಡಿ ಅದನ್ನು ಮನೆಯ ಒಳಗೆ ಯಾರಿಗಾದರೂ ನೀಡಿ ಎಂದು ಕಿಚ್ಚ ಸುದೀಪ್​ ಹೇಳಿದ್ದರು. ಈ ಹೂಗುಚ್ಚವನ್ನು ದಿವ್ಯಾ ಸುರೇಶ್​ಗೆ ನೀಡಬೇಕು ಎನ್ನುವುದು ಅರವಿಂದ್ ಉದ್ದೇಶವಾಗಿತ್ತು. ಆದರೆ, ಮಂಜುಗೆ ದಿವ್ಯಾ ಸುರೇಶ್​ ಹತ್ತಿರವಾಗಿದ್ದರು.

ಅಚ್ಚರಿ ಎಂಬಂತೆ ಅರವಿಂದ್​ಗೆ ದಿವ್ಯಾ ಉರುಡುಗ ಹತ್ತಿರವಾಗಿದ್ದರು. ಜೋಡಿ ಟಾಸ್ಕ್​ ಪೂರ್ಣಗೊಂಡ ನಂತರ ಇಬ್ಬರೂ ಒಟ್ಟಾಗಿರುತ್ತಿದ್ದಾರೆ. ಇವರಿಬ್ಬರ ನಡುವೆ ಬಲವಾದ ಸೆಳೆತವಿದೆ ಎಂಬುದನ್ನು ಮನೆಯವರು ಹೇಳುವುದು ಮಾತ್ರವಲ್ಲ ಇವರೂ ಒಪ್ಪಿಕೊಂಡಿದ್ದಾರೆ. ಮನೆಯಿಂದ ಹೊರ ಬಿದ್ದ ನಂತರ ಇಬ್ಬರ ಮದುವೆ ನಡೆದರೂ ಅಚ್ಚರಿ ಇಲ್ಲ ಎನ್ನುವಷ್ಟು ಇಬ್ಬರೂ ಹತ್ತಿರವಾಗಿದ್ದಾರೆ.

ಆದರೆ, ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್​ ತಮ್ಮ ಮೂಲ ಉದ್ದೇಶ ಮರೆತಿರುವುದು ಪ್ರೇಕ್ಷಕರಿಗೆ ಸ್ಪಷ್ಟವಾಗುತ್ತಿದೆ. ಯಾವುದೇ ಗೇಮ್​ ಇರಲಿ, ಅವರು ಉತ್ತಮವಾಗಿ ಆಡುತ್ತಾರೆ. ಆದರೆ, ಕೆಲವೊಮ್ಮೆ ಆಟದ ಬಗ್ಗೆ ತೋರಿಸುವುದಕ್ಕಿಂತ ಆಸಕ್ತಿಯನ್ನು ದಿವ್ಯಾಗೆ ತೋರಿಸುತ್ತಿದ್ದಾರೆ.

ಆಟ ಆಡುವಾಗ ದಿವ್ಯಾಗೆ ಯಾರಾದರೂ ಮೈಮುಟ್ಟಿದರೆ ಅಥವಾ ಅವರ ಜತೆಗೆ ತಪ್ಪಾಗಿ ನಡೆದುಕೊಂಡರೆ ಅರವಿಂದ್​ ನೇರವಾಗಿ ಅವರ ವಿರುದ್ಧ ತಿರುಗಿ ಬೀಳುತ್ತಿದ್ದಾರೆ. ನಾನು ಅವರ ಮೈಮುಟ್ಟಿದೆ ಎಂದು ನಿನಗೆ ಬೇಸರವೇ ಎಂದು ಪ್ರಶಾಂತ್​ ಸಂಬರಗಿ ಅರವಿಂದ್​ಗೆ ನೇರವಾಗಿ ಪ್ರಶ್ನಿಸಿದ್ದು ಉತ್ತಮ ಉದಾಹರಣೆ.

ಪ್ರತಿ ಸ್ಪರ್ಧಿಯೂ ತಾನು ಬಿಗ್​ ಬಾಸ್ ಗೆಲ್ಲಬೇಕು ಎನ್ನುವ ಉದ್ದೇಶ ಇಟ್ಟುಕೊಂಡು ಬಂದಿರುತ್ತಾರೆ. ಅರವಿಂದ್​ ಅವರಲ್ಲಿ ಈ ಆಸೆ ಅದಮ್ಯವಾಗಿತ್ತು. ಆದರೆ, ಇತ್ತೀಚೆಗೆ ಅವರ ಆದ್ಯತೆ ಬದಲಾಗುತ್ತಿರುವುದು ವೀಕ್ಷಕರಿಗೆ ಸ್ಪಷ್ಟವಾಗುತ್ತಿದೆ. ಈ ಬಾರಿ ಅವರು ಡೇಂಜರ್​ ಜೋನ್​ನಲ್ಲಿ ಇರುವುದರಿಂದ ಅತ್ಯುತ್ತಮ ಪರ್ಫಾರ್ಮೆನ್ಸ್​ ಕೊಡಲೇಬೇಕಿದೆ.

ಇದನ್ನೂ ಓದಿ: ಎಷ್ಟೇ ಹೇಳಿದರೂ ಬಿಗ್​ ಬಾಸ್​ ನಿಯಮ ಉಲ್ಲಂಘನೆ ಮಾಡಿದ ದಿವ್ಯಾ ಉರುಡುಗಗೆ ಯಾವ ಶಿಕ್ಷೆ?

Bigg Boss Kannada: ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ; ಯಾರದು?

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ