AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್​ ಅಂದು ಹೇಳಿದ್ದ ಮಾತು ಇಷ್ಟು ಬೇಗ ನಿಜವಾಯ್ತೇ?

ಬಿಗ್​ ಬಾಸ್​ ಸೀಸನ್​ 8 ನಾಳೆ ಕೊನೆ ಆಗುತ್ತಿದೆ. ಕೊರೊನಾ ವೈರಸ್​ ಎರಡನೇ ಅಲೆಯ ಕಾಟ ಜೋರಾಗಿದ್ದರಿಂದ ಈ ಸೀಸನ್​ ಅರ್ಧಕ್ಕೆ ನಿಲ್ಲುತ್ತಿದೆ. ಈ ಬಗ್ಗೆ ಕಲರ್ಸ್​​ ಕನ್ನಡ ವಾಹಿನಿ ಅಧಿಕೃತ ಘೋಷಣೆ ಮಾಡಿದೆ. ಅರವಿಂದ ಕೆ.ಪಿ. ಹಿಂದಿನ ವಾರ ಹೇಳಿದ ಮಾತು ಈಗ ನಿಜವಾಗಿದೆ.

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್​ ಅಂದು ಹೇಳಿದ್ದ ಮಾತು ಇಷ್ಟು ಬೇಗ ನಿಜವಾಯ್ತೇ?
ಅರವಿಂದ್​
ರಾಜೇಶ್ ದುಗ್ಗುಮನೆ
|

Updated on: May 08, 2021 | 7:54 PM

Share

ಬಿಗ್​ ಬಾಸ್​ ಸೀಸನ್​ 8 ನಾಳೆ ಕೊನೆ ಆಗುತ್ತಿದೆ. ಕೊರೊನಾ ವೈರಸ್​ ಎರಡನೇ ಅಲೆಯ ಕಾಟ ಜೋರಾಗಿದ್ದರಿಂದ ಈ ಸೀಸನ್​ ಅರ್ಧಕ್ಕೆ ನಿಲ್ಲುತ್ತಿದೆ. ಈ ಬಗ್ಗೆ ಕಲರ್ಸ್​​ ಕನ್ನಡ ವಾಹಿನಿ ಅಧಿಕೃತ ಘೋಷಣೆ ಮಾಡಿದೆ. ಅರವಿಂದ ಕೆ.ಪಿ. ಹಿಂದಿನ ವಾರ ಹೇಳಿದ ಮಾತು ಈಗ ನಿಜವಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಕಳೆದ ವಾರ ಕ್ಯಾಪ್ಟನ್ಸಿ ಟಾಸ್ಕ್​ಗೆ ಮಂಜು ಪಾವಗಡ, ಅರವಿಂದ್ ಕೆ.ಪಿ. ಹಾಗೂ ಚಕ್ರವರ್ತಿ ಚಂದ್ರಚೂಡ್ ಆಯ್ಕೆ ಆಗಿದ್ದರು. ವೋಟಿಂಗ್ ರೀತಿಯಲ್ಲಿ ಕ್ಯಾಪ್ಟನ್ ಆಯ್ಕೆ ಮಾಡಬೇಕಿತ್ತು. ಮೂರು ಕ್ಯಾಪ್ಟನ್ಸಿ ಅಭ್ಯರ್ಥಿಗೆ ತಲಾ ಮೂರು ಮೂರು ಮತಗಳು ಬಿದ್ದು ಟಾಸ್ಕ್​ ಟೈ ಆಗಿತ್ತು. ಅರವಿಂದ್​ ಹಾಗೂ ಮಂಜು ಜತೆ ಒಳ್ಳೆಯ ಒಡನಾಟ ಹೊಂದಿದ್ದ ಶಮಂತ್ ಬ್ರೋ ಗೌಡ, ಚಕ್ರವರ್ತಿಗೆ ವೋಟ್​ ಮಾಡಿದ್ದರು. ಈ ವಿಚಾರ ಅರವಿಂದ್​ಗೆ ಬೇಸರ ತರಿಸಿತ್ತು.

ನಂತರ ಶಮಂತ್​ ಹಾಗೂ ಅರವಿಂದ್​ ಈ ಬಗ್ಗೆ ಮಾತನಾಡಿದ್ದರು. ‘ಎರಡನೇ ಬಾರಿಗೆ ನಿನ್ನನ್ನು ಕ್ಯಾಪ್ಟನ್​ ಮಾಡುವಾಗ ನಾನು ಹಾಗೂ ಮಂಜು ನಿನಗೆ ಬೆಂಬಲ ನೀಡಿದ್ದೆವು. ಅದನ್ನು ನೀನು ಮರೆಯಬಾರದಿತ್ತು. ನೀನು ವೋಟ್​ ಮಾಡಿರೋದು ನಿನ್ನ ವೈಯಕ್ತಿಕ. ಅದರ ಬಗ್ಗೆ ನಾನು ಪ್ರಶ್ನೆ ಮಾಡುವುದಿಲ್ಲ. ಆದರೆ, ನಾವು ಸಹಾಯ ಮಾಡಿದ್ದನ್ನು ನೀನು ಸ್ವಲ್ಪ ನೆನಪಿನಲ್ಲಿಟ್ಟುಕೊಳ್ಳಬೇಕಿತ್ತು’ ಎಂದು ಶಮಂತ್​ಗೆ ಅರವಿಂದ್ ಕಿವಿಮಾತು ಹೇಳಿದ್ದರು.

ಇದಕ್ಕೆ ಉತ್ತರಿಸಿದ್ದ ಶಮಂತ್​, ‘ಅದು ಏನೋ ಮಾಡೋಕೆ ಹೋಗಿ ಅವರಿಗೆ ವೋಟ್​ ಮಾಡಿಬಿಟ್ಟೆ. ದಯವಿಟ್ಟು ಕ್ಷಮಿಸಿ. ಮುಂದಿನ ವಾರ ನಿಮಗೆ ಸಪೋರ್ಟ್​ ಮಾಡ್ತೀನಿ’ ಎಂದಿದ್ದರು. ಅದಕ್ಕೆ ಅರವಿಂದ್​ ಒಂದೇ ಮಾತಿನಲ್ಲಿ ಉತ್ತರ ನೀಡಿದ್ದರು. ‘ಬಿಗ್​ ಬಾಸ್​ ಮನೆಯಲ್ಲಿ ಮುಂದಿನ ವಾರ ಅನ್ನೋದು ಯಾವಾಗಲೂ ಇರುವುದಿಲ್ಲ. ಈಗ ಏನಾಗುತ್ತಿದೆಯೋ, ಈಗ ನಾವು ಏನು ನಿರ್ಧಾರ ತೆಗೆದುಕೊಳ್ಳುತ್ತೇವೆ ಅದಿಷ್ಟೇ ಮುಖ್ಯ. ಮುಂದಿನ ವಾರ ಏನಾಗುತ್ತದೆ ಎಂದು ಯಾರೂ ಹೇಳೋಕೆ ಸಾಧ್ಯವಿಲ್ಲ’ ಎಂದು ಹೇಳಿದ್ದರು.

ಮುಂದಿನ ವಾರ ಏನಾಗುತ್ತದೆ ಎಂದು ಯಾರೂ ಹೇಳೋಕೆ ಸಾಧ್ಯವಿಲ್ಲ ಎಂಬ ಅರವಿಂದ್​ ಮಾತು ನಿಜವಾಗಿದೆ. ಬಿಗ್​ ಬಾಸ್​ ಸೀಸನ್​ 8 ಅರ್ಧಕ್ಕೆ ನಿಲ್ಲುತ್ತಿದೆ. ಹೀಗಾಗಿ, ಬಿಗ್​ ಬಾಸ್​ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳು ಈಗ ಹೊರ ಬರುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ಪ್ರಿಯರಿಗೆ ಕಹಿ ಸುದ್ದಿ; ಅರ್ಧಕ್ಕೆ ನಿಂತ ಸೀಸನ್​ 8

Bigg Boss Kannada: ಮನಸ್ಸು ಭಾರವಾಗಿದೆ, ಬಿಗ್​ ಬಾಸ್​ ನಿಲ್ಲುತ್ತಿದೆ; ನೋವು ಹೊರಹಾಕಿದ ಪರಮೇಶ್ವರ್​ ಗುಂಡ್ಕಲ್​

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು