AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಎಗರಿದ್ರೆ ನೀನು ಸತ್ತೋಗ್ತಿದ್ದೆ; ಪ್ರಶಾಂತ್​ಗೆ ಖಡಕ್​ ಎಚ್ಚರಿಕೆ ನೀಡಿದ ಅರವಿಂದ್

ಈ ಆಟ ಆಡುವಾಗ ಪ್ರಶಾಂತ್​ ಸಂಬರಗಿ ಸ್ವಲ್ಪ ಕ್ರೂರವಾಗಿ ವರ್ತಿಸಿರುವುದು ಮನೆಯವರ ಗಮನಕ್ಕೆ ಬಂದಿದೆ. ಪ್ರತಿ ಸ್ಪರ್ಧಿಯನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು, ಅವರ ಮೇಲೆ ಆಕ್ರಮಣಕಾರಿಯಾಗಿ ನಡೆದುಕೊಳ್ಳುವುದು ಮಾಡುತ್ತಿದ್ದರು.

ನಾನು ಎಗರಿದ್ರೆ ನೀನು ಸತ್ತೋಗ್ತಿದ್ದೆ; ಪ್ರಶಾಂತ್​ಗೆ ಖಡಕ್​ ಎಚ್ಚರಿಕೆ ನೀಡಿದ ಅರವಿಂದ್
ಅರವಿಂದ್​-ಪ್ರಶಾಂತ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 31, 2021 | 7:40 AM

Share

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಅರ್ಹತೆ ಪಡೆಯಲು ಬಿಗ್​ ಬಾಸ್ ಮನೆಯಲ್ಲಿ​ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ ವೇಳೆ ಮನೆಯ ಸ್ಟ್ರಾಂಗ್​ ಕಂಟೆಸ್ಟೆಂಟ್​ಗಳಾದ ಅರವಿಂದ್​ ಕೆ.ಪಿ ಹಾಗೂ ಪ್ರಶಾಂತ್​ ಸಂಬರಗಿ ನಡುವೆ ಗಂಭೀರ ಮಾತಿನ ಚಕಮಕಿ ನಡೆದಿದೆ. ಈ ಮಾತಿನ ಚಕಮಕಿ ಮಿತಿಮೀರಿ ಪ್ರಶಾಂತ್​ಗೆ ಅರವಿಂದ್ ಎಚ್ಚರಿಕೆ ಕೂಡ ನೀಡಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಎರಡು ಟೀಂಗಳನ್ನು ಮಾಡಲಾಗಿದೆ. ಒಂದು ಟೀಂಗೆ ದಿವ್ಯಾ ಕ್ಯಾಪ್ಟನ್​ ಆದರೆ, ಮತ್ತೊಂದು ತಂಡಕ್ಕೆ ಶುಭಾ ಪೂಂಜಾ ಕ್ಯಾಪ್ಟನ್​. ಇಟ್ಟಿಗೆ ಸಂಗ್ರಹಿಸಿ ಗೋಪುರ ಕಟ್ಟಿ ಅದನ್ನು ಕಾಯ್ದುಕೊಳ್ಳಬೇಕು. ಸಾಮಾನ್ಯ ಬಣ್ಣದ ಇಟ್ಟಿಗೆಗೆ 1 ಅಂಕ, ಕಲರ್​ ಫುಲ್​ ಇಟ್ಟಿಗೆಗೆ 3 ಅಂಕ.

ಈ ಆಟ ಆಡುವಾಗ ಪ್ರಶಾಂತ್​ ಸಂಬರಗಿ ಸ್ವಲ್ಪ ಕ್ರೂರವಾಗಿ ವರ್ತಿಸಿರುವುದು ಮನೆಯವರ ಗಮನಕ್ಕೆ ಬಂದಿದೆ. ಪ್ರತಿ ಸ್ಪರ್ಧಿಯನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು, ಅವರ ಮೇಲೆ ಆಕ್ರಮಣಕಾರಿಯಾಗಿ ನಡೆದುಕೊಳ್ಳುವುದು ಮಾಡುತ್ತಿದ್ದರು. ಇದು ಅರವಿಂದ್​ ಗಮನಕ್ಕೆ ಬಂದಿದೆ.

ಆರಂಭದಲ್ಲಿ ಸುಮ್ಮನೆ ಇದ್ದ ಅರವಿಂದ್​ ನಂತರ ಸಿಟ್ಟಾಗಿದ್ದಾರೆ. ಪ್ರಶಾಂತ್​ ಎರಗೋಕೆ ಬಂದಾಗ, ಏನು ಎರಗೋಕೆ ಬರ್ತೀಯಾ? ನಾನು ಎಗರಿದ್ರೆ ನೀನು ಸತ್ತೋಗ್ತಿದ್ದೆ ಎಂದು ಪ್ರಶಾಂತ್​ಗೆ ಅರವಿಂದ್ ಖಡಕ್​ ಎಚ್ಚರಿಕೆ ನೀಡಿದ್ದಾರೆ. ಆಗ ಪ್ರಶಾಂತ್​ ಇದೆಲ್ಲವೂ ಆಟದಲ್ಲಿ ಒಂದು. ನಾನು ಆಟ ಆಡುತ್ತಿದ್ದೆ ಅಷ್ಟೇ ಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಅರವಿಂದ್, ನೀವು ಆಡುವುದನ್ನು ನಾನು ನೋಡಿದ್ದೇನೆ ಎಂದು ಕೊಂಕಾಗಿ ಉತ್ತರಿಸಿದ್ದಾರೆ.

ಹಲ್ಲು ಕಳೆದುಕೊಂಡ ಮಂಜು:

ಈ ಗೇಮ್​ ಆಡುವಾಗ ರಾಜೀವ್​ ಕೈಗೆ ಮಂಜು ಮುಖ ಡಿಕ್ಕಿಯಾಗಿದೆ. ಈ ಹೊಡೆತ ಎಷ್ಟು ಗಟ್ಟಿಯಾಗಿತ್ತು ಎಂದರೆ ಮಂಜು ಅವರ ಬಾಯಲ್ಲಿದ್ದ ಒಂದು ಹಲ್ಲು ಮುರಿದೇ ಹೋಗಿದೆ. ಅಷ್ಟೇ ಅಲ್ಲ, ಅವರ ಬಾಯಿ ಇಂದ ರಕ್ತ ಕೂಡ ಹರಿದು ಬಂದಿದೆ. ಇನ್ನು, ಕಳಚಿ ಬಿದ್ದ ಹಲ್ಲು, ರಾಜೀವ್​ ಕೈ ಒಳಗೆ ನಾಟಿತ್ತು.

ಇದನ್ನೂ ಓದಿ: ಬಿಗ್​ ಬಾಸ್​ಗೆ ವೈಲ್ಡ್​ ಕಾರ್ಡ್​ ಎಂಟ್ರಿ? ಪ್ರಶಾಂತ್​ ಸಂಬರಗಿ ಬಳಿ ಇದೆ ಖತರ್ನಾಕ್​ ಐಡಿಯಾ!

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್