AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಎಗರಿದ್ರೆ ನೀನು ಸತ್ತೋಗ್ತಿದ್ದೆ; ಪ್ರಶಾಂತ್​ಗೆ ಖಡಕ್​ ಎಚ್ಚರಿಕೆ ನೀಡಿದ ಅರವಿಂದ್

ಈ ಆಟ ಆಡುವಾಗ ಪ್ರಶಾಂತ್​ ಸಂಬರಗಿ ಸ್ವಲ್ಪ ಕ್ರೂರವಾಗಿ ವರ್ತಿಸಿರುವುದು ಮನೆಯವರ ಗಮನಕ್ಕೆ ಬಂದಿದೆ. ಪ್ರತಿ ಸ್ಪರ್ಧಿಯನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು, ಅವರ ಮೇಲೆ ಆಕ್ರಮಣಕಾರಿಯಾಗಿ ನಡೆದುಕೊಳ್ಳುವುದು ಮಾಡುತ್ತಿದ್ದರು.

ನಾನು ಎಗರಿದ್ರೆ ನೀನು ಸತ್ತೋಗ್ತಿದ್ದೆ; ಪ್ರಶಾಂತ್​ಗೆ ಖಡಕ್​ ಎಚ್ಚರಿಕೆ ನೀಡಿದ ಅರವಿಂದ್
ಅರವಿಂದ್​-ಪ್ರಶಾಂತ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 31, 2021 | 7:40 AM

Share

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಅರ್ಹತೆ ಪಡೆಯಲು ಬಿಗ್​ ಬಾಸ್ ಮನೆಯಲ್ಲಿ​ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ ವೇಳೆ ಮನೆಯ ಸ್ಟ್ರಾಂಗ್​ ಕಂಟೆಸ್ಟೆಂಟ್​ಗಳಾದ ಅರವಿಂದ್​ ಕೆ.ಪಿ ಹಾಗೂ ಪ್ರಶಾಂತ್​ ಸಂಬರಗಿ ನಡುವೆ ಗಂಭೀರ ಮಾತಿನ ಚಕಮಕಿ ನಡೆದಿದೆ. ಈ ಮಾತಿನ ಚಕಮಕಿ ಮಿತಿಮೀರಿ ಪ್ರಶಾಂತ್​ಗೆ ಅರವಿಂದ್ ಎಚ್ಚರಿಕೆ ಕೂಡ ನೀಡಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಎರಡು ಟೀಂಗಳನ್ನು ಮಾಡಲಾಗಿದೆ. ಒಂದು ಟೀಂಗೆ ದಿವ್ಯಾ ಕ್ಯಾಪ್ಟನ್​ ಆದರೆ, ಮತ್ತೊಂದು ತಂಡಕ್ಕೆ ಶುಭಾ ಪೂಂಜಾ ಕ್ಯಾಪ್ಟನ್​. ಇಟ್ಟಿಗೆ ಸಂಗ್ರಹಿಸಿ ಗೋಪುರ ಕಟ್ಟಿ ಅದನ್ನು ಕಾಯ್ದುಕೊಳ್ಳಬೇಕು. ಸಾಮಾನ್ಯ ಬಣ್ಣದ ಇಟ್ಟಿಗೆಗೆ 1 ಅಂಕ, ಕಲರ್​ ಫುಲ್​ ಇಟ್ಟಿಗೆಗೆ 3 ಅಂಕ.

ಈ ಆಟ ಆಡುವಾಗ ಪ್ರಶಾಂತ್​ ಸಂಬರಗಿ ಸ್ವಲ್ಪ ಕ್ರೂರವಾಗಿ ವರ್ತಿಸಿರುವುದು ಮನೆಯವರ ಗಮನಕ್ಕೆ ಬಂದಿದೆ. ಪ್ರತಿ ಸ್ಪರ್ಧಿಯನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು, ಅವರ ಮೇಲೆ ಆಕ್ರಮಣಕಾರಿಯಾಗಿ ನಡೆದುಕೊಳ್ಳುವುದು ಮಾಡುತ್ತಿದ್ದರು. ಇದು ಅರವಿಂದ್​ ಗಮನಕ್ಕೆ ಬಂದಿದೆ.

ಆರಂಭದಲ್ಲಿ ಸುಮ್ಮನೆ ಇದ್ದ ಅರವಿಂದ್​ ನಂತರ ಸಿಟ್ಟಾಗಿದ್ದಾರೆ. ಪ್ರಶಾಂತ್​ ಎರಗೋಕೆ ಬಂದಾಗ, ಏನು ಎರಗೋಕೆ ಬರ್ತೀಯಾ? ನಾನು ಎಗರಿದ್ರೆ ನೀನು ಸತ್ತೋಗ್ತಿದ್ದೆ ಎಂದು ಪ್ರಶಾಂತ್​ಗೆ ಅರವಿಂದ್ ಖಡಕ್​ ಎಚ್ಚರಿಕೆ ನೀಡಿದ್ದಾರೆ. ಆಗ ಪ್ರಶಾಂತ್​ ಇದೆಲ್ಲವೂ ಆಟದಲ್ಲಿ ಒಂದು. ನಾನು ಆಟ ಆಡುತ್ತಿದ್ದೆ ಅಷ್ಟೇ ಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಅರವಿಂದ್, ನೀವು ಆಡುವುದನ್ನು ನಾನು ನೋಡಿದ್ದೇನೆ ಎಂದು ಕೊಂಕಾಗಿ ಉತ್ತರಿಸಿದ್ದಾರೆ.

ಹಲ್ಲು ಕಳೆದುಕೊಂಡ ಮಂಜು:

ಈ ಗೇಮ್​ ಆಡುವಾಗ ರಾಜೀವ್​ ಕೈಗೆ ಮಂಜು ಮುಖ ಡಿಕ್ಕಿಯಾಗಿದೆ. ಈ ಹೊಡೆತ ಎಷ್ಟು ಗಟ್ಟಿಯಾಗಿತ್ತು ಎಂದರೆ ಮಂಜು ಅವರ ಬಾಯಲ್ಲಿದ್ದ ಒಂದು ಹಲ್ಲು ಮುರಿದೇ ಹೋಗಿದೆ. ಅಷ್ಟೇ ಅಲ್ಲ, ಅವರ ಬಾಯಿ ಇಂದ ರಕ್ತ ಕೂಡ ಹರಿದು ಬಂದಿದೆ. ಇನ್ನು, ಕಳಚಿ ಬಿದ್ದ ಹಲ್ಲು, ರಾಜೀವ್​ ಕೈ ಒಳಗೆ ನಾಟಿತ್ತು.

ಇದನ್ನೂ ಓದಿ: ಬಿಗ್​ ಬಾಸ್​ಗೆ ವೈಲ್ಡ್​ ಕಾರ್ಡ್​ ಎಂಟ್ರಿ? ಪ್ರಶಾಂತ್​ ಸಂಬರಗಿ ಬಳಿ ಇದೆ ಖತರ್ನಾಕ್​ ಐಡಿಯಾ!

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್