AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಕೋಟಿ ಕೊಟ್ಟು ಪ್ರೇಯಸಿ ಮಲೈಕಾ ಅರೋರಾ ಮನೆ ಸಮೀಪವೇ ಸ್ಕೈ ವಿಲ್ಲಾ ಖರೀದಿಸಿದ ಅರ್ಜುನ್​ ಕಪೂರ್​

 ಟಾಪ್​ ಐಟಂ ಡ್ಯಾನ್ಸರ್​ ಆಗಿದ್ದ ಮಲೈಕಾ ಅರೋರಾ ಅವರಿಗೆ ಈಗ 47 ವರ್ಷ ವಯಸ್ಸು. ಅವರನ್ನು ಪ್ರೀತಿಸುತ್ತಿರುವ ನಟ ಅರ್ಜುನ್​ ಕಪೂರ್​ಗೆ 35ರ ಪ್ರಾಯ.

20 ಕೋಟಿ ಕೊಟ್ಟು ಪ್ರೇಯಸಿ ಮಲೈಕಾ ಅರೋರಾ ಮನೆ ಸಮೀಪವೇ ಸ್ಕೈ ವಿಲ್ಲಾ ಖರೀದಿಸಿದ ಅರ್ಜುನ್​ ಕಪೂರ್​
ಮಲೈಕಾ ಅರೋರಾ-ಅರ್ಜುನ್​ ಕಪೂರ್
ರಾಜೇಶ್ ದುಗ್ಗುಮನೆ
|

Updated on:May 30, 2021 | 6:13 PM

Share

ಬಾಲಿವುಡ್​ ನಟ ಅರ್ಜುನ್​ ಕಪೂರ್​ ಮತ್ತು ನಟಿ ಮಲೈಕಾ ಅರೋರಾ ಪರಸ್ಪರ ಪ್ರೀತಿಸುತ್ತಿದ್ದಾರೆ. ವಯಸ್ಸಿನಲ್ಲಿ ಮಲೈಕಾಗಿಂತ ಅರ್ಜುನ್​ 12 ವರ್ಷ ಚಿಕ್ಕವನಾದರೂ ಇದು ಅವರ ಪ್ರೀತಿಗೆ ಯಾವುದೇ ಅಡ್ಡಿ ಉಂಟು ಮಾಡಿಲ್ಲ. ಈಗ ಮಲೈಕಾ ಮನೆ ಸಮೀಪವೇ ದುಬಾರಿ ಬೆಲೆಯ ವಿಲ್ಲಾ ಒಂದನ್ನು ಅರ್ಜುನ್​ ಕಪೂರ್​ ಖರೀದಿಸಿದ್ದಾರೆ. ಈ ಮೂಲಕ ಇಬ್ಬರೂ ನೆರೆಹೊರೆಯವರಾಗಿದ್ದಾರೆ.

 ಟಾಪ್​ ಐಟಂ ಡ್ಯಾನ್ಸರ್​ ಆಗಿದ್ದ ಮಲೈಕಾ ಅರೋರಾ ಅವರಿಗೆ ಈಗ 47 ವರ್ಷ ವಯಸ್ಸು. ಅವರನ್ನು ಪ್ರೀತಿಸುತ್ತಿರುವ ನಟ ಅರ್ಜುನ್​ ಕಪೂರ್​ಗೆ 35ರ ಪ್ರಾಯ. ಮಲೈಕಾಗೆ ಮದುವೆ ಆಗಿ ಒಂದು ಮಗು ಕೂಡ ಇದೆ. ನಟ, ನಿರ್ಮಾಪಕ ಅರ್ಬಾಜ್​ ಖಾನ್​​ ಜೊತೆ ಮದುವೆ ಆಗಿದ್ದ ಮಲೈಕಾ ನಂತರ ವಿಚ್ಛೇದನ ಪಡೆದಿದ್ದರು. ಈಗ ಮಲೈಕಾ ಮತ್ತು ಅರ್ಜುನ್​ ಹಾಯಾಗಿ ಸುತ್ತಾಟ ನಡೆಸುತ್ತಿದ್ದಾರೆ. ಓಡಾಟಕ್ಕೆ ಹತ್ತಿರವಾಗಲಿ ಎನ್ನುವ ಕಾರಣಕ್ಕೆ ಅರ್ಜುನ್​ 20 ಕೋಟಿ ಮೌಲ್ಯದ ಐಷಾರಾಮಿ ಸ್ಕೈ ವಿಲ್ಲಾ ಕೂಡ ಖರೀದಿಸಿದ್ದಾರೆ.

ಬಾಂದ್ರಾ ಸಮೀಪದಲ್ಲೇ ಅರ್ಜುನ್​ ಕಪೂರ್​ ವಿಲ್ಲಾ ಖರೀದಿ ಮಾಡಿದ್ದಾರೆ. ಇದು ಮಲೈಕಾ ಅರೋರ ಅವರ ಲಕ್ಸುರಿ ಮನೆ ಸಮೀಪವೇ ಇದೆ. ಈ ವಿಲ್ಲಾವನ್ನು ಮಲೈಕಾ ತುಂಬಾನೇ ಇಷ್ಟಪಟ್ಟಿದ್ದರು ಎನ್ನಲಾಗಿದೆ. ಶಾರುಖ್​ ಖಾನ್​, ಸಲ್ಮಾನ್​ ಖಾನ್​, ಕರೀನಾ ಕಪೂರ್​, ರಣಬೀರ್​ ಕಪೂರ್​ ಮನೆ ಕೂಡ ಇದೇ ಭಾಗದಲ್ಲಿದೆ.

ಜೂನ್​ 26 ಅರ್ಜುನ್​ ಕಪೂರ್​ ಬರ್ತ್​ಡೇ. ಇದಕ್ಕೂ ಮೊದಲೇ ಅವರು ತಮಗೆ ತಾವೇ ಗಿಫ್ಟ್​ ಒಂದನ್ನು ಕೊಟ್ಟುಕೊಂಡಿದ್ದರು. ದುಬಾರಿ ಬೆಲೆಯ ಲ್ಯಾಂಡ್​ ರೋವರ್​ ಎಸ್​ಯುವಿ ಖರೀದಿಸಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅರ್ಜುನ್​ ಕಪೂರ್​ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದರು. ‘ನನ್ನ ಖಾಸಗಿ ಜೀವನದ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಯಾಕೆಂದರೆ ನಾವು ನಮ್ಮ ಸಂಗಾತಿಯನ್ನು ಗೌರವಿಸಬೇಕು’ಎಂದು ಅರ್ಜುನ್​ ಕಪೂರ್​ ಹೇಳಿದ್ದರು.

ಇದನ್ನೂ ಓದಿ: 12 ವರ್ಷ ಹಿರಿಯ ಮಹಿಳೆ ಜತೆಗಿನ ಪ್ರೀತಿ ಬಗ್ಗೆ ಬಾಯಿ ಬಿಟ್ಟ ಅರ್ಜುನ್​ ಕಪೂರ್​; ಬೇರೆ ಕಾರಣಕ್ಕೆ ತಂದೆ ಬೋನಿ ಕಪೂರ್​ ಕಣ್ಣೀರು

Published On - 6:06 pm, Sun, 30 May 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ