AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಕೋಟಿ ಕೊಟ್ಟು ಪ್ರೇಯಸಿ ಮಲೈಕಾ ಅರೋರಾ ಮನೆ ಸಮೀಪವೇ ಸ್ಕೈ ವಿಲ್ಲಾ ಖರೀದಿಸಿದ ಅರ್ಜುನ್​ ಕಪೂರ್​

 ಟಾಪ್​ ಐಟಂ ಡ್ಯಾನ್ಸರ್​ ಆಗಿದ್ದ ಮಲೈಕಾ ಅರೋರಾ ಅವರಿಗೆ ಈಗ 47 ವರ್ಷ ವಯಸ್ಸು. ಅವರನ್ನು ಪ್ರೀತಿಸುತ್ತಿರುವ ನಟ ಅರ್ಜುನ್​ ಕಪೂರ್​ಗೆ 35ರ ಪ್ರಾಯ.

20 ಕೋಟಿ ಕೊಟ್ಟು ಪ್ರೇಯಸಿ ಮಲೈಕಾ ಅರೋರಾ ಮನೆ ಸಮೀಪವೇ ಸ್ಕೈ ವಿಲ್ಲಾ ಖರೀದಿಸಿದ ಅರ್ಜುನ್​ ಕಪೂರ್​
ಮಲೈಕಾ ಅರೋರಾ-ಅರ್ಜುನ್​ ಕಪೂರ್
ರಾಜೇಶ್ ದುಗ್ಗುಮನೆ
|

Updated on:May 30, 2021 | 6:13 PM

Share

ಬಾಲಿವುಡ್​ ನಟ ಅರ್ಜುನ್​ ಕಪೂರ್​ ಮತ್ತು ನಟಿ ಮಲೈಕಾ ಅರೋರಾ ಪರಸ್ಪರ ಪ್ರೀತಿಸುತ್ತಿದ್ದಾರೆ. ವಯಸ್ಸಿನಲ್ಲಿ ಮಲೈಕಾಗಿಂತ ಅರ್ಜುನ್​ 12 ವರ್ಷ ಚಿಕ್ಕವನಾದರೂ ಇದು ಅವರ ಪ್ರೀತಿಗೆ ಯಾವುದೇ ಅಡ್ಡಿ ಉಂಟು ಮಾಡಿಲ್ಲ. ಈಗ ಮಲೈಕಾ ಮನೆ ಸಮೀಪವೇ ದುಬಾರಿ ಬೆಲೆಯ ವಿಲ್ಲಾ ಒಂದನ್ನು ಅರ್ಜುನ್​ ಕಪೂರ್​ ಖರೀದಿಸಿದ್ದಾರೆ. ಈ ಮೂಲಕ ಇಬ್ಬರೂ ನೆರೆಹೊರೆಯವರಾಗಿದ್ದಾರೆ.

 ಟಾಪ್​ ಐಟಂ ಡ್ಯಾನ್ಸರ್​ ಆಗಿದ್ದ ಮಲೈಕಾ ಅರೋರಾ ಅವರಿಗೆ ಈಗ 47 ವರ್ಷ ವಯಸ್ಸು. ಅವರನ್ನು ಪ್ರೀತಿಸುತ್ತಿರುವ ನಟ ಅರ್ಜುನ್​ ಕಪೂರ್​ಗೆ 35ರ ಪ್ರಾಯ. ಮಲೈಕಾಗೆ ಮದುವೆ ಆಗಿ ಒಂದು ಮಗು ಕೂಡ ಇದೆ. ನಟ, ನಿರ್ಮಾಪಕ ಅರ್ಬಾಜ್​ ಖಾನ್​​ ಜೊತೆ ಮದುವೆ ಆಗಿದ್ದ ಮಲೈಕಾ ನಂತರ ವಿಚ್ಛೇದನ ಪಡೆದಿದ್ದರು. ಈಗ ಮಲೈಕಾ ಮತ್ತು ಅರ್ಜುನ್​ ಹಾಯಾಗಿ ಸುತ್ತಾಟ ನಡೆಸುತ್ತಿದ್ದಾರೆ. ಓಡಾಟಕ್ಕೆ ಹತ್ತಿರವಾಗಲಿ ಎನ್ನುವ ಕಾರಣಕ್ಕೆ ಅರ್ಜುನ್​ 20 ಕೋಟಿ ಮೌಲ್ಯದ ಐಷಾರಾಮಿ ಸ್ಕೈ ವಿಲ್ಲಾ ಕೂಡ ಖರೀದಿಸಿದ್ದಾರೆ.

ಬಾಂದ್ರಾ ಸಮೀಪದಲ್ಲೇ ಅರ್ಜುನ್​ ಕಪೂರ್​ ವಿಲ್ಲಾ ಖರೀದಿ ಮಾಡಿದ್ದಾರೆ. ಇದು ಮಲೈಕಾ ಅರೋರ ಅವರ ಲಕ್ಸುರಿ ಮನೆ ಸಮೀಪವೇ ಇದೆ. ಈ ವಿಲ್ಲಾವನ್ನು ಮಲೈಕಾ ತುಂಬಾನೇ ಇಷ್ಟಪಟ್ಟಿದ್ದರು ಎನ್ನಲಾಗಿದೆ. ಶಾರುಖ್​ ಖಾನ್​, ಸಲ್ಮಾನ್​ ಖಾನ್​, ಕರೀನಾ ಕಪೂರ್​, ರಣಬೀರ್​ ಕಪೂರ್​ ಮನೆ ಕೂಡ ಇದೇ ಭಾಗದಲ್ಲಿದೆ.

ಜೂನ್​ 26 ಅರ್ಜುನ್​ ಕಪೂರ್​ ಬರ್ತ್​ಡೇ. ಇದಕ್ಕೂ ಮೊದಲೇ ಅವರು ತಮಗೆ ತಾವೇ ಗಿಫ್ಟ್​ ಒಂದನ್ನು ಕೊಟ್ಟುಕೊಂಡಿದ್ದರು. ದುಬಾರಿ ಬೆಲೆಯ ಲ್ಯಾಂಡ್​ ರೋವರ್​ ಎಸ್​ಯುವಿ ಖರೀದಿಸಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅರ್ಜುನ್​ ಕಪೂರ್​ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದರು. ‘ನನ್ನ ಖಾಸಗಿ ಜೀವನದ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಯಾಕೆಂದರೆ ನಾವು ನಮ್ಮ ಸಂಗಾತಿಯನ್ನು ಗೌರವಿಸಬೇಕು’ಎಂದು ಅರ್ಜುನ್​ ಕಪೂರ್​ ಹೇಳಿದ್ದರು.

ಇದನ್ನೂ ಓದಿ: 12 ವರ್ಷ ಹಿರಿಯ ಮಹಿಳೆ ಜತೆಗಿನ ಪ್ರೀತಿ ಬಗ್ಗೆ ಬಾಯಿ ಬಿಟ್ಟ ಅರ್ಜುನ್​ ಕಪೂರ್​; ಬೇರೆ ಕಾರಣಕ್ಕೆ ತಂದೆ ಬೋನಿ ಕಪೂರ್​ ಕಣ್ಣೀರು

Published On - 6:06 pm, Sun, 30 May 21

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ