AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಕೋಟಿ ಕೊಟ್ಟು ಪ್ರೇಯಸಿ ಮಲೈಕಾ ಅರೋರಾ ಮನೆ ಸಮೀಪವೇ ಸ್ಕೈ ವಿಲ್ಲಾ ಖರೀದಿಸಿದ ಅರ್ಜುನ್​ ಕಪೂರ್​

 ಟಾಪ್​ ಐಟಂ ಡ್ಯಾನ್ಸರ್​ ಆಗಿದ್ದ ಮಲೈಕಾ ಅರೋರಾ ಅವರಿಗೆ ಈಗ 47 ವರ್ಷ ವಯಸ್ಸು. ಅವರನ್ನು ಪ್ರೀತಿಸುತ್ತಿರುವ ನಟ ಅರ್ಜುನ್​ ಕಪೂರ್​ಗೆ 35ರ ಪ್ರಾಯ.

20 ಕೋಟಿ ಕೊಟ್ಟು ಪ್ರೇಯಸಿ ಮಲೈಕಾ ಅರೋರಾ ಮನೆ ಸಮೀಪವೇ ಸ್ಕೈ ವಿಲ್ಲಾ ಖರೀದಿಸಿದ ಅರ್ಜುನ್​ ಕಪೂರ್​
ಮಲೈಕಾ ಅರೋರಾ-ಅರ್ಜುನ್​ ಕಪೂರ್
ರಾಜೇಶ್ ದುಗ್ಗುಮನೆ
|

Updated on:May 30, 2021 | 6:13 PM

Share

ಬಾಲಿವುಡ್​ ನಟ ಅರ್ಜುನ್​ ಕಪೂರ್​ ಮತ್ತು ನಟಿ ಮಲೈಕಾ ಅರೋರಾ ಪರಸ್ಪರ ಪ್ರೀತಿಸುತ್ತಿದ್ದಾರೆ. ವಯಸ್ಸಿನಲ್ಲಿ ಮಲೈಕಾಗಿಂತ ಅರ್ಜುನ್​ 12 ವರ್ಷ ಚಿಕ್ಕವನಾದರೂ ಇದು ಅವರ ಪ್ರೀತಿಗೆ ಯಾವುದೇ ಅಡ್ಡಿ ಉಂಟು ಮಾಡಿಲ್ಲ. ಈಗ ಮಲೈಕಾ ಮನೆ ಸಮೀಪವೇ ದುಬಾರಿ ಬೆಲೆಯ ವಿಲ್ಲಾ ಒಂದನ್ನು ಅರ್ಜುನ್​ ಕಪೂರ್​ ಖರೀದಿಸಿದ್ದಾರೆ. ಈ ಮೂಲಕ ಇಬ್ಬರೂ ನೆರೆಹೊರೆಯವರಾಗಿದ್ದಾರೆ.

 ಟಾಪ್​ ಐಟಂ ಡ್ಯಾನ್ಸರ್​ ಆಗಿದ್ದ ಮಲೈಕಾ ಅರೋರಾ ಅವರಿಗೆ ಈಗ 47 ವರ್ಷ ವಯಸ್ಸು. ಅವರನ್ನು ಪ್ರೀತಿಸುತ್ತಿರುವ ನಟ ಅರ್ಜುನ್​ ಕಪೂರ್​ಗೆ 35ರ ಪ್ರಾಯ. ಮಲೈಕಾಗೆ ಮದುವೆ ಆಗಿ ಒಂದು ಮಗು ಕೂಡ ಇದೆ. ನಟ, ನಿರ್ಮಾಪಕ ಅರ್ಬಾಜ್​ ಖಾನ್​​ ಜೊತೆ ಮದುವೆ ಆಗಿದ್ದ ಮಲೈಕಾ ನಂತರ ವಿಚ್ಛೇದನ ಪಡೆದಿದ್ದರು. ಈಗ ಮಲೈಕಾ ಮತ್ತು ಅರ್ಜುನ್​ ಹಾಯಾಗಿ ಸುತ್ತಾಟ ನಡೆಸುತ್ತಿದ್ದಾರೆ. ಓಡಾಟಕ್ಕೆ ಹತ್ತಿರವಾಗಲಿ ಎನ್ನುವ ಕಾರಣಕ್ಕೆ ಅರ್ಜುನ್​ 20 ಕೋಟಿ ಮೌಲ್ಯದ ಐಷಾರಾಮಿ ಸ್ಕೈ ವಿಲ್ಲಾ ಕೂಡ ಖರೀದಿಸಿದ್ದಾರೆ.

ಬಾಂದ್ರಾ ಸಮೀಪದಲ್ಲೇ ಅರ್ಜುನ್​ ಕಪೂರ್​ ವಿಲ್ಲಾ ಖರೀದಿ ಮಾಡಿದ್ದಾರೆ. ಇದು ಮಲೈಕಾ ಅರೋರ ಅವರ ಲಕ್ಸುರಿ ಮನೆ ಸಮೀಪವೇ ಇದೆ. ಈ ವಿಲ್ಲಾವನ್ನು ಮಲೈಕಾ ತುಂಬಾನೇ ಇಷ್ಟಪಟ್ಟಿದ್ದರು ಎನ್ನಲಾಗಿದೆ. ಶಾರುಖ್​ ಖಾನ್​, ಸಲ್ಮಾನ್​ ಖಾನ್​, ಕರೀನಾ ಕಪೂರ್​, ರಣಬೀರ್​ ಕಪೂರ್​ ಮನೆ ಕೂಡ ಇದೇ ಭಾಗದಲ್ಲಿದೆ.

ಜೂನ್​ 26 ಅರ್ಜುನ್​ ಕಪೂರ್​ ಬರ್ತ್​ಡೇ. ಇದಕ್ಕೂ ಮೊದಲೇ ಅವರು ತಮಗೆ ತಾವೇ ಗಿಫ್ಟ್​ ಒಂದನ್ನು ಕೊಟ್ಟುಕೊಂಡಿದ್ದರು. ದುಬಾರಿ ಬೆಲೆಯ ಲ್ಯಾಂಡ್​ ರೋವರ್​ ಎಸ್​ಯುವಿ ಖರೀದಿಸಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅರ್ಜುನ್​ ಕಪೂರ್​ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದರು. ‘ನನ್ನ ಖಾಸಗಿ ಜೀವನದ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಯಾಕೆಂದರೆ ನಾವು ನಮ್ಮ ಸಂಗಾತಿಯನ್ನು ಗೌರವಿಸಬೇಕು’ಎಂದು ಅರ್ಜುನ್​ ಕಪೂರ್​ ಹೇಳಿದ್ದರು.

ಇದನ್ನೂ ಓದಿ: 12 ವರ್ಷ ಹಿರಿಯ ಮಹಿಳೆ ಜತೆಗಿನ ಪ್ರೀತಿ ಬಗ್ಗೆ ಬಾಯಿ ಬಿಟ್ಟ ಅರ್ಜುನ್​ ಕಪೂರ್​; ಬೇರೆ ಕಾರಣಕ್ಕೆ ತಂದೆ ಬೋನಿ ಕಪೂರ್​ ಕಣ್ಣೀರು

Published On - 6:06 pm, Sun, 30 May 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ