AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ವರ್ಷ ಹಿರಿಯ ಮಹಿಳೆ ಜತೆಗಿನ ಪ್ರೀತಿ ಬಗ್ಗೆ ಬಾಯಿ ಬಿಟ್ಟ ಅರ್ಜುನ್​ ಕಪೂರ್​; ಬೇರೆ ಕಾರಣಕ್ಕೆ ತಂದೆ ಬೋನಿ ಕಪೂರ್​ ಕಣ್ಣೀರು

Arjun Kapoor | Malaika Arora: ಅರ್ಜುನ್​ ಕಪೂರ್​ ಮತ್ತು ಮಲೈಕಾ ಅರೋರಾ ತಮ್ಮ ಸಂಬಂಧದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದು ಕಡಿಮೆ. ಈಗ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅರ್ಜುನ್​ ಕಪೂರ್​ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

12 ವರ್ಷ ಹಿರಿಯ ಮಹಿಳೆ ಜತೆಗಿನ ಪ್ರೀತಿ ಬಗ್ಗೆ ಬಾಯಿ ಬಿಟ್ಟ ಅರ್ಜುನ್​ ಕಪೂರ್​; ಬೇರೆ ಕಾರಣಕ್ಕೆ ತಂದೆ ಬೋನಿ ಕಪೂರ್​ ಕಣ್ಣೀರು
ಮಲೈಕಾ ಅರೋರಾ, ಅರ್ಜುನ್​ ಕಪೂರ್​, ಬೋನಿ ಕಪೂರ್​, ಶ್ರೀದೇವಿ
ಮದನ್​ ಕುಮಾರ್​
|

Updated on:May 23, 2021 | 12:53 PM

Share

ಪ್ರೀತಿ ಕುರುಡು ಅಂತಾರೆ. ಯಾವಾಗ, ಯಾರಿಗೆ ಯಾರ ಮೇಲೆ ಬೇಕಾದರೂ ಪ್ರೀತಿ ಆಗಬಹುದು. ಅದಕ್ಕೆ ಲೆಕ್ಕಾಚಾರವೇ ಇರುವುದಿಲ್ಲ. ಈ ಮಾತಿಗೆ ಪಕ್ಕಾ ಉದಾಹರಣೆ ಎಂದರೆ ಬಾಲಿವುಡ್​ ನಟ ಅರ್ಜುನ್​ ಕಪೂರ್​ ಮತ್ತು ನಟಿ ಮಲೈಕಾ ಅರೋರಾ. ಇಬ್ಬರ ನಡುವೆ ಅತಿ ಅಪರೂಪದ ಸಂಬಂಧ ಇದೆ. ಒಂದು ಕಾಲದಲ್ಲಿ ಟಾಪ್​ ಐಟಂ ಡ್ಯಾನ್ಸರ್​ ಆಗಿದ್ದ ಮಲೈಕಾ ಅರೋರಾ ಅವರಿಗೆ ಈಗ 47 ವರ್ಷ ವಯಸ್ಸು. ಅವರನ್ನು ಪ್ರೀತಿಸುತ್ತಿರುವ ನಟ ಅರ್ಜುನ್​ ಕಪೂರ್​ಗೆ 35ರ ಪ್ರಾಯ. ಈ ಬಗ್ಗೆ ಈಗ ಅರ್ಜುನ್​ ಕಪೂರ್​ ಮಾತನಾಡಿದ್ದಾರೆ.

ಅರ್ಜುನ್ ಕಪೂರ್​ ಮತ್ತು ಮಲೈಕಾ ಅರೋರಾ ತುಂಬಾ ಆತ್ಮೀಯವಾಗಿರುವ ಅನೇಕ ಫೋಟೋಗಳು ಅವರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಕಾಣಸಿಗುತ್ತವೆ. ಆದರೆ ಈ ಜೋಡಿ ತಮ್ಮ ಸಂಬಂಧದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದು ಕಡಿಮೆ. ಈಗ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅರ್ಜುನ್​ ಕಪೂರ್​ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ನನ್ನ ಖಾಸಗಿ ಜೀವನದ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಯಾಕೆಂದರೆ ನಾವು ನಮ್ಮ ಸಂಗಾತಿಯನ್ನು ಗೌರವಿಸಬೇಕು’ ಎಂದು ಅರ್ಜುನ್​ ಕಪೂರ್​ ಹೇಳಿದ್ದಾರೆ.

ನಟ, ನಿರ್ಮಾಪಕ ಅರ್ಬಾಜ್​ ಖಾನ್​​ ಜೊತೆ ಮಲೈಕಾ ಮದುವೆ ಆಗಿದ್ದರು. ಡಿವೋರ್ಸ್​ ಪಡೆದು ದೂರಾಗಿರುವ ಅವರಿಗೆ ಅರ್ಹಾನ್​ ಖಾನ್​ ಎಂಬ ಮಗ ಇದ್ದಾನೆ. ಆತನ ಬಗ್ಗೆಯೂ ಅರ್ಜುನ್​ ಕಾಳಜಿ ಹೊಂದಿದ್ದಾರೆ. ಆತನ ಬಗ್ಗೆ ಅವರಿಗೆ ಅಷ್ಟು ಕರುಣೆ ಮೂಡಲು ಕಾರಣವೂ ಇದೆ. ಅರ್ಜುನ್​ ಕಪೂರ್​ ತಂದೆ ಬೋನಿ ಕಪೂರ್ ಅವರು ತಮ್ಮ ಹೆಂಡತಿಯನ್ನು (ಮೋನಾ ಶೌರಿ ಕಪೂರ್​) ಬಿಟ್ಟು ಶ್ರೀದೇವಿಯನ್ನು ಮದುವೆ ಆದಾಗ ಅರ್ಜುನ್​ ಕಪೂರ್​ ಕಣ್ಣೀರು ಹಾಕಿದ್ದರು. ಈಗ ಅದೇ ಪರಿಸ್ಥಿತಿ ಅರ್ಹಾನ್​ ಖಾನ್​ಗೆ ಆಗಬಾರದು ಎಂಬುದು ಅರ್ಜುನ್​ ಆಶಯವಂತೆ.

ಅದೇನೇ ಇರಲಿ, ಒಂದು ಕಡೆ ಅರ್ಜುನ್​ ಕಪೂರ್​ ತಮ್ಮ ರಿಲೇಷನ್​ಶಿಪ್​ ಬಗ್ಗೆ ಮಾತನಾಡುತ್ತಿದ್ದರೆ, ಇನ್ನೊಂದು ಕಡೆ ಅವರ ತಂದೆ ಬೋನಿ ಕಪೂರ್​ ಬೇರೆ ವಿಚಾರಕ್ಕೆ ಕಣ್ಣೀರು ಹಾಕುತ್ತಿದ್ದಾರೆ. ಅಜಯ್​ ದೇವಗನ್​ ನಟನೆಯು ‘ಮೈದಾನ್​’ ಚಿತ್ರಕ್ಕೆ ಬೋನಿ ನಿರ್ಮಾಪಕರು. ಆ ಚಿತ್ರಕ್ಕಾಗಿ ಅವರು ಕೋಟ್ಯಂತರ ರೂ. ವೆಚ್ಚದಲ್ಲಿ ಹಾಕಲಾಗಿದ್ದ ಸೆಟ್​ ತೌಕ್ತೆ ಚಂಡಮಾರುತದ ಕಾರಣದಿಂದ ಸರ್ವನಾಶ ಆಗಿದೆ. ಅದರಿಂದ ಬೋನಿ ಕಪೂರ್​ಗೆ ಸಿಕ್ಕಾಪಟ್ಟೆ ನಷ್ಟ ಆಗಿದೆ. ‘ಅದನ್ನು ನೆನಪಿಸಿಕೊಂಡರೆ ನನಗೆ ಅಳುಬರುತ್ತದೆ’ ಎಂದು ಅವರು ತಲೆ ಮೇಲೆ ಕೈಹೊತ್ತುಕೊಂಡು ಕುಳಿತಿದ್ದಾರೆ.

ಇದನ್ನೂ ಓದಿ:

ಶಿಲ್ಪಾ ಶೆಟ್ಟಿ, ಮಲೈಕಾ Hottest Moms ಅಂತೆ! ಹೋಲಿಕೆಯ ವಿರುದ್ಧ ಆಕ್ರೋಶ

ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​ ಜೊತೆ ಸುತ್ತಾಡುತ್ತಿರುವ ಹುಡುಗ ಯಾರು? ಫೋಟೋ ವೈರಲ್​

Published On - 12:44 pm, Sun, 23 May 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ