AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದಿಂದ ನಿವೃತ್ತಿ ಘೋಷಿಸಿದ ಯುವ ಹಾಸ್ಯ ನಟ; ಅಭಿಮಾನಿಗಳು ಶಾಕ್​

ರಾಹುಲ್​ ರಾಮಕೃಷ್ಣ ಕೂಡ ಇದೇ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಈ ವರ್ಷ ಮಾತ್ರ ಅವರು ಚಿತ್ರರಂಗದಲ್ಲಿ ಇರಲಿದ್ದಾರಂತೆ. ಆ ಬಳಿಕ ಅವರು ಚಿತ್ರರಂಗ ತೊರೆಯಲು ನಿರ್ಧರಿಸಿದ್ದಾರೆ!

ಚಿತ್ರರಂಗದಿಂದ ನಿವೃತ್ತಿ ಘೋಷಿಸಿದ ಯುವ ಹಾಸ್ಯ ನಟ; ಅಭಿಮಾನಿಗಳು ಶಾಕ್​
ವಿಜಯ್​ ದೇವರಕೊಂಡ- ರಾಹುಲ್​
TV9 Web
| Edited By: |

Updated on: Feb 05, 2022 | 1:54 PM

Share

ಒಂದು ಸಿನಿಮಾ ಹಲವು ಕಲಾವಿದರ, ತಂತ್ರಜ್ಞರ ಬದುಕನ್ನು ಬದಲಾಯಿಸಿ ಬಿಡುತ್ತದೆ. ಇದಕ್ಕೆ ತೆಲುಗು ಕಾಮಿಡಿಯನ್​ ರಾಹುಲ್​ ರಾಮಕೃಷ್ಣ (Rahul Ramakrishna)​ ಕೂಡ ಒಬ್ಬರು. 2017ರಲ್ಲಿ ತೆರೆಗೆ ಬಂದ ‘ಅರ್ಜುನ್​ ರೆಡ್ಡಿ’ (Arjun Reddy)ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಚಿತ್ರದಲ್ಲಿ ಅರ್ಜುನ್​ ರೆಡ್ಡಿ ಗೆಳೆಯನ ಪಾತ್ರ ಮಾಡಿದ್ದರು ರಾಹುಲ್​. ಈ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡರು. ವಿಜಯ್​ ದೇವರಕೊಂಡ (Vijay Devarakonda) ನಟನೆಯ ‘ಗೀತ ಗೋವಿಂದಂ’ ಸಿನಿಮಾದಲ್ಲೂ ಅವರು ಹೀರೋನ ಗೆಳೆಯನ ಪಾತ್ರ ಮಾಡಿದ್ದರು​. ರಾಹುಲ್​ಗೆ ಈಗ ಸಾಕಷ್ಟು ಆಫರ್​ಗಳು ಬರುತ್ತಿವೆ. ಕೆಲವೇ ವರ್ಷಗಳಲ್ಲಿ ಅವರ ಜೀವನ ಬದಲಾಗಿದೆ. ಆದರೆ, ಶಾಕಿಂಗ್​ ವಿಚಾರ ಎಂದರೆ ಅವರು ಚಿತ್ರರಂಗ ತೊರೆಯೋಕೆ ನಿರ್ಧರಿಸಿದ್ದಾರೆ. ಶುಕ್ರವಾರ (ಫೆಬ್ರವರಿ 4) ರಾತ್ರಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ನಿಜಕ್ಕೂ ಶಾಕ್​ ಆಗಿದ್ದಾರೆ.

ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ ಅದನ್ನು ತೊರೆಯೋಕೆ ಯಾರೂ ಇಷ್ಟಪಡುವುದಿಲ್ಲ. ಆದರೆ, ಆ ರೀತಿ ಮಾಡಿದ ಉದಾಹರಣೆ ಕೂಡ ಇದೆ. ನಟಿ ರಮ್ಯಾ ಕೂಡ ಚಿತ್ರರಂಗದಲ್ಲಿ ಬೇಡಿಕೆ ಇದ್ದಾಗಲೇ ಅದನ್ನು ತೊರೆದು ರಾಜಕೀಯ ಸೇರಿದರು. ನಂತರ ಅವರು ಮರಳಿ ಚಿತ್ರರಂಗಕ್ಕೆ ಬರಲೇ ಇಲ್ಲ. ಇದೇ ರೀತಿಯ ಕೆಲವು ಉದಾಹರಣೆಗಳು ಸಿಗುತ್ತವೆ. ಈಗ ರಾಹುಲ್​ ರಾಮಕೃಷ್ಣ ಕೂಡ ಇದೇ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಈ ವರ್ಷ ಮಾತ್ರ ಅವರು ಚಿತ್ರರಂಗದಲ್ಲಿ ಇರಲಿದ್ದಾರಂತೆ. ಆ ಬಳಿಕ ಅವರು ಚಿತ್ರರಂಗ ತೊರೆಯಲು ನಿರ್ಧರಿಸಿದ್ದಾರೆ!

‘ಈ ವರ್ಷವೇ ಕೊನೆ. ಆ ಬಳಿಕ ನಾನು ಯಾವುದೇ ಸಿನಿಮಾ ಮಾಡುವುದಿಲ್ಲ. ನಾನು ಈ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನೀವು ಈ ಬಗ್ಗೆ ಚಿಂತಿಸಬೇಡಿ’ ಎಂದು ಬರೆದುಕೊಂಡಿದ್ದಾರೆ ರಾಹುಲ್​. ಇದು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.  ಕೆಲವರು ಇದನ್ನು ಗಂಭೀರವಾಗಿ ತೆಗೆದುಕೊಂಡರೆ ಇನ್ನೂ ಕೆಲವರು ಇದನ್ನು ಹಗುರವಾಗಿ ಪರಿಗಣಿಸಿದ್ದಾರೆ.

‘ಎಲ್ಲರ ಗಮನ ಸೆಳೆಯೋಕೆ ಈ ರೀತಿಯ ಗಿಮಿಕ್​ಗಳನ್ನು ಚಿತ್ರರಂಗದವರು ಮಾಡೋದನ್ನು ನೋಡಿದ್ದೇವೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ರಾಹುಲ್​ ಅವರ ಖಾತೆ ಹ್ಯಾಕ್​ ಆಗಿದೆ’ ಎಂದು ಬರೆದುಕೊಂಡಿದ್ದಾರೆ. ಕೆಲವರನ್ನು ಇದನ್ನು ಟೀಕಿಸಿದ್ದಾರೆ. ‘ಇದು ವೋಡ್ಕಾ ಎಫೆಕ್ಟ್​. ರಾತ್ರಿ ಬೆಳಗಾಗುವುದರೊಳಗೆ ಎಲ್ಲವೂ ಸರಿಯಾಗುತ್ತದೆ’ ಎಂದಿದ್ದಾರೆ. ಈ ಬಗ್ಗೆ ರಾಹುಲ್​ ಕಡೆಯಿಂದ ಸ್ಪಷ್ಟನೆ ಸಿಗಬೇಕಿದೆ. ಅವರು ಚಿತ್ರರಂಗ ತೊರೆಯುವ ನಿರ್ಧಾರ ತೆಗೆದುಕೊಂಡಿದ್ದೇಕೆ ಎನ್ನುವ ಪ್ರಶ್ನೆಯೂ ಕಾಡುತ್ತಿದೆ.

ಇದನ್ನೂ ಓದಿ: ಧೂಳೆಬ್ಬಿಸಿದ ‘ಲೈಗರ್​’ ಗ್ಲಿಂಪ್ಸ್​ ವಿಡಿಯೋ; ವಿಜಯ್​ ದೇವರಕೊಂಡಗೆ ಭಾರೀ ಮೆಚ್ಚುಗೆ

ವಿಜಯ್​ ದೇವರಕೊಂಡ ಜತೆ ಗೋವಾದಲ್ಲಿ ಹೊಸ ವರ್ಷ ಆಚರಿಸಿದ ರಶ್ಮಿಕಾ? ಇಲ್ಲಿದೆ ಫೋಟೋ ಸಾಕ್ಷಿ

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್