AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದಲ್ಲಿ ಅರ್ಜುನ್ ಸರ್ಜಾ ಸಿನಿಮಾ; ತಿರುಗೇಟು ಕೊಟ್ಟ ವಿಶ್ವಕ್ ಸೇನ್; ಹೊಸ ಹೀರೋಗೆ ಮಣೆ?

ವಿಶ್ವಕ್ ಸೇನ್ ಅವರನ್ನು ಹೊಸ ಸಿನಿಮಾದಿಂದ ಕೈ ಬಿಡಲಾಗಿದೆ. ಇದಕ್ಕೆ ಸಂಬಂಧಿಸಿ ಅರ್ಜುನ್ ಸರ್ಜಾ ಅವರು ಸುದ್ದಿಗೋಷ್ಠಿ ಕರೆದಿದ್ದರು. ಅಷ್ಟೇ ಅಲ್ಲ, ವಿಶ್ವಕ್ ಸೇನ್​ಗೆ ಬದ್ಧತೆ ಇಲ್ಲ ಎಂದು ಆರೋಪ ಮಾಡಿದ್ದರು.

ವಿವಾದದಲ್ಲಿ ಅರ್ಜುನ್ ಸರ್ಜಾ ಸಿನಿಮಾ; ತಿರುಗೇಟು ಕೊಟ್ಟ ವಿಶ್ವಕ್ ಸೇನ್; ಹೊಸ ಹೀರೋಗೆ ಮಣೆ?
ಅರ್ಜುನ್ ಸರ್ಜಾ-ಐಶ್ವರ್ಯಾ ಸರ್ಜಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Nov 09, 2022 | 8:22 PM

Share

ಅರ್ಜುನ್ ಸರ್ಜಾ(Arjun Sarja) ಅವರು ತೆಲುಗಿನಲ್ಲಿ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಮಗಳು ಐಶ್ವರ್ಯಾ ಅರ್ಜುನ್ ನಾಯಕಿ ಆಗಿ ನಟಿಸುತ್ತಿದ್ದಾರೆ. ವಿಶ್ವಕ್ ಸೇನ್ (Vishwak Sen) ಅವರು ಈ ಚಿತ್ರಕ್ಕೆ ಹೀರೋ ಆಗಿ ಆಯ್ಕೆ ಆಗಿದ್ದರು. ಅವರು ಕೈಬಿಟ್ಟ ನಂತರದಲ್ಲಿ ಈ ಸಿನಿಮಾ ವಿವಾದದ ಕೇಂದ್ರ ಬಿಂದು ಆಗಿದೆ. ಅರ್ಜುನ್ ಸರ್ಜಾ ಅವರು ವಿಶ್ವಕ್ ವಿರುದ್ಧ ಆರೋಪ ಮಾಡಿದ್ದಾರೆ. ಇದಕ್ಕೆ ವಿಶ್ವಕ್ ಅವರು ಪ್ರತ್ಯುತ್ತರ ನೀಡಿದ್ದಾರೆ.

ಅರ್ಜುನ್ ಸರ್ಜಾ ಹೇಳಿದ್ದೇನು?

ವಿಶ್ವಕ್ ಸೇನ್ ಅವರನ್ನು ಹೊಸ ಸಿನಿಮಾದಿಂದ ಕೈ ಬಿಡಲಾಗಿದೆ. ಇದಕ್ಕೆ ಸಂಬಂಧಿಸಿ ಅರ್ಜುನ್ ಸರ್ಜಾ ಅವರು ಸುದ್ದಿಗೋಷ್ಠಿ ಕರೆದಿದ್ದರು. ಅಷ್ಟೇ ಅಲ್ಲ, ವಿಶ್ವಕ್ ಸೇನ್​ಗೆ ಬದ್ಧತೆ ಇಲ್ಲ ಎಂದು ಆರೋಪ ಮಾಡಿದ್ದರು. ಅಲ್ಲದೆ, ತಮ್ಮ ಚಿತ್ರದಿಂದ ಅವರನ್ನು ಕೈ ಬಿಡುವ ಬಗ್ಗೆ ಘೋಷಣೆ ಮಾಡಿದ್ದರು.

ಆರೋಪ ಅಲ್ಲ ಗಳೆದ ವಿಶ್ವಕ್

ವಿಶ್ವಕ್ ಸೇನ್ ಅವರು ಅರ್ಜುನ್ ಸರ್ಜಾ ಮಾಡಿರುವ ಆರೋಪವನ್ನು ಅಲ್ಲ ಗಳೆದಿದ್ದಾರೆ. ‘ನನಗೆ ಬದ್ಧತೆ ಇಲ್ಲ ಎಂದು ಯಾರಾದರೂ ಹೇಳಿದರೆ ನಾನು ಈಗಲೇ ಚಿತ್ರರಂಗ ತೊರೆಯುತ್ತೇನೆ. ನಾನು ಹಲವರ ಜತೆ ಕೆಲಸ ಮಾಡಿದ್ದೇನೆ. ಅವರ ಜತೆ ಕೆಲಸ ಮಾಡಲು ಯಾವುದೇ ಸಮಸ್ಯೆ ಉಂಟಾಗಿಲ್ಲ. ನಾನು ಪರಿಶ್ರಮದಿಂದ ಕೆಲಸ ಮಾಡುವುದನ್ನು ನಂಬಿದ್ದೇನೆ. ಫಲಿತಾಂಶ ಪ್ರೇಕ್ಷಕರ ಕೈಯಲ್ಲಿ ಇರುತ್ತದೆ’ ಎಂದಿದ್ದಾರೆ ವಿಶ್ವಕ್ ಸೇನ್.

ಅರ್ಜುನ್ ಸರ್ಜಾ ಮುಂದಿನ ನಡೆ ಏನು?

ವಿಶ್ವಕ್ ಸೇನ್ ಅವರನ್ನು ಮರಳಿ ತಂಡಕ್ಕೆ ಸೇರಿಸಿಕೊಳ್ಳುವ ಆಲೋಚನೆಯಲ್ಲಿ ಅರ್ಜುನ್ ಸರ್ಜಾ ಇಲ್ಲ. ಅದೇ ರೀತಿ ಈ ಚಿತ್ರದ ಕೆಲಸವನ್ನು ಮುಂಡಲೂ ಅವರು ರೆಡಿ ಇಲ್ಲ. ಈ ಕಾರಣಕ್ಕೆ ಶರ್ವಾನಂದ್​ ಅವರನ್ನು ಮಗಳ ಸಿನಿಮಾಗೆ ಹೀರೋ ಆಗಿ ಆಯ್ಕೆ ಮಾಡುವ ಆಲೋಚನೆಯಲ್ಲಿ ಅರ್ಜುನ್ ಸರ್ಜಾ ಇದ್ದಾರೆ. ‘ಒಕೆ ಒಕ ಜೀವಿತಂ’ ಚಿತ್ರದಲ್ಲಿ ಶರ್ವಾನಂದ್ ನಟಿಸಿದ್ದರು. ಈ ಸಿನಿಮಾ ಹಿಟ್ ಆಗಿತ್ತು. ಹೀಗಾಗಿ, ಅರ್ಜುನ್ ಸರ್ಜಾ ಅವರು ಶರ್ವಾನಂದ್ ಅವರನ್ನು ಆಯ್ಕೆ ಮಾಡಿಕೊಳ್ಳುವ ಆಲೋಚನೆಯಲ್ಲಿದ್ದಾರೆ.

Published On - 8:13 pm, Wed, 9 November 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್