AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದಲ್ಲಿ ಅರ್ಜುನ್ ಸರ್ಜಾ ಸಿನಿಮಾ; ತಿರುಗೇಟು ಕೊಟ್ಟ ವಿಶ್ವಕ್ ಸೇನ್; ಹೊಸ ಹೀರೋಗೆ ಮಣೆ?

ವಿಶ್ವಕ್ ಸೇನ್ ಅವರನ್ನು ಹೊಸ ಸಿನಿಮಾದಿಂದ ಕೈ ಬಿಡಲಾಗಿದೆ. ಇದಕ್ಕೆ ಸಂಬಂಧಿಸಿ ಅರ್ಜುನ್ ಸರ್ಜಾ ಅವರು ಸುದ್ದಿಗೋಷ್ಠಿ ಕರೆದಿದ್ದರು. ಅಷ್ಟೇ ಅಲ್ಲ, ವಿಶ್ವಕ್ ಸೇನ್​ಗೆ ಬದ್ಧತೆ ಇಲ್ಲ ಎಂದು ಆರೋಪ ಮಾಡಿದ್ದರು.

ವಿವಾದದಲ್ಲಿ ಅರ್ಜುನ್ ಸರ್ಜಾ ಸಿನಿಮಾ; ತಿರುಗೇಟು ಕೊಟ್ಟ ವಿಶ್ವಕ್ ಸೇನ್; ಹೊಸ ಹೀರೋಗೆ ಮಣೆ?
ಅರ್ಜುನ್ ಸರ್ಜಾ-ಐಶ್ವರ್ಯಾ ಸರ್ಜಾ
TV9 Web
| Edited By: |

Updated on:Nov 09, 2022 | 8:22 PM

Share

ಅರ್ಜುನ್ ಸರ್ಜಾ(Arjun Sarja) ಅವರು ತೆಲುಗಿನಲ್ಲಿ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಮಗಳು ಐಶ್ವರ್ಯಾ ಅರ್ಜುನ್ ನಾಯಕಿ ಆಗಿ ನಟಿಸುತ್ತಿದ್ದಾರೆ. ವಿಶ್ವಕ್ ಸೇನ್ (Vishwak Sen) ಅವರು ಈ ಚಿತ್ರಕ್ಕೆ ಹೀರೋ ಆಗಿ ಆಯ್ಕೆ ಆಗಿದ್ದರು. ಅವರು ಕೈಬಿಟ್ಟ ನಂತರದಲ್ಲಿ ಈ ಸಿನಿಮಾ ವಿವಾದದ ಕೇಂದ್ರ ಬಿಂದು ಆಗಿದೆ. ಅರ್ಜುನ್ ಸರ್ಜಾ ಅವರು ವಿಶ್ವಕ್ ವಿರುದ್ಧ ಆರೋಪ ಮಾಡಿದ್ದಾರೆ. ಇದಕ್ಕೆ ವಿಶ್ವಕ್ ಅವರು ಪ್ರತ್ಯುತ್ತರ ನೀಡಿದ್ದಾರೆ.

ಅರ್ಜುನ್ ಸರ್ಜಾ ಹೇಳಿದ್ದೇನು?

ವಿಶ್ವಕ್ ಸೇನ್ ಅವರನ್ನು ಹೊಸ ಸಿನಿಮಾದಿಂದ ಕೈ ಬಿಡಲಾಗಿದೆ. ಇದಕ್ಕೆ ಸಂಬಂಧಿಸಿ ಅರ್ಜುನ್ ಸರ್ಜಾ ಅವರು ಸುದ್ದಿಗೋಷ್ಠಿ ಕರೆದಿದ್ದರು. ಅಷ್ಟೇ ಅಲ್ಲ, ವಿಶ್ವಕ್ ಸೇನ್​ಗೆ ಬದ್ಧತೆ ಇಲ್ಲ ಎಂದು ಆರೋಪ ಮಾಡಿದ್ದರು. ಅಲ್ಲದೆ, ತಮ್ಮ ಚಿತ್ರದಿಂದ ಅವರನ್ನು ಕೈ ಬಿಡುವ ಬಗ್ಗೆ ಘೋಷಣೆ ಮಾಡಿದ್ದರು.

ಆರೋಪ ಅಲ್ಲ ಗಳೆದ ವಿಶ್ವಕ್

ವಿಶ್ವಕ್ ಸೇನ್ ಅವರು ಅರ್ಜುನ್ ಸರ್ಜಾ ಮಾಡಿರುವ ಆರೋಪವನ್ನು ಅಲ್ಲ ಗಳೆದಿದ್ದಾರೆ. ‘ನನಗೆ ಬದ್ಧತೆ ಇಲ್ಲ ಎಂದು ಯಾರಾದರೂ ಹೇಳಿದರೆ ನಾನು ಈಗಲೇ ಚಿತ್ರರಂಗ ತೊರೆಯುತ್ತೇನೆ. ನಾನು ಹಲವರ ಜತೆ ಕೆಲಸ ಮಾಡಿದ್ದೇನೆ. ಅವರ ಜತೆ ಕೆಲಸ ಮಾಡಲು ಯಾವುದೇ ಸಮಸ್ಯೆ ಉಂಟಾಗಿಲ್ಲ. ನಾನು ಪರಿಶ್ರಮದಿಂದ ಕೆಲಸ ಮಾಡುವುದನ್ನು ನಂಬಿದ್ದೇನೆ. ಫಲಿತಾಂಶ ಪ್ರೇಕ್ಷಕರ ಕೈಯಲ್ಲಿ ಇರುತ್ತದೆ’ ಎಂದಿದ್ದಾರೆ ವಿಶ್ವಕ್ ಸೇನ್.

ಅರ್ಜುನ್ ಸರ್ಜಾ ಮುಂದಿನ ನಡೆ ಏನು?

ವಿಶ್ವಕ್ ಸೇನ್ ಅವರನ್ನು ಮರಳಿ ತಂಡಕ್ಕೆ ಸೇರಿಸಿಕೊಳ್ಳುವ ಆಲೋಚನೆಯಲ್ಲಿ ಅರ್ಜುನ್ ಸರ್ಜಾ ಇಲ್ಲ. ಅದೇ ರೀತಿ ಈ ಚಿತ್ರದ ಕೆಲಸವನ್ನು ಮುಂಡಲೂ ಅವರು ರೆಡಿ ಇಲ್ಲ. ಈ ಕಾರಣಕ್ಕೆ ಶರ್ವಾನಂದ್​ ಅವರನ್ನು ಮಗಳ ಸಿನಿಮಾಗೆ ಹೀರೋ ಆಗಿ ಆಯ್ಕೆ ಮಾಡುವ ಆಲೋಚನೆಯಲ್ಲಿ ಅರ್ಜುನ್ ಸರ್ಜಾ ಇದ್ದಾರೆ. ‘ಒಕೆ ಒಕ ಜೀವಿತಂ’ ಚಿತ್ರದಲ್ಲಿ ಶರ್ವಾನಂದ್ ನಟಿಸಿದ್ದರು. ಈ ಸಿನಿಮಾ ಹಿಟ್ ಆಗಿತ್ತು. ಹೀಗಾಗಿ, ಅರ್ಜುನ್ ಸರ್ಜಾ ಅವರು ಶರ್ವಾನಂದ್ ಅವರನ್ನು ಆಯ್ಕೆ ಮಾಡಿಕೊಳ್ಳುವ ಆಲೋಚನೆಯಲ್ಲಿದ್ದಾರೆ.

Published On - 8:13 pm, Wed, 9 November 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು