AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ಅರ್ಜುನ್​ ಸರ್ಜಾ ನಿರ್ಮಿಸಿದ ಆಂಜನೇಯ ಸ್ವಾಮಿ ದೇವಾಲಯದ ದರ್ಶನ ಪಡೆದ ಜ್ಯೂ. ಚಿರು

ಚಿರಂಜೀವಿ ಸರ್ಜಾ ಮೃತಪಡುವಾಗ ಮೇಘನಾ ರಾಜ್​ ಗರ್ಭಿಣಿ. ನಂತರ ಜನಿಸಿದ ಜ್ಯೂ. ಚಿರು ಮೇಲೆ ಎಲ್ಲರಿಗೂ ಎಲ್ಲಿದ ಪ್ರೀತಿ. ಇಡೀ ಸರ್ಜಾ ಕುಟುಂಬ ಜ್ಯೂ. ಚಿರು ಮೇಲೆ ಅಪಾರ ಪ್ರೀತಿ ತೊರುತ್ತಿದೆ.

ಚೆನ್ನೈನಲ್ಲಿ ಅರ್ಜುನ್​ ಸರ್ಜಾ ನಿರ್ಮಿಸಿದ ಆಂಜನೇಯ ಸ್ವಾಮಿ ದೇವಾಲಯದ ದರ್ಶನ ಪಡೆದ ಜ್ಯೂ. ಚಿರು
ಮೇಘನಾ ರಾಜ್​ - ಜ್ಯೂ. ಚಿರು
TV9 Web
| Edited By: |

Updated on: Jul 08, 2021 | 3:38 PM

Share

ಬಹುಭಾಷಾ ನಟ ಅರ್ಜುನ್​ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು. ಈ ಕಾರಣಕ್ಕೆ ಅರ್ಜುನ್​ ಸರ್ಜಾ ಚೆನ್ನೈನಲ್ಲಿ ಅದ್ಭುತವಾದ ದೇವಸ್ಥಾನ ನಿರ್ಮಿಸಿದ್ದಾರೆ. ಇತ್ತೀಚೆಗೆ ಈ ದೇವಸ್ಥಾನ ಕುಂಭಾಭಿಷೇಕ ನೆರವೇರಿದೆ. ಈಗ, ಜ್ಯೂ. ಚಿರು ಕೂಡ ದೇವಸ್ಥಾನ ವೀಕ್ಷಣೆ ಮಾಡಿದ್ದಾರೆ. ಇದನ್ನು ಅರ್ಜುನ್​ ಸರ್ಜಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಚಿರಂಜೀವಿ ಸರ್ಜಾ ಮೃತಪಡುವಾಗ ಮೇಘನಾ ರಾಜ್​ ಗರ್ಭಿಣಿ. ನಂತರ ಜನಿಸಿದ ಜ್ಯೂ. ಚಿರು ಮೇಲೆ ಎಲ್ಲರಿಗೂ ಎಲ್ಲಿದ ಪ್ರೀತಿ. ಇಡೀ ಸರ್ಜಾ ಕುಟುಂಬ ಜ್ಯೂ. ಚಿರು ಮೇಲೆ ಅಪಾರ ಪ್ರೀತಿ ತೊರುತ್ತಿದೆ. ಈಗ ಹೊಸದಾಗಿ ಲೋಕಾರ್ಪಣೆಗೊಂಡ ದೇವಾಲಯವನ್ನು ಅರ್ಜುನ್​ ಸರ್ಜಾ  ಅವರು ಚಿರು-ಮೇಘನಾ ಪುತ್ರಗೆ ತೋರಿಸಿದ್ದಾರೆ.

ಕೊರೊನಾ ವೈರಸ್​ ಇನ್ನೂ ಕಡಿಮೆ ಆಗಿಲ್ಲ. ಅದರಲ್ಲೂ ಮಕ್ಕಳನ್ನು ಕರೆದುಕೊಂಡು ಪ್ರವಾಸ ಮಾಡೋಕೆ ಇದು ಸೂಕ್ತ ಸಮಯ ಅಲ್ಲ. ಈ ಕಾರಣಕ್ಕೆ ಮೇಘನಾ ರಾಜ್​ ಕುಟುಂಬ ದೇವಸ್ಥಾನದ ಕುಂಬಾಭಿಷೇಕ ಕಾರ್ಯಕ್ರಮಕ್ಕೆ ತೆರಳಿಲ್ಲ. ಆದರೆ, ಅರ್ಜುನ್​ ಸರ್ಜಾ ವಿಡಿಯೋ ಕಾಲ್​ ಮಾಡುವ ಮೂಲಕ ಜ್ಯೂ. ಚಿರುಗೆ ದೇವಸ್ಥಾನ ದರ್ಶನ ಮಾಡಿಸಿದ್ದಾರೆ.

ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್​ ಲೈಫ್​ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದ್ದಾರೆ ಅರ್ಜುನ್ ಸರ್ಜಾ. ಹಾಗಾಗಿ ಆಂಜನೇಯನಿಗೆ ಅದ್ಭುತವಾದ ಒಂದು ದೇವಸ್ಥಾನ ನಿರ್ಮಿಸಬೇಕು ಎಂಬುದು ಅವರ ಅನೇಕ ವರ್ಷಗಳ ಕನಸು. ಬಹಳ ಹಿಂದೆಯೇ ಆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಇತ್ತೀಚೆಗೆ ದೇವಾಲಯದ ಕೆಲಸ ಪೂರ್ಣಗೊಂಡಿತ್ತು. ಅರ್ಜುನ್​ ಸರ್ಜಾ ಇತ್ತೀಚೆಗೆ ಲೈವ್​ ಮೂಲಕ ದೇವಸ್ಥಾನ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿದ್ದರು.

‘ನನ್ನ ಬಹುದಿನಗಳ ಆಸೆಯಂತೆ, ನಮ್ಮ ಕುಟುಂಬದಿಂದ ನಿರ್ಮಾಣ ಆಗುತ್ತಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಕಾರ್ಯ ಈಗ ಸಂಪೂರ್ಣ ಆಗಿದೆ. ಈ ದೇವಸ್ಥಾನದ ಕುಂಭಾಭಿಷೇಕ ಸಮಾರಂಭವನ್ನು ಜು.1 ಮತ್ತು ಜು.2ರಂದು ಚೆನ್ನೈನಲ್ಲಿ ಇಟ್ಟುಕೊಂಡಿದ್ದೇವೆ. ಸ್ನೇಹಿತರು, ಬಂಧುಗಳು ಹಾಗೂ ಭಕ್ತಾಧಿಗಳನ್ನು ಕರೆದು ತುಂಬ ಅದ್ದೂರಿಯಾಗಿ ಈ ಸಮಾರಂಭ ಮಾಡಬೇಕು ಎಂದುಕೊಂಡಿದ್ದೆ. ಆದರೆ, ಈಗಿರುವ ಕೊರೊನಾ ಪರಿಸ್ಥಿತಿಯಲ್ಲಿ, ಜನರ ಹಿತವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾರನ್ನೂ ಆಹ್ವಾನಿಸೋಕೆ ಸಾಧ್ಯವಾಗುತ್ತಿಲ್ಲ’ ಎಂದು ಅರ್ಜುನ್​ ಸರ್ಜಾ ಹೇಳಿದ್ದರು.

ಇದನ್ನೂ ಓದಿ: Chiranjeevi Sarja: ಮೇಘನಾ ರಾಜ್​ ಜೊತೆ ಚಿರಂಜೀವಿ ಸರ್ಜಾ ಸಮಾಧಿಗೆ ಪೂಜೆ ಸಲ್ಲಿಸಿದ ಜ್ಯೂ. ಚಿರು

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?