AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಧೂರಿಯಾಗಿ ನೆರವೇರಿದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ: ವರ ಯಾರು?

Aishwarya Sarja: ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ಅವರ ವಿವಾಹ ನಿಶ್ಚಿತಾರ್ಥವು ಇಂದು (ಅಕ್ಟೋಬರ್ 27) ಚೆನ್ನೈನಲ್ಲಿ ಅದ್ಧೂರಿಯಾಗಿ ನಡೆದಿದೆ. ಅಂದಹಾಗೆ ಐಶ್ವರ್ಯಾ ಮದುವೆ ಆಗುತ್ತಿರುವ ವರ ಯಾರು?

ಅದ್ಧೂರಿಯಾಗಿ ನೆರವೇರಿದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ: ವರ ಯಾರು?
ಮಂಜುನಾಥ ಸಿ.
|

Updated on: Oct 27, 2023 | 9:20 PM

Share

ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ ಸರ್ಜಾ ಅವರ ನಿಶ್ಚಿತಾರ್ಥ ಇಂದು (ಅಕ್ಟೋಬರ್ 27) ಚೆನ್ನೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಅದ್ಧೂರಿಯಾಗಿ ನೆರವೇರಿದ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ ಸೇರಿದಂತೆ ಸರ್ಜಾ ಕುಟುಂಬದ ಸದಸ್ಯರು ಭಾಗಿಯಾಗಿದ್ದರು. ಐಶ್ವರ್ಯಾ ಸರ್ಜಾ ಅವರು ತಮ್ಮ ಬಹು ಸಮಯದ ಗೆಳೆಯನನ್ನೇ ವರಿಸಲಿದ್ದು, ಅವರೊಟ್ಟಿಗೆ ವಿವಾಹ ನಿಶ್ಚಯ ಮಾಡಿಕೊಂಡಿದ್ದಾರೆ.

ಐಶ್ವರ್ಯಾ ಅವರ ನಿಶ್ಚಿತಾರ್ಥವು ತಮಿಳಿನ ಜನಪ್ರಿಯ ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಅವರೊಡನೆ ನಡೆದಿದೆ. ತಂಬಿ ರಾಮಯ್ಯ ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಮತ್ತು ಪೋಷಕ ನಟ. ಹಲವು ವರ್ಷಗಳಿಂದಲೂ ತಂಬಿ ರಾಮಯ್ಯ ತಮಿಳು ಸಿನಿಮಾಗಳಲ್ಲಿ ನಟಿಸುತ್ತಾ ಬಂದಿದ್ದಾರೆ.

ಉಮಾಪತಿ ರಾಮಯ್ಯ ಹಾಗೂ ಐಶ್ವರ್ಯಾ ಸರ್ಜಾ ಹಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು ಎನ್ನಲಾಗಿದೆ. ಇದೀಗ ಹಿರಿಯರ ಒಪ್ಪಿಗೆ ಪಡೆದು ವಿವಾಹ ಮಾಡಿಕೊಳ್ಳಲು ಸಜ್ಜಾಗಿದ್ದು ಇಂದು ಕುಟುಂಬದ ಹಿರಿಯರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ:ಮತ್ತೆ ಬರುತ್ತಿದೆ ಜಂಟಲ್ ಮ್ಯಾನ್ ಅರ್ಜುನ್ ಸರ್ಜಾ ಬದಲಿಗೆ ಬೇರೆ ನಾಯಕ

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ನಟಿಯಾಗಿದ್ದು 2013 ರಲ್ಲಿ ತಮಿಳಿನ ‘ಪಟ್ಟತ್ತು ಯಾನೈ’ ಸಿನಿಮಾ ಮೂಲಕ ನಟನೆಗೆ ಎಂಟ್ರಿ ನೀಡಿದರು. 2018 ರಲ್ಲಿ ಕನ್ನಡದ ‘ಪ್ರೇಮ ಬರಹ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಇದೇ ಸಿನಿಮಾ ತಮಿಳಿನಲ್ಲಿ ‘ಸೊಲ್ಲಿವಿಡುವಾ’ ಹೆಸರಿನಲ್ಲಿ ಬಿಡುಗಡೆ ಆಯ್ತು. ಸಿನಿಮಾವನ್ನು ಸ್ವತಃ ಅರ್ಜುನ್ ಸರ್ಜಾ ನಿರ್ದೇಶನ ಮಾಡಿ ನಿರ್ಮಾಣವನ್ನೂ ಮಾಡಿದ್ದರು. ಆದರೆ ಆ ಸಿನಿಮಾದ ಬಳಿಕ ಐಶ್ವರ್ಯಾ ಯಾವುದೇ ಸಿನಿಮಾದಲ್ಲಿಯೂ ನಟಿಸಲಿಲ್ಲ.

ಐಶ್ವರ್ಯಾ ವಿವಾಹವಾಗಲಿರುವ ಉಮಾಪತಿ ರಾಮಯ್ಯ ಸಹ ಸಿನಿಮಾ ನಟರೇ ಆಗಿದ್ದಾರೆ. 2017ರಲ್ಲಿ ನಾಯಕ ನಟನಾಗಿ ಎಂಟ್ರಿ ಕೊಟ್ಟ ಉಮಾಪತಿ ರಾಮಯ್ಯ, 2021ರ ವರೆಗೆ ನಾಲ್ಕು ಸಿನಿಮಾಗಳಲ್ಲಿ ಮಾತ್ರವೇ ನಟಿಸಿದ್ದಾರೆ. ಸರ್ವೈವರ್ ತಮಿಳ್ ಎಂಬ ರಿಯಾಲಿಟಿ ಶೋನಲ್ಲಿಯೂ ಭಾಗವಹಿಸಿದ್ದರು. ಆದರೆ ಅವರಿಗೆ ದೊಡ್ಡ ಯಶಸ್ಸು ಈವರೆಗೆ ಲಭ್ಯವಾಗಿಲ್ಲ. ಐಶ್ವರ್ಯಾ ಹಾಗೂ ಉಮಾಪತಿ ಅವರುಗಳು ಶೀಘ್ರವೇ ವಿವಾಹವಾಗಲಿದ್ದಾರೆ. ಮದುವೆ ಸಮಾರಂಭವೂ ಸಹ ಚೆನ್ನೈನಲ್ಲಿಯೇ ನಡೆಯುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!