AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಪ್ರಭಾಸ್​ಗೆ ಜೋಕರ್ ಎಂದಿಲ್ಲ’; ಅರ್ಷದ್ ವಾರ್ಸಿ ಸ್ಪಷ್ಟನೆ

ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದರು. ಈ ವೇಳೆ ಅವರು ‘ಕಲ್ಕಿ 2898 ಎಡಿ’ ಸಿನಿಮಾ ಬಗ್ಗೆ ಬೇಸರ ಹೊರಹಾಕಿದ್ದರು. ‘ಕಲ್ಕಿ 2898 ಎಡಿ ಸಿನಿಮಾ ನೋಡಿದೆ. ನನಗೆ ಅದು ಇಷ್ಟ ಆಗಲೇ ಇಲ್ಲ. ಪ್ರಭಾಸ್ ಬಗ್ಗೆ ನನಗೆ ಬೇಸರ ಇದೆ’ ಎಂದು ಅವರು ಹೇಳಿದ್ದರು.

‘ನಾನು ಪ್ರಭಾಸ್​ಗೆ ಜೋಕರ್ ಎಂದಿಲ್ಲ’; ಅರ್ಷದ್ ವಾರ್ಸಿ ಸ್ಪಷ್ಟನೆ
ಪ್ರಭಾಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 30, 2024 | 11:26 AM

Share

ಹಿಂದಿ ಚಿತ್ರರಂಗದ ನಟ ಅರ್ಷದ್ ವಾರ್ಸಿ ಅವರ ಇತ್ತೀಚಿಗಿನ ಹೇಳಿಕೆಯನ್ನು ನೀವು ಕೇಳಿಯೇ ಇರುತ್ತೀರಿ. ಪ್ರಭಾಸ್ ಬಗ್ಗೆ ಅವರು ಟೀಕೆ ಮಾಡಿ ಸಾಕಷ್ಟು ಸುದ್ದಿ ಆದರು. ಅವರು ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಪಾತ್ರವನ್ನು ಜೋಕರ್ ಎಂದು ಕರೆದರು. ಈ ಬಗ್ಗೆ ಸ್ವತಃ ನಿರ್ದೇಶಕ ನಾಗ್ ಅಶ್ವಿನ್ ಬೇಸರ ಹೊರಹಾಕಿದ್ದರು. ಈ ಬಗ್ಗೆ ಕೊನೆಗೂ ಅರ್ಷದ್ ವಾರ್ಸಿ ಅವರು ಸ್ಪಷ್ಟನೆ ನೀಡಿದ್ದಾರೆ. ಅವರು ಹೇಳಿದ್ದು ಏನು ಗೊತ್ತಾ? ನಾವು ಹೇಳುತ್ತೇವೆ ನೋಡಿ.

ಅರ್ಷದ್ ವಾರ್ಸಿ ಹೇಳಿದ್ದು ಏನು?

ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದರು. ಈ ವೇಳೆ ಅವರು ‘ಕಲ್ಕಿ 2898 ಎಡಿ’ ಸಿನಿಮಾ ಬಗ್ಗೆ ಬೇಸರ ಹೊರಹಾಕಿದ್ದರು. ‘ಕಲ್ಕಿ 2898 ಎಡಿ ಸಿನಿಮಾ ನೋಡಿದೆ. ನನಗೆ ಅದು ಇಷ್ಟ ಆಗಲೇ ಇಲ್ಲ. ಪ್ರಭಾಸ್ ಬಗ್ಗೆ ನನಗೆ ಬೇಸರ ಇದೆ. ಅವರು ಜೋಕರ್ ರೀತಿ ಕಾಣಿಸಿದ್ದಾರೆ’ ಎಂದು ಅವರು ಹೇಳಿದ್ದರು. ಇದರಿಂದ ಪ್ರಭಾಸ್ ಫ್ಯಾನ್ಸ್ ಸಿಟ್ಟಾದರು. ತೆಲುಗು ಮಂದಿ ಅರ್ಷದ್ ವಿರುದ್ಧ ತಿರುಗಿಬಿದ್ದರು.

ಟೀಕೆ

ನಟ ನಾನಿ, ಸುಧೀರ್ ಬಾಬು ಸೇರಿದಂತೆ ಎಲ್ಲರೂ ಅರ್ಷದ್ ವಿರುದ್ಧ ಕೋಪ ಹೊರಹಾಕಿದ್ದರು. ನಾಗ್ ಅಶ್ವಿನ್ ಅವರು ಎಕ್ಸ್​ ಮೂಲಕ ಈ ಬಗ್ಗೆ ಅಪಸ್ವರ ತೆಗೆದಿದ್ದರು. ‘ಅರ್ಷದ್ ಸರ್ ತಮ್ಮ ಮಾತುಗಳ ಮೇಲೆ ಹಿಡಿತ ಇಟ್ಟುಕೊಳ್ಳಬೇಕಿತ್ತು. ಅವರ ಮಕ್ಕಳಿಗೆ ಬುಜಿ ಆಟಿಕೆ ಕಳುಹಿಸುವೆ. ಪ್ರಭಾಸ್ ಅವರು ಬೆಸ್ಟ್​ ಎಂದು ಹೇಳುವ ರೀತಿಯಲ್ಲಿ ಕಲ್ಕಿ ಸೀಕ್ವೆಲ್​ಗಾಗಿ ಕೆಲಸ ಮಾಡುವೆ’ ಎಂದಿದ್ದರು.

ಇದನ್ನೂ ಓದಿ: ‘ಕಲ್ಕಿ ಚಿತ್ರದಲ್ಲಿ ಪ್ರಭಾಸ್​ನ ಜೋಕರ್ ರೀತಿ ತೋರಿಸಲಾಗಿದೆ’; ಬಾಲಿವುಡ್ ನಟನ ಬೇಸರ

ಅರ್ಷದ್ ಸ್ಪಷ್ಟನೆ..

ಐಫಾ ಅವಾರ್ಡ್​ನಲ್ಲಿ ಮಾತನಾಡಿದ ಅರ್ಷದ್,  ‘ನಾನು ಪಾತ್ರದ ಬಗ್ಗೆ ಮಾತನಾಡಿದ್ದೇನೆಯೇ ಹೊರತು ವೈಯಕ್ತಿಕ ಅಲ್ಲ. ಪ್ರಭಾಸ್ ಓರ್ವ ಅದ್ಭುತ ಕಲಾವಿದ. ಅವರು ಆಗಾಗ ತಮ್ಮನ್ನು ಸಾಬೀತು ಮಾಡಿಕೊಳ್ಳುತ್ತಲೇ ಇರುತ್ತಾರೆ. ಅದು ನಮಗೆ ಗೊತ್ತು’ ಎಂದಿದ್ದಾರೆ. ‘ಒಳ್ಳೆಯ ಕಲಾವಿದನಿಗೆ ಕೆಟ್ಟ ಪಾತ್ರ ಕೊಟ್ಟರೆ ಬೇಸರ ಆಗುತ್ತದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?