Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​ ಕ್ರಿಕೆಟರ್​ ಜತೆ ಮದುವೆಗೆ ಸಿದ್ಧವಾಗಿದ್ದ ಬಿಗ್​ ಬಾಸ್​ ಸ್ಪರ್ಧಿ; ತಾಲಿಬಾನ್​ ಭಯದಿಂದ ಸಂಬಂಧಕ್ಕೆ ಎಳ್ಳು-ನೀರು

ಹಿಂದಿ ಕಿರುತೆರೆಯ ಹಲವು ಸೀರಿಯಲ್​ಗಳಲ್ಲಿ ನಟಿಸುವ ಮೂಲಕ ಆರ್ಶಿ ಖಾನ್​ ಫೇಮಸ್​ ಆಗಿದ್ದಾರೆ. ಬಿಗ್​ ಬಾಸ್​ ಸೀಸನ್​ 11ರಲ್ಲೂ ಅವರು ಭಾಗವಹಿಸಿದ್ದರು. ಅವರ ಮದುವೆಯ ಕನಸು ಈಗ ಭಗ್ನವಾಗಿದೆ.

ಅಫ್ಘಾನ್​ ಕ್ರಿಕೆಟರ್​ ಜತೆ ಮದುವೆಗೆ ಸಿದ್ಧವಾಗಿದ್ದ ಬಿಗ್​ ಬಾಸ್​ ಸ್ಪರ್ಧಿ; ತಾಲಿಬಾನ್​ ಭಯದಿಂದ ಸಂಬಂಧಕ್ಕೆ ಎಳ್ಳು-ನೀರು
ನಟಿ ಆರ್ಶಿ ಖಾನ್​
Follow us
TV9 Web
| Updated By: ಮದನ್​ ಕುಮಾರ್​

Updated on: Aug 23, 2021 | 3:46 PM

ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ಹಿಡಿತಕ್ಕೆ ಪಡೆದ ನಂತರ ಅಲ್ಲಿನ ವಾತಾವರಣ ಹದಗೆಟ್ಟಿದೆ. ಉಗ್ರರ ಕೈಯಲ್ಲಿ ಅಫ್ಘಾನಿಸ್ತಾನ ನಲುಗುತ್ತಿದೆ. ಇದು ಬೇರೆ ದೇಶದಲ್ಲಿ ಇರುವ ಜನರ ಮೇಲೂ ಪರಿಣಾಮ ಬೀರಿದೆ. ಆಫ್ಘನ್​ ಜೊತೆ ವ್ಯಾಪಾರ-ವಹಿವಾಟು, ಸ್ನೇಹ-ಸಂಬಂಧ ಹೊಂದಿದ್ದ ಎಲ್ಲರೂ ಈಗ ಚಿಂತೆಗೀಡಾಗಿದ್ದಾರೆ. ಅದೇ ರೀತಿ ಖ್ಯಾತ ನಟಿ ಆರ್ಶಿ ಖಾನ್​ ಕೂಡ ಗೊಂದಲಕ್ಕೆ ಸಿಲುಕಿದ್ದಾರೆ. ಅಫ್ಘಾನಿಸ್ತಾನದ ಕ್ರಿಕೆಟ್​ ಆಟಗಾರರೊಬ್ಬರ ಜೊತೆ ಮದುವೆ ಆಗಲು ಆರ್ಶಿ ಖಾನ್​ ನಿರ್ಧರಿಸಿದ್ದರು. ಆದರೆ ಅದು ಈಗ ತಪ್ಪಿಹೋಗುವ ಸಂಭವ ಎದುರಾಗಿದೆ. ಆ ಬಗ್ಗೆ ಸ್ವತಃ ಆರ್ಶಿ ಖಾನ್​ ಮಾತನಾಡಿದ್ದಾರೆ.

ತಾಲಿಬಾನಿಗಳು ಆಫ್ಘನ್​ ಅನ್ನು ವಶಕ್ಕೆ ತೆಗೆದುಕೊಳ್ಳುವುದಕ್ಕೂ ಮುನ್ನ ಅಲ್ಲಿನ ಕ್ರಿಕೆಟರ್​ ಒಬ್ಬರ ಜೊತೆ ಆರ್ಶಿಯ ಮದುವೆ ಮಾಡಬೇಕು ಎಂದು ಅವರ ತಂದೆ ನಿರ್ಧರಿಸಿದ್ದರು. ಇದೇ ಅಕ್ಟೋಬರ್​ನಲ್ಲಿ ನಿಶ್ಚಿತಾರ್ಥ ನೆರವೇರಿಸಲು ಕೂಡ ಸಿದ್ಧತೆ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಈಗ ಅಪ್ಘಾನಿಸ್ತಾನದ ಪರಿಸ್ಥಿತಿ ನೋಡಿದರೆ ಅಲ್ಲಿಯ ಹುಡುಗನಿಗೆ ತಮ್ಮ ಮಗಳನ್ನು ಮದುವೆ ಮಾಡಿಕೊಡುವುದು ಸೂಕ್ತವಲ್ಲ ಎಂದು ಆರ್ಶಿ ಖಾನ್​ ಪೋಷಕರು ತೀರ್ಮಾನಕ್ಕೆ ಬಂದಿದ್ದಾರೆ. ಹಾಗಾಗಿ ಆರ್ಶಿಗೆ ಭಾರತೀಯ ಹುಡುಗನನ್ನೇ ಹುಡುಕುವ ಸಾಧ್ಯತೆ ದಟ್ಟವಾಗಿದೆ.

‘ಆತ ಆಫ್ಘನ್​ನ ಕ್ರಿಕೆಟರ್​. ನಮ್ಮ ತಂದೆಯ ಸ್ನೇಹಿತರ ಮಗ. ನಮ್ಮ ಕುಟುಂಬದ ಪೂರ್ವಜರು ಇದ್ದಿದ್ದು ಕೂಡ ಅಫ್ಘಾನಿಸ್ತಾನದಲ್ಲಿ. ನಾವು ಅಫ್ಘಾನಿ ಪಠಾಣರು. ನಮ್ಮ ತಾತ ಆಫ್ಘನ್​ನಿಂದ ಭೊಪಾಲ್​ಗೆ ವಲಸೆ ಬಂದು ಜೈಲರ್​ ಆಗಿದ್ದರು. ಆದರೆ ನನ್ನ ತಂದೆ-ತಾಯಿ ರೀತಿ ನಾನು ಅಪ್ಪಟ ಭಾರತೀಯಳು. ಈಗ ನನ್ನ ಪೋಷಕರು ನನಗೆ ಭಾರತೀಯ ಹುಡುಗನನ್ನೇ ಹುಡುಕುತ್ತಾರೆ ಎಂಬುದು ನನಗೆ ಖಾತ್ರಿ ಆಗಿದೆ’ ಎಂದು ಆರ್ಶಿ ಖಾನ್​ ಹೇಳಿದ್ದಾರೆ.

ಹಿಂದಿ ಕಿರುತೆರೆಯ ಹಲವು ಸೀರಿಯಲ್​ಗಳಲ್ಲಿ ನಟಿಸುವ ಮೂಲಕ ಆರ್ಶಿ ಖಾನ್​ ಫೇಮಸ್​ ಆಗಿದ್ದಾರೆ. ಬಿಗ್​ ಬಾಸ್​ ಸೀಸನ್​ 11ರಲ್ಲೂ ಅವರು ಭಾಗವಹಿಸಿದ್ದರು. ನಂತರ ಸೀಸನ್​ 14ರಲ್ಲಿ ಚಾಲೆಂಜರ್​ ಆಗಿ ದೊಡ್ಮನೆಗೆ ಮರುಪ್ರವೇಶ ಮಾಡಿದ್ದರು. ಅನೇಕ ಮ್ಯೂಸಿಕ್​ ವಿಡಿಯೋಗಳಲ್ಲೂ ಅವರು ಕಾಣಿಸಿಕೊಂಡಿದ್ದಾರೆ. ಆಫ್ಘನ್​ ಹುಡುಗನ ಜೊತೆ ಮದುವೆ ಆಗಬೇಕು ಎಂದುಕೊಂಡಿದ್ದ ಅವರ ಆಸೆಗೆ ಈಗ ಎಳ್ಳು-ನೀರು ಬಿಡಬೇಕಾದ ಸಂದರ್ಭ ಬಂದಿದೆ.

ಇದನ್ನೂ ಓದಿ:

ಅಫ್ಘನ್​ಗಳು ಪ್ರಾಣಭಯದಿಂದ ದೇಶಬಿಟ್ಟು ಪಲಾಯನ ಮಾಡುತ್ತಿದ್ದಾರೆ, ಅಲ್ಲಿನ ಮಹಿಳೆಯರು ನರಕಯಾತನೆ ಅನುಭವಿಸುತ್ತಿದ್ದಾರೆ

ಅಫ್ಘಾನಿಸ್ತಾನದಿಂದ ಮಂಗಳೂರಿಗೆ ಬಂದ ಕನ್ನಡಿಗನ ಮನದಾಳದ ಮಾತು

ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ