AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​ ಕ್ರಿಕೆಟರ್​ ಜತೆ ಮದುವೆಗೆ ಸಿದ್ಧವಾಗಿದ್ದ ಬಿಗ್​ ಬಾಸ್​ ಸ್ಪರ್ಧಿ; ತಾಲಿಬಾನ್​ ಭಯದಿಂದ ಸಂಬಂಧಕ್ಕೆ ಎಳ್ಳು-ನೀರು

ಹಿಂದಿ ಕಿರುತೆರೆಯ ಹಲವು ಸೀರಿಯಲ್​ಗಳಲ್ಲಿ ನಟಿಸುವ ಮೂಲಕ ಆರ್ಶಿ ಖಾನ್​ ಫೇಮಸ್​ ಆಗಿದ್ದಾರೆ. ಬಿಗ್​ ಬಾಸ್​ ಸೀಸನ್​ 11ರಲ್ಲೂ ಅವರು ಭಾಗವಹಿಸಿದ್ದರು. ಅವರ ಮದುವೆಯ ಕನಸು ಈಗ ಭಗ್ನವಾಗಿದೆ.

ಅಫ್ಘಾನ್​ ಕ್ರಿಕೆಟರ್​ ಜತೆ ಮದುವೆಗೆ ಸಿದ್ಧವಾಗಿದ್ದ ಬಿಗ್​ ಬಾಸ್​ ಸ್ಪರ್ಧಿ; ತಾಲಿಬಾನ್​ ಭಯದಿಂದ ಸಂಬಂಧಕ್ಕೆ ಎಳ್ಳು-ನೀರು
ನಟಿ ಆರ್ಶಿ ಖಾನ್​
TV9 Web
| Edited By: |

Updated on: Aug 23, 2021 | 3:46 PM

Share

ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ಹಿಡಿತಕ್ಕೆ ಪಡೆದ ನಂತರ ಅಲ್ಲಿನ ವಾತಾವರಣ ಹದಗೆಟ್ಟಿದೆ. ಉಗ್ರರ ಕೈಯಲ್ಲಿ ಅಫ್ಘಾನಿಸ್ತಾನ ನಲುಗುತ್ತಿದೆ. ಇದು ಬೇರೆ ದೇಶದಲ್ಲಿ ಇರುವ ಜನರ ಮೇಲೂ ಪರಿಣಾಮ ಬೀರಿದೆ. ಆಫ್ಘನ್​ ಜೊತೆ ವ್ಯಾಪಾರ-ವಹಿವಾಟು, ಸ್ನೇಹ-ಸಂಬಂಧ ಹೊಂದಿದ್ದ ಎಲ್ಲರೂ ಈಗ ಚಿಂತೆಗೀಡಾಗಿದ್ದಾರೆ. ಅದೇ ರೀತಿ ಖ್ಯಾತ ನಟಿ ಆರ್ಶಿ ಖಾನ್​ ಕೂಡ ಗೊಂದಲಕ್ಕೆ ಸಿಲುಕಿದ್ದಾರೆ. ಅಫ್ಘಾನಿಸ್ತಾನದ ಕ್ರಿಕೆಟ್​ ಆಟಗಾರರೊಬ್ಬರ ಜೊತೆ ಮದುವೆ ಆಗಲು ಆರ್ಶಿ ಖಾನ್​ ನಿರ್ಧರಿಸಿದ್ದರು. ಆದರೆ ಅದು ಈಗ ತಪ್ಪಿಹೋಗುವ ಸಂಭವ ಎದುರಾಗಿದೆ. ಆ ಬಗ್ಗೆ ಸ್ವತಃ ಆರ್ಶಿ ಖಾನ್​ ಮಾತನಾಡಿದ್ದಾರೆ.

ತಾಲಿಬಾನಿಗಳು ಆಫ್ಘನ್​ ಅನ್ನು ವಶಕ್ಕೆ ತೆಗೆದುಕೊಳ್ಳುವುದಕ್ಕೂ ಮುನ್ನ ಅಲ್ಲಿನ ಕ್ರಿಕೆಟರ್​ ಒಬ್ಬರ ಜೊತೆ ಆರ್ಶಿಯ ಮದುವೆ ಮಾಡಬೇಕು ಎಂದು ಅವರ ತಂದೆ ನಿರ್ಧರಿಸಿದ್ದರು. ಇದೇ ಅಕ್ಟೋಬರ್​ನಲ್ಲಿ ನಿಶ್ಚಿತಾರ್ಥ ನೆರವೇರಿಸಲು ಕೂಡ ಸಿದ್ಧತೆ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಈಗ ಅಪ್ಘಾನಿಸ್ತಾನದ ಪರಿಸ್ಥಿತಿ ನೋಡಿದರೆ ಅಲ್ಲಿಯ ಹುಡುಗನಿಗೆ ತಮ್ಮ ಮಗಳನ್ನು ಮದುವೆ ಮಾಡಿಕೊಡುವುದು ಸೂಕ್ತವಲ್ಲ ಎಂದು ಆರ್ಶಿ ಖಾನ್​ ಪೋಷಕರು ತೀರ್ಮಾನಕ್ಕೆ ಬಂದಿದ್ದಾರೆ. ಹಾಗಾಗಿ ಆರ್ಶಿಗೆ ಭಾರತೀಯ ಹುಡುಗನನ್ನೇ ಹುಡುಕುವ ಸಾಧ್ಯತೆ ದಟ್ಟವಾಗಿದೆ.

‘ಆತ ಆಫ್ಘನ್​ನ ಕ್ರಿಕೆಟರ್​. ನಮ್ಮ ತಂದೆಯ ಸ್ನೇಹಿತರ ಮಗ. ನಮ್ಮ ಕುಟುಂಬದ ಪೂರ್ವಜರು ಇದ್ದಿದ್ದು ಕೂಡ ಅಫ್ಘಾನಿಸ್ತಾನದಲ್ಲಿ. ನಾವು ಅಫ್ಘಾನಿ ಪಠಾಣರು. ನಮ್ಮ ತಾತ ಆಫ್ಘನ್​ನಿಂದ ಭೊಪಾಲ್​ಗೆ ವಲಸೆ ಬಂದು ಜೈಲರ್​ ಆಗಿದ್ದರು. ಆದರೆ ನನ್ನ ತಂದೆ-ತಾಯಿ ರೀತಿ ನಾನು ಅಪ್ಪಟ ಭಾರತೀಯಳು. ಈಗ ನನ್ನ ಪೋಷಕರು ನನಗೆ ಭಾರತೀಯ ಹುಡುಗನನ್ನೇ ಹುಡುಕುತ್ತಾರೆ ಎಂಬುದು ನನಗೆ ಖಾತ್ರಿ ಆಗಿದೆ’ ಎಂದು ಆರ್ಶಿ ಖಾನ್​ ಹೇಳಿದ್ದಾರೆ.

ಹಿಂದಿ ಕಿರುತೆರೆಯ ಹಲವು ಸೀರಿಯಲ್​ಗಳಲ್ಲಿ ನಟಿಸುವ ಮೂಲಕ ಆರ್ಶಿ ಖಾನ್​ ಫೇಮಸ್​ ಆಗಿದ್ದಾರೆ. ಬಿಗ್​ ಬಾಸ್​ ಸೀಸನ್​ 11ರಲ್ಲೂ ಅವರು ಭಾಗವಹಿಸಿದ್ದರು. ನಂತರ ಸೀಸನ್​ 14ರಲ್ಲಿ ಚಾಲೆಂಜರ್​ ಆಗಿ ದೊಡ್ಮನೆಗೆ ಮರುಪ್ರವೇಶ ಮಾಡಿದ್ದರು. ಅನೇಕ ಮ್ಯೂಸಿಕ್​ ವಿಡಿಯೋಗಳಲ್ಲೂ ಅವರು ಕಾಣಿಸಿಕೊಂಡಿದ್ದಾರೆ. ಆಫ್ಘನ್​ ಹುಡುಗನ ಜೊತೆ ಮದುವೆ ಆಗಬೇಕು ಎಂದುಕೊಂಡಿದ್ದ ಅವರ ಆಸೆಗೆ ಈಗ ಎಳ್ಳು-ನೀರು ಬಿಡಬೇಕಾದ ಸಂದರ್ಭ ಬಂದಿದೆ.

ಇದನ್ನೂ ಓದಿ:

ಅಫ್ಘನ್​ಗಳು ಪ್ರಾಣಭಯದಿಂದ ದೇಶಬಿಟ್ಟು ಪಲಾಯನ ಮಾಡುತ್ತಿದ್ದಾರೆ, ಅಲ್ಲಿನ ಮಹಿಳೆಯರು ನರಕಯಾತನೆ ಅನುಭವಿಸುತ್ತಿದ್ದಾರೆ

ಅಫ್ಘಾನಿಸ್ತಾನದಿಂದ ಮಂಗಳೂರಿಗೆ ಬಂದ ಕನ್ನಡಿಗನ ಮನದಾಳದ ಮಾತು

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!