AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಟ್ ಆಫ್ ಲಿವಿಂಗ್ 45ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಬಾಲಿವುಡ್ ತಾರೆಯರು, ಗಣ್ಯರು

ಆಶೀರ್ವಚನ ನೀಡಿದ ಪರಮ ಪೂಜ್ಯ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು, ‘ಇಡೀ ಜೀವನವೇ ಒಂದು ನಾಟಕ. ಪ್ರತಿಯೊಬ್ಬ ನಟನ ಕಣ್ಣು ನಿರ್ದೇಶಕನ ಮೇಲಿರುತ್ತದೆ. ಈ ಜಗತ್ತನ್ನು ಮುನ್ನಡೆಸುವ ಆ ಸೃಷ್ಟಿಕರ್ತ ಎಂಬ ನಿರ್ದೇಶಕನ ಗಮನ ನಿಮ್ಮ ಮೇಲೆ ಇರುತ್ತದೆ. ನೀವು ಕೂಡ ನಿಮ್ಮ ಗಮನವನ್ನು ಆತನ ಮೇಲೆಯೇ ಇಡಿ’ ಎಂದು ಆಧ್ಯಾತ್ಮಿಕ ಸಂದೇಶ ನೀಡಿದರು.

ಆರ್ಟ್ ಆಫ್ ಲಿವಿಂಗ್ 45ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಬಾಲಿವುಡ್ ತಾರೆಯರು, ಗಣ್ಯರು
Art Of Living 45 Years Celebration
ಮದನ್​ ಕುಮಾರ್​
|

Updated on: May 26, 2026 | 9:56 PM

Share

ಆಧ್ಯಾತ್ಮಿಕ ಮತ್ತು ಮಾನವೀಯ ಆಂದೋಲನದ ಪ್ರಮುಖ ಸಂಸ್ಥೆಯಾದ ‘ಆರ್ಟ್ ಆಫ್ ಲಿವಿಂಗ್’ (Art of Living) ತನ್ನ 45 ವರ್ಷಗಳ ಯಶಸ್ವಿ ಪ್ರಯಾಣವನ್ನು ಪೂರೈಸಿದ ಹಿನ್ನೆಲೆಯಲ್ಲಿ, ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಭವ್ಯ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿತ್ತು. ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar Guruji) ಅವರ ನಿಸ್ವಾರ್ಥ ಸೇವೆ ಹಾಗೂ ಮಾನವೀಯ ಮೌಲ್ಯಗಳ ಜಾಗೃತಿಯನ್ನು ಗೌರವಿಸಲು ದೇಶದ ಪ್ರಮುಖ ಚಿತ್ರನಿರ್ಮಾಪಕರು, ಬಾಲಿವುಡ್ ತಾರೆಯರು ಹಾಗೂ ರಾಜಕೀಯ ಮುಖಂಡರು ಒಂದೇ ಸೂರಿನಡಿ ಸೇರಿದರು.

ಈ ಕಾರ್ಯಕ್ರಮದಲ್ಲಿ ಕೇರಳದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಖ್ಯಾತ ಚಲನಚಿತ್ರ ನಿರ್ದೇಶಕ ರಾಜ್ ಕುಮಾರ್ ಹಿರಾನಿ, ಹೆಸರಾಂತ ನಿರ್ಮಾಪಕ ಸಾಜಿದ್ ನಾಡಿಯಾಡ್ವಾಲಾ, ನಟ ವಿಕ್ರಾಂತ್ ಮಾಸ್ಸಿ, ನಟ-ಹಾಸ್ಯ ಕಲಾವಿದ ಸುನಿಲ್ ಗ್ರೋವರ್, ಕವಿ ಹಾಗೂ ನಟ ವಿನೀತ್ ಕುಮಾರ್ ಸಿಂಗ್, ಸೆಲೆಬ್ರಿಟಿ ಫೋಟೋಗ್ರಾಫರ್ ಅವಿನಾಶ್ ಗೋವಾರಿಕರ್ ಮತ್ತು ಚಲನಚಿತ್ರ ನಿರ್ಮಾಪಕ ಮಹಾವೀರ್ ಜೈನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಗುರೂಜಿ ಅವರ ಸನ್ನಿಧಿಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು.

‘ವೈಟ್’ ಚಿತ್ರದಲ್ಲಿ ಗುರೂಜಿ ಪಾತ್ರ ಮಾಡಿದ ವಿಕ್ರಾಂತ್ ಮಾಸ್ಸಿ ಭಾವುಕ:

ಕಾರ್ಯಕ್ರಮದ ಅತ್ಯಂತ ಭಾವುಕ ಕ್ಷಣ ಎದುರಾಗಿದ್ದು ನಟ ವಿಕ್ರಾಂತ್ ಮಾಸ್ಸಿ ಅವರು ಮಾತನಾಡಿದಾಗ. ಮುಂಬರುವ ಬಯೋಪಿಕ್ ‘ವೈಟ್’ ಸಿನಿಮಾದಲ್ಲಿ ಗುರೂಜಿ ಶ್ರೀ ಶ್ರೀ ರವಿಶಂಕರ್ ಅವರ ಪಾತ್ರವನ್ನು ತಾವೇ ನಿರ್ವಹಿಸುತ್ತಿರುವುದಾಗಿ ವಿಕ್ರಾಂತ್ ಮಾಸ್ಸಿ ಬಹಿರಂಗಪಡಿಸಿದರು. ನೆರೆದಿದ್ದ ಸಹಸ್ರಾರು ಭಕ್ತರ ಚಪ್ಪಾಳೆಯ ನಡುವೆ ಮಾತನಾಡಿದ ಅವರು, ‘ಈ ಆಶ್ರಮವೇ ನನ್ನ ಮನೆ. ನನ್ನ ಗುರು, ನನ್ನ ಸರ್ವಸ್ವವೂ ಆಗಿರುವವರ ಪಾತ್ರವನ್ನು ತೆರೆಯ ಮೇಲೆ ನಿರ್ವಹಿಸುವ ಸುವರ್ಣಾವಕಾಶ ನನಗೆ ಸಿಕ್ಕಿದೆ. ಆ ಪಾತ್ರಕ್ಕೆ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ನಾನು ಸದಾ ಕೃತಜ್ಞನಾಗಿರುತ್ತೇನೆ’ ಎಂದು ಭಾವುಕರಾದರು.

Vikrant Massey (19)

Vikrant Massey

ಶೂಟಿಂಗ್ ಮುನ್ನ ಇಡೀ ಚಿತ್ರತಂಡಕ್ಕೆ ಸುದರ್ಶನ ಕ್ರಿಯೆ ಕಲಿಸುವ ರಾಜ್ ಕುಮಾರ್ ಹಿರಾನಿ:

ಹೆಸರಾಂತ ನಿರ್ದೇಶಕ ರಾಜ್ ಕುಮಾರ್ ಹಿರಾನಿ ಅವರು ಗುರೂಜಿ ಅವರೊಂದಿಗಿನ ತಮ್ಮ ಸುದೀರ್ಘ ಒಡನಾಟವನ್ನು ನೆನಪಿಸಿಕೊಂಡರು. ‘ನಾನು ಇಲ್ಲಿಗೆ ಬಂದಾಗಲೆಲ್ಲಾ ಒಂದು ವಿಶಿಷ್ಟವಾದ ಸಕಾರಾತ್ಮಕ ಶಕ್ತಿಯನ್ನು ಅನುಭವಿಸುತ್ತೇನೆ. ನಾನು ಯಾವುದೇ ಹೊಸ ಸಿನಿಮಾದ ಶೂಟಿಂಗ್ ಆರಂಭಿಸುವ ಮುನ್ನ, ನನ್ನ ಇಡೀ ಚಿತ್ರತಂಡದ ಸದಸ್ಯರಿಗೆ ಸುದರ್ಶನ ಕ್ರಿಯೆಯನ್ನು ಕಡ್ಡಾಯವಾಗಿ ಕಲಿಸುತ್ತೇನೆ’ ಎಂದು ತಮ್ಮ ಯಶಸ್ಸಿನ ರಹಸ್ಯವನ್ನು ಹಂಚಿಕೊಂಡರು.

Rajkumar Hirani

Rajkumar Hirani

ಹಾಸ್ಯ ನಟ ಸುನಿಲ್ ಗ್ರೋವರ್ ಅವರು ಈ ಹಿಂದೆ ತಾವು ಭಾಗವಹಿಸಿದ್ದ ಧ್ಯಾನ ಶಿಬಿರದ ನೆನಪುಗಳನ್ನು ಹಾಸ್ಯದ ಶೈಲಿಯಲ್ಲಿ ಹಂಚಿಕೊಂಡು ನೆರೆದಿದ್ದವರನ್ನು ನಗಿಸಿದರು. ನಿರ್ಮಾಪಕ ಮಹಾವೀರ್ ಜೈನ್ ಮಾತನಾಡಿ, ‘70 ವರ್ಷಗಳ ಕಾಲ ಜಗತ್ತಿನಲ್ಲಿ ಒಳಿತನ್ನು ಗಟ್ಟಿಗೊಳಿಸಿದ್ದಕ್ಕಾಗಿ ಮತ್ತು ಕೋಟ್ಯಂತರ ಜನರಿಗೆ ಹೇಗೆ ಬದುಕಬೇಕೆಂದು ಕಲಿಸಿಕೊಟ್ಟಿದ್ದಕ್ಕಾಗಿ ನಾವು ನಿಮಗೆ ಧನ್ಯವಾದ ಅರ್ಪಿಸಲು ಬಂದಿದ್ದೇವೆ’ ಎಂದರು. ಫೋಟೋಗ್ರಾಫರ್ ಅವಿನಾಶ್ ಗೋವಾರಿಕರ್ ಹಾಗೂ ನಟ ವಿನೀತ್ ಕುಮಾರ್ ಸಿಂಗ್ ಕೂಡ ತಮಗೆ ಆಶ್ರಮದಲ್ಲಿ ಉಂಟಾದ ದೈವಿಕ ಅನುಭವವನ್ನು ಹಂಚಿಕೊಂಡರು.

ಇದನ್ನೂ ಓದಿ: ನನ್ನನ್ನು ಯಾರೂ ಕಣ್ಣೆತ್ತಿ ನೋಡಲಿಲ್ಲ: ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಅನುಭವ ಬಿಚ್ಚಿಟ್ಟ ರಜನಿಕಾಂತ್

ಆಧ್ಯಾತ್ಮಿಕ ನಾಯಕರ ಮಾರ್ಗದರ್ಶನ ಜಗತ್ತಿಗೆ ಅಗತ್ಯ ಎಂದ ಕೇರಳ ರಾಜ್ಯಪಾಲರು:

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಭಾರತದ ಆಧ್ಯಾತ್ಮಿಕ ಜ್ಞಾನವನ್ನು ಜಗತ್ತಿನಾದ್ಯಂತ ಪಸರಿಸುತ್ತಿರುವ ಗುರೂಜಿ ಅವರ ಕಾರ್ಯವನ್ನು ಶ್ಲಾಘಿಸಿದರು. ‘ಇಂತಹ ಮಹಾತ್ಮರು ತಮಗಾಗಿ ಬದುಕುವುದಿಲ್ಲ, ಇತರರ ಉದ್ಧಾರಕ್ಕಾಗಿ ಬದುಕುತ್ತಾರೆ. ಇಂದಿನ ಆಧುನಿಕ ಜಗತ್ತಿಗೆ ಮಾರ್ಗದರ್ಶನ ನೀಡಲು ಇಡೀ ವಿಶ್ವಕ್ಕೆ ನಮ್ಮ ಗುರೂಜಿ ಅವರಂತಹ ಅಪರೂಪದ ಆಧ್ಯಾತ್ಮಿಕ ನಾಯಕರ ಅಗತ್ಯವಿದೆ’ ಎಂದರು. ಬಿಹಾರದ ಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಅವರು ವಿಡಿಯೋ ಸಂದೇಶದ ಮೂಲಕ ಸಂಸ್ಥೆಯ ಗ್ರಾಮೀಣಾಭಿವೃದ್ಧಿ ಮತ್ತು ಯುವ ಸಬಲೀಕರಣದ ಕಾರ್ಯಗಳನ್ನು ಪ್ರಶಂಸಿಸಿದರು.

Rajendra Vishwanath Arlekar

Rajendra Vishwanath Arlekar

‘ಇಂಟ್ಯೂಷನ್ ಫೆಸ್ಟ್’:

ಆಚರಣೆಯ ಪ್ರಮುಖ ಆಕರ್ಷಣೆಯಾಗಿ ‘ಇಂಟ್ಯೂಷನ್ ಫೆಸ್ಟ್’ ಆಯೋಜಿಸಲಾಗಿತ್ತು. ಇದರಲ್ಲಿ 11,000ಕ್ಕೂ ಹೆಚ್ಚು ಮಕ್ಕಳು ಮತ್ತು ಪೋಷಕರು ಭಾಗವಹಿಸಿದ್ದರು. ಆರ್ಟ್ ಆಫ್ ಲಿವಿಂಗ್‌ನ ವಿಶೇಷ ತರಬೇತಿ ಪಡೆದ ಮಕ್ಕಳು ಕಣ್ಣಿಗೆ ಬಟ್ಟೆ ಕಟ್ಟಿ ಪುಸ್ತಕ ಓದುವುದು, ಆಟ ಆಡುವುದು ಮತ್ತು ಚಿತ್ರ ಬಿಡಿಸುವ ಮೂಲಕ ತಮ್ಮ ತೀಕ್ಷ್ಣ ಬುದ್ಧಿಮತ್ತೆಯನ್ನು ಪ್ರದರ್ಶಿಸಿದರು. ಅತ್ಯಂತ ಆಶ್ಚರ್ಯಕರ ಘಟನೆಯೆಂದರೆ, 50ಕ್ಕೂ ಹೆಚ್ಚು ಮಕ್ಕಳು ಕಣ್ಣಿಗೆ ಸಂಪೂರ್ಣವಾಗಿ ಬಟ್ಟೆ ಕಟ್ಟಿಕೊಂಡು ಆಶ್ರಮದ ತಿರುವು ಮುರುವು ರಸ್ತೆಗಳಲ್ಲಿ ಅತ್ಯಂತ ಸುಲಭವಾಗಿ ಸೈಕಲ್ ಚಲಾಯಿಸಿ ನೆರೆದಿದ್ದವರನ್ನು ಬೆರಗುಗೊಳಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಧನುಸ್ಸು ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?