‘ಆರ್ಯ 3’ ಟೈಟಲ್ ನೋಂದಣಿ ಮಾಡಿಸಿದ ದಿಲ್ ರಾಜು; ಥ್ರಿಲ್ ಆದ ಅಲ್ಲು ಅರ್ಜುನ್ ಫ್ಯಾನ್ಸ್

ದಿಲ್ ರಾಜು ಅವರು 'ಆರ್ಯ 3' ಚಿತ್ರದ ಟೈಟಲ್​ನ ತೆಲುಗು ಚಿತ್ರರಂಗದಲ್ಲಿ ದಾಖಲಿಸಿದ್ದಾರೆ. ಆದರೆ, ಅಲ್ಲು ಅರ್ಜುನ್ ಮತ್ತು ಸುಕುಮಾರ್ ಈ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಾರಾ ಎಂಬುದು ಖಚಿತವಾಗಿಲ್ಲ. ಅಲ್ಲು ಅರ್ಜುನ್ ಅವರು ಇತರ ಚಿತ್ರಗಳಲ್ಲಿ ಬ್ಯುಸಿ ಇರುವುದರಿಂದ, 'ಆರ್ಯ 3' ಚಿತ್ರದ ಭವಿಷ್ಯ ಇನ್ನೂ ನಿಶ್ಚಿತವಾಗಿಲ್ಲ.

‘ಆರ್ಯ 3’ ಟೈಟಲ್ ನೋಂದಣಿ ಮಾಡಿಸಿದ ದಿಲ್ ರಾಜು; ಥ್ರಿಲ್ ಆದ ಅಲ್ಲು ಅರ್ಜುನ್ ಫ್ಯಾನ್ಸ್
ಅಲ್ಲು ಅರ್ಜುನ್

Updated on: May 21, 2025 | 12:26 PM

2004ರಲ್ಲಿ ರಿಲೀಸ್ ಆದ ‘ಆರ್ಯ’ ಸಿನಿಮಾ (Arya Movie) ತೆಲುಗು ಚಿತ್ರರಂಗದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಅಲ್ಲು ಅರ್ಜುನ್ ಅವರು ಈ ಚಿತ್ರಕ್ಕೆ ಹೀರೋ ಆದರೆ, ಸುಕುಮಾರ್ ಈ ಚಿತ್ರ ನಿರ್ದೇಶನ ಮಾಡಿದ್ದರು. ಇವರ ಮೇಲೆ, ಇವರ ಕಥೆ ಮೇಲೆ ನಂಬಿಕೆ ಇಟ್ಟು ದಿಲ್ ರಾಜು ಬಂಡವಾಳ ಹಾಕಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಅದೇ ರೀತಿ ‘ಆರ್ಯ 2’ ಸಿನಿಮಾ ಇದೇ ಕಾಂಬಿನೇಷನ್​ನಲ್ಲಿ ಬಂತು. ಈ ಚಿತ್ರ ನಿರೀಕ್ಷೆ ತಲುಪದೇ ಇದ್ದರೂ ಜನರು ಚಿತ್ರವನ್ನು ಇಷ್ಟಪಟ್ಟರು. ಈಗ ಈ ಇತ್ರಕ್ಕೆ ಮೂರನೇ ಪಾರ್ಟ್ ಮೂಡಿ ಬರುತ್ತಿದೆ.

ಸಿನಿಮಾ ಮಾಡುವುದಕ್ಕೂ ಮೊದಲು ಫಿಲ್ಮ್ ಚೇಂಬರ್​ನಲ್ಲಿ ಸಿನಿಮಾದ ಟೈಟಲ್ ನೋಂದಣಿ ಮಾಡಿಸಬೇಕು. ಅಂದಾಗ ಮಾತ್ರ ನಿರ್ಮಾಪಕರು ಮುಂದುವರಿಯಬಹುದು. ಈಗ ದಿಲ್ ರಾಜು ಅವರು ತೆಲುಗು ಫಿಲ್ಮ್​ ಚೇಂಬರ್​ನಲ್ಲಿ ‘ಆರ್ಯ 3’ ಟೈಟಲ್​ನ ನೋಂದಣಿ ಮಾಡಿಸಿದ್ದಾರೆ. ಇದು ಅಭಿಮಾನಿಗಳ ಕುತೂಹಲಕ್ಕೆ ಕಾರಣ ಆಗಿದೆ.

ಮೊದಲ ಪಾರ್ಟ್​ನಲ್ಲಿ ನಟನೆ ಮಾಡಿದವರು ಎರಡು ಹಾಗೂ ಮೂರನೇ ಪಾರ್ಟ್​​ನಲ್ಲಿ ಕೆಲಸ ಮಾಡಬೇಕು ಎನ್ನುವ ನಿಯಮ ಎಲ್ಲೂ ಇಲ್ಲ. ಈ ಕಾರಣಕ್ಕೆ ದಿಲ್ ರಾಜು ಅವರು ‘ಆರ್ಯ 3’ ಚಿತ್ರದ ಮೂಲಕ ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಅವರನ್ನು ಒಟ್ಟಿಗೆ ಕರೆತರುತ್ತಾರಾ ಅಥವಾ ಅವರಿಗೆ ಬೇರೆ ಕಲಾವಿದರ ಕರೆತರುವ ಆಲೋಚನೆ ಇದೆಯೇ ಎನ್ನುವ ಪ್ರಶ್ನೆ ಮೂಡುವಂತೆ ಆಗಿದೆ.

ಇದನ್ನೂ ಓದಿ: ಕೈ ಕೊಟ್ಟ ಅಲ್ಲು ಅರ್ಜುನ್, ರಾಮ್ ಚರಣ್ ಜೊತೆ ಸಿನಿಮಾ ಮಾಡಲಿರುವ ಸ್ಟಾರ್ ನಿರ್ದೇಶಕ

ಅಲ್ಲು ಅರ್ಜುನ್ ಅವರು ಅಟ್ಲಿ ನಿರ್ದೇಶನ ಮಾಡುತ್ತಿರುವ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಇನ್ನೂ ಟೈಟಲ್ ಫಿಕ್ಸ್ ಆಗಿಲ್ಲ. ಇದಾದ ಬಳಿಕ ತ್ರಿವಿಕ್ರಂ ಜೊತೆ ಅವರು ಸಿನಿಮಾ ಮಾಡಬೇಕಿದೆ. ಈ ಕಮಿಟ್​ಮೆಂಟ್​ಗಳು ಮುಗಿದ ಬಳಿಕ ಸುಕುಮಾರ್ ಅವರ ‘ಪುಷ್ಪ 3’ ಸಿನಿಮಾ ಕೆಲಸಗಳಲ್ಲಿ ಅವರು ತೊಡಗಿಕೊಳ್ಳಬೇಕಿದೆ. ಪ್ರತಿ ಚಿತ್ರಕ್ಕೆ ಕನಿಷ್ಠ ಒಂದು ವರ್ಷ ಹಿಡಿದರೂ ಮೂರು ವರ್ಷಗಳ ಕಾಲ ಅಲ್ಲು ಅರ್ಜುನ್ ಸಿಗೋದಿಲ್ಲ. ಈ ಕಾರಣಕ್ಕೆ ದಿಲ್ ರಾಜು ಅವರು ಬೇರೆ ಪ್ಲ್ಯಾನ್​ನ ಯೋಚಿಸಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ. ಹಾಗಾದಲ್ಲಿ ಫ್ಯಾನ್ಸ್ ಇದನ್ನು ಹೇಗೆ ಸ್ವೀಕರಿಸುತ್ತಾರೆ ಅನ್ನೋದು ಕೂಡ ಮುಖ್ಯವಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us