AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು​ 4ವರ್ಷಗಳಿಂದ ಡ್ರಗ್ಸ್​ ಸೇವಿಸುತ್ತಿದ್ದೇನೆ, ಅಪ್ಪ-ಅಮ್ಮಂಗೂ ಗೊತ್ತು‘; ಎನ್​ಸಿಬಿ ಎದುರು ಅಳುತ್ತ ಸತ್ಯ ಒಪ್ಪಿಕೊಂಡ ಶಾರುಖ್​ ಪುತ್ರ ಆರ್ಯನ್​ !

Aryan Khan: ಡ್ರಗ್ಸ್​ ಪಾರ್ಟಿಯಲ್ಲಿ ಎನ್​ಸಿಬಿ ಬಂಧಿಸಿದವರನ್ನು ಮುನ್ಮುನ್ ಧಮೇಚಾ, ಅರ್ಬಾಜ್ ಮರ್ಚೆಂಟ್, ಇಸ್ಮೀತ್ ಸಿಂಗ್, ಮೋಹಕ್ ಜಸ್ವಾಲ್, ಗೋಮಿತ್ ಚೋಪ್ರಾ, ನೂಪುರ್ ಸಾರಿಕಾ ಮತ್ತು ವಿಕ್ರಾಂತ್ ಚೋಕರ್ ಎಂದು ಗುರುತಿಸಲಾಗಿದೆ.

‘ನಾನು​ 4ವರ್ಷಗಳಿಂದ ಡ್ರಗ್ಸ್​ ಸೇವಿಸುತ್ತಿದ್ದೇನೆ, ಅಪ್ಪ-ಅಮ್ಮಂಗೂ ಗೊತ್ತು‘; ಎನ್​ಸಿಬಿ ಎದುರು ಅಳುತ್ತ ಸತ್ಯ ಒಪ್ಪಿಕೊಂಡ ಶಾರುಖ್​ ಪುತ್ರ ಆರ್ಯನ್​ !
ತಂದೆ-ತಾಯಿಯ ಜತೆ ಆರ್ಯನ್​ ಖಾನ್​
TV9 Web
| Edited By: |

Updated on:Oct 04, 2021 | 12:33 PM

Share

ಬಾಲಿವುಡ್​ ಸೂಪರ್​ ಸ್ಟಾರ್ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್ (Aryan Khan)​ ಡ್ರಗ್ಸ್​ ಪಾರ್ಟಿ (Drugs Party)ಯಲ್ಲಿ ಪಾಲ್ಗೊಂಡು ಇದೀಗ ಎನ್​ಸಿಬಿ (NCB) ಬಳಿ ಸಿಕ್ಕಿಬಿದ್ದಿದ್ದಾರೆ. ಆರ್ಯನ್​ರನ್ನು ಪೊಲೀಸರು ಬಂಧಿಸಿದಾಗ, ಅವರ ಲೆನ್ಸ್​ ಬಾಕ್ಸ್​ ಮತ್ತು ಶೂಗಳಲ್ಲಿ ಮಾದಕ ದ್ರವ್ಯ ಸಿಕ್ಕಿದ್ದಾಗಿ ಎನ್​ಸಿಬಿ ಮಾಹಿತಿ ನೀಡಿತ್ತು. ಇದೀಗ ಇನ್ನೊಂದು ಅಚ್ಚರಿಯ ವಿಚಾರ ಎನ್​ಸಿಬಿ ಮೂಲಗಳಿಂದ ಹೊರಬಿದ್ದಿದೆ. ‘ನಾನು ಕಳೆದ ನಾಲ್ಕು ವರ್ಷಗಳಿಂದಲೂ ಡ್ರಗ್ಸ್​ ಸೇವಿಸುತ್ತಿದ್ದೇನೆ. ಬರೀ ಭಾರತದಲ್ಲಿ ಅಷ್ಟೇ ಅಲ್ಲ, ನಾನು ಯುಕೆ, ದುಬೈ ಸೇರಿ ಇನ್ನಿತರ ದೇಶಗಳಲ್ಲಿ ವಾಸವಾಗಿದ್ದಲೂ ಅಲ್ಲಿಯೂ ಡ್ರಗ್ಸ್​ ತೆಗೆದುಕೊಂಡಿದ್ದೇನೆ. ನಾನು ಡ್ರಗ್ಸ್​ ತೆಗೆದುಕೊಳ್ಳುತ್ತಿರುವುದು ನನ್ನ ಅಪ್ಪ ಶಾರುಖ್​ಖಾನ್​ ಮತ್ತು ಅಮ್ಮ ಗೌರಿಗೂ ಗೊತ್ತಿದೆ’ ಎಂದು ಆರ್ಯನ್​ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎಂದು ಎನ್​ಸಿಬಿ ಹೇಳಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ. ಅಷ್ಟೇ ಅಲ್ಲ, ಆರ್ಯನ್​ ಎನ್​ಸಿಬಿ ಅಧಿಕಾರಿಗಳ ವೇಳೆ ಇವೆಲ್ಲವನ್ನೂ ಹೇಳಿಕೊಂಡು ಅತ್ತಿದ್ದಾರೆ ಎಂದೂ ಹೇಳಲಾಗಿದೆ.

ಶನಿವಾರ ಮುಂಬೈನ ಕರಾವಳಿ ತೀರದಲ್ಲಿ ಐಷಾರಾಮಿ ಹಡಗೊಂದರಲ್ಲಿ ನಡೆದಿದ್ದ ರೇವ್​ ಪಾರ್ಟಿ ಮೇಲೆ ದಾಳಿ ನಡೆಸಿದ್ದ ಎನ್​ಸಿಬಿ, ಶಾರುಖ್​ಖಾನ್​ ಪುತ್ರ ಆರ್ಯನ್​ ಸೇರಿ ಒಟ್ಟು ಎಂಟು ಮಂದಿಯನ್ನು ಬಂಧಿಸಿದೆ. ಬಂಧಿತರನ್ನು ಮುನ್ಮುನ್ ಧಮೇಚಾ, ಅರ್ಬಾಜ್ ಮರ್ಚೆಂಟ್, ಇಸ್ಮೀತ್ ಸಿಂಗ್, ಮೋಹಕ್ ಜಸ್ವಾಲ್, ಗೋಮಿತ್ ಚೋಪ್ರಾ, ನೂಪುರ್ ಸಾರಿಕಾ ಮತ್ತು ವಿಕ್ರಾಂತ್ ಚೋಕರ್ ಎಂದು ಗುರುತಿಸಲಾಗಿದೆ. ಇವರಲ್ಲಿ ಆರ್ಯನ್​ ಖಾನ್​ ಮತ್ತು ಅರ್ಬಾಜ್​ ಮರ್ಚಂಟ್​ ಕಳೆದ 15 ವರ್ಷಗಳಿಂದಲೂ ಸ್ನೇಹಿತರು. ಅರ್ಬಾಜ್​ ಸಹ ಡ್ರಗ್ಸ್​ ಅಡಿಕ್ಟ್​ ಎಂಬುದನ್ನು ಎನ್​ಸಿಬಿ ಹೇಳಿದೆ. ಇನ್ನು ಆರ್ಯನ್​ ಖಾನ್​​ ತನ್ನ ತಂದೆ ಶಾರುಖ್​ ಖಾನ್​ ಮತ್ತು ತಾಯಿ ಗೌರಿಯೊಂದಿಗೆ ಫೋನ್​ನಲ್ಲಿ ಮಾತನಾಡಲು ಅವಕಾಶ ಮಾಡಿಕೊಟ್ಟಿತ್ತು. ಆದರೆ ಹೆಚ್ಚಿಗೆ ಸಮಯ ಕೊಡಲಿಲ್ಲ. ಎರಡನೇ ನಿಮಿಷ ಮಾತನಾಡಿದ್ದಾರೆ ಎಂದು ವರದಿಯಾಗಿದೆ. ಮಗನ ಡ್ರಗ್ಸ್​ ಚಟದ ಬಗ್ಗೆ ತಂದೆ-ತಾಯಿಗೆ ಗೊತ್ತಿತ್ತು ಎಂದೂ ಹೇಳಿದೆ.

ಇಂದು ಆರ್ಯನ್​ ಖಾನ್​ ಮತ್ತು ಅರ್ಬಾಜ್​ ಮರ್ಚಂಟ್​​ರನ್ನು ಮತ್ತೆ ಎನ್​ಸಿಬಿ ನ್ಯಾಯಾಲಯದ ಎದುರು ಹಾಜರುಪಡಿಸಲಿದೆ. ಶನಿವಾರ ಕೋರ್ಟ್​ಗೆ ಹಾಜರುಪಡಿಸಿದಾಗ ಇಂದಿನವರೆಗೆ ಅಂದರೆ ಅಕ್ಟೋಬರ್​ 4ರವರೆಗೆ ಅವರನ್ನು ಎನ್​ಸಿಬಿ ವಶಕ್ಕೆ ನೀಡಲಾಗಿತ್ತು. ಇಂದು ಜಾಮೀನು ಸಿಗಲಿದೆಯೋ ಅಥವಾ ಇನ್ನಷ್ಟು ದಿನಗಳ ಕಾಲ ಎನ್​ಸಿಬಿ ಕಸ್ಟಡಿಯಲ್ಲಿ ಇರಬೇಕಾಗಿಬರಬಹುದೋ ಎಂಬುದನ್ನು ನೋಡಬೇಕು.

ಇದನ್ನೂ ಓದಿ: ಆರ್ಯನ್​ ಖಾನ್​ಗೆ ಜಾಮೀನು ಅಥವಾ ಜೈಲು? ಮತ್ತೆ ಕೋರ್ಟ್​ ಮುಂದೆ ಬರಲಿರುವ ಶಾರುಖ್​ ಪುತ್ರ

ಶಾರುಖ್​ ಪುತ್ರ ಆರ್ಯನ್​ ಖಾನ್​ ಅರೆಸ್ಟ್​ ಆದಾಗ ಅಕ್ಷಯ್​ ಕುಮಾರ್​ ಮಗ ಆರವ್​ ಏನು ಮಾಡ್ತಿದ್ರು? ಎಲ್ಲಿದ್ರು?

Published On - 12:09 pm, Mon, 4 October 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ