AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಮಗ ಆರ್ಯನ್​ ಖಾನ್​ ಜೈಲಿನಲ್ಲಿ ಈ ನಿಯಮ ಪಾಲಿಸಲೇಬೇಕು

ಆರ್ಯನ್​ ಖಾನ್​ಗೆ ಜಾಮೀನು ನೀಡಬೇಕು ಎಂದು ಅವರ ಪರ ವಕೀಲ ಸತೀಶ್​ ಮಾನೇಶಿಂಧೆ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಇದಕ್ಕೆ ಎನ್​ಸಿಬಿ ಪರ ವಕೀಲರು ವಿರೋಧ ವ್ಯಕ್ತಪಡಿಸಿದರು.

ಶಾರುಖ್​ ಮಗ ಆರ್ಯನ್​ ಖಾನ್​ ಜೈಲಿನಲ್ಲಿ ಈ ನಿಯಮ ಪಾಲಿಸಲೇಬೇಕು
ಆರ್ಯನ್ ಖಾನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 08, 2021 | 10:23 PM

ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ಗೆ ಸಂಕಷ್ಟ ಹೆಚ್ಚುತ್ತಲೇ ಇದೆ. ಮುಂಬೈ ಕಿಲ್ಲಾ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮತ್ತೊಂದೆಡೆ ಅವರಿಗೆ ಜಾಮೀನು ಸಿಗುತ್ತಿಲ್ಲ. ಈ ಕಾರಣಕ್ಕೆ ಆರ್ಯನ್​ ಖಾನ್​ ಅವರನ್ನು ಆರ್ಥರ್​ ರೋಡ್​ ಜೈಲಿಗೆ ಕಳುಹಿಸಲಾಗಿದೆ. ಅವರು ಸ್ಟಾರ್​ ಕಿಡ್​ ಆಗಿದ್ದರೂ ಜೈಲಿನಲ್ಲಿ ಸಾಮಾನ್ಯರಂತೆ ನೋಡಿಕೊಳ್ಳಲಾಗುತ್ತಿದೆ.

ಆರ್ಯನ್​ ಖಾನ್​ಗೆ ಜಾಮೀನು ನೀಡಬೇಕು ಎಂದು ಅವರ ಪರ ವಕೀಲ ಸತೀಶ್​ ಮಾನೇಶಿಂಧೆ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಇದಕ್ಕೆ ಎನ್​ಸಿಬಿ ಪರ ವಕೀಲರು ವಿರೋಧ ವ್ಯಕ್ತಪಡಿಸಿದರು. ಅಂತಿಮವಾಗಿ ಕೋರ್ಟ್​ ಜಾಮೀನು ಅರ್ಜಿಯನ್ನು ವಜಾ ಮಾಡಿತು. ಈ ಕಾರಣಕ್ಕೆ ಆರ್ಯನ್​ ಅವರು ಜೈಲಿಗೆ ತೆರಳೋದು ಅನಿವಾರ್ಯ ಆಗಿದೆ.

ಆರ್ಯನ್​ ಮತ್ತು ಇತರ ಆರೋಪಿಗಳನ್ನು ಆರ್ಥರ್​ ರೋಡ್​ ಜೈಲಿಗೆ ಕಳುಹಿಸಲಾಗಿದೆ. ಜೈಲಿನ ನಿಯಮದ ಪ್ರಕಾರ 2-5 ದಿನಗಳ ಕಾಲ ಇಲ್ಲಿನ ಸೆಲ್​ನಲ್ಲಿ ಕ್ವಾರಂಟೈನ್​ ಆಗಬೇಕು. ಕೊವಿಡ್​ ಪರೀಕ್ಷೆಯಲ್ಲಿ ನೆಗೆಟಿವ್​ ಬಂದಿದ್ದರೂ ಕ್ವಾರಂಟೈನ್​ ಆಗುವುದು ಕಡ್ಡಾಯವಾಗಿದೆ. ಜೈಲಿನಲ್ಲಿ ಇವರಿಗೆ ಸಾಮಾನ್ಯ ಅಡುಗೆಯನ್ನೇ ನೀಡಲಾಗುತ್ತದೆ. ಇನ್ನು, ನಿದ್ರಿಸೋಕೆ ಸಾಮಾನ್ಯ ವ್ಯವಸ್ಥೆ ಇರಲಿದೆ.

ಶಾರುಖ್​ ಖಾನ್​ ಹೆಂಡತಿ ಗೌರಿ ಖಾನ್​ಗೆ ಇಂದು (ಅಕ್ಟೋಬರ್ 8) ಜನ್ಮದಿನ. ಆದರೆ, ಅವರಿಗೆ ಈ ವರ್ಷ ಜನ್ಮದಿನ ಆಚರಿಸಿಕೊಳ್ಳಲು ಆಸಕ್ತಿ ಉಳಿದಿಲ್ಲ. ಮಗ ನ್ಯಾಯಾಂಗ ಬಂಧನದಲ್ಲಿರುವುದರಿಂದ ಗೌರಿ ಬರ್ತ್​​ಡೇ ಆಚರಿಸಿಕೊಳ್ಳುತ್ತಿಲ್ಲ. ಅವರು ಈ ಜನ್ಮದಿನವನ್ನು ದುಖಃದಲ್ಲೇ ಕಳೆಯುವಂತಾಗಿದೆ. ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್​ ಪಾರ್ಟಿಯಲ್ಲಿ ಆರ್ಯನ್​ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಆರ್ಯನ್​ ಅವರನ್ನು ವಶಕ್ಕೆ ಪಡೆದಿತ್ತು. ಈಗ ಆರ್ಯನ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ: ಗೌರಿ ಖಾನ್​ ಬರ್ತ್​ಡೇ; ಮಗ ಆರ್ಯನ್​ ಇಲ್ಲದೆ ಜನ್ಮದಿನಾಚರಣೆ ಮಾಡಿಕೊಳ್ಳಲ್ಲ ಎಂದ ತಾಯಿ

Aryan Khan: ಆರ್ಯನ್​ ಜಾಮೀನು ಅರ್ಜಿ ವಜಾ ಮಾಡಿದ ಮುಂಬೈ ಕೋರ್ಟ್​

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು