AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಮಗ ಆರ್ಯನ್​ ಖಾನ್​ ಜೈಲಿನಲ್ಲಿ ಈ ನಿಯಮ ಪಾಲಿಸಲೇಬೇಕು

ಆರ್ಯನ್​ ಖಾನ್​ಗೆ ಜಾಮೀನು ನೀಡಬೇಕು ಎಂದು ಅವರ ಪರ ವಕೀಲ ಸತೀಶ್​ ಮಾನೇಶಿಂಧೆ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಇದಕ್ಕೆ ಎನ್​ಸಿಬಿ ಪರ ವಕೀಲರು ವಿರೋಧ ವ್ಯಕ್ತಪಡಿಸಿದರು.

ಶಾರುಖ್​ ಮಗ ಆರ್ಯನ್​ ಖಾನ್​ ಜೈಲಿನಲ್ಲಿ ಈ ನಿಯಮ ಪಾಲಿಸಲೇಬೇಕು
ಆರ್ಯನ್ ಖಾನ್
TV9 Web
| Edited By: |

Updated on: Oct 08, 2021 | 10:23 PM

Share

ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ಗೆ ಸಂಕಷ್ಟ ಹೆಚ್ಚುತ್ತಲೇ ಇದೆ. ಮುಂಬೈ ಕಿಲ್ಲಾ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮತ್ತೊಂದೆಡೆ ಅವರಿಗೆ ಜಾಮೀನು ಸಿಗುತ್ತಿಲ್ಲ. ಈ ಕಾರಣಕ್ಕೆ ಆರ್ಯನ್​ ಖಾನ್​ ಅವರನ್ನು ಆರ್ಥರ್​ ರೋಡ್​ ಜೈಲಿಗೆ ಕಳುಹಿಸಲಾಗಿದೆ. ಅವರು ಸ್ಟಾರ್​ ಕಿಡ್​ ಆಗಿದ್ದರೂ ಜೈಲಿನಲ್ಲಿ ಸಾಮಾನ್ಯರಂತೆ ನೋಡಿಕೊಳ್ಳಲಾಗುತ್ತಿದೆ.

ಆರ್ಯನ್​ ಖಾನ್​ಗೆ ಜಾಮೀನು ನೀಡಬೇಕು ಎಂದು ಅವರ ಪರ ವಕೀಲ ಸತೀಶ್​ ಮಾನೇಶಿಂಧೆ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಇದಕ್ಕೆ ಎನ್​ಸಿಬಿ ಪರ ವಕೀಲರು ವಿರೋಧ ವ್ಯಕ್ತಪಡಿಸಿದರು. ಅಂತಿಮವಾಗಿ ಕೋರ್ಟ್​ ಜಾಮೀನು ಅರ್ಜಿಯನ್ನು ವಜಾ ಮಾಡಿತು. ಈ ಕಾರಣಕ್ಕೆ ಆರ್ಯನ್​ ಅವರು ಜೈಲಿಗೆ ತೆರಳೋದು ಅನಿವಾರ್ಯ ಆಗಿದೆ.

ಆರ್ಯನ್​ ಮತ್ತು ಇತರ ಆರೋಪಿಗಳನ್ನು ಆರ್ಥರ್​ ರೋಡ್​ ಜೈಲಿಗೆ ಕಳುಹಿಸಲಾಗಿದೆ. ಜೈಲಿನ ನಿಯಮದ ಪ್ರಕಾರ 2-5 ದಿನಗಳ ಕಾಲ ಇಲ್ಲಿನ ಸೆಲ್​ನಲ್ಲಿ ಕ್ವಾರಂಟೈನ್​ ಆಗಬೇಕು. ಕೊವಿಡ್​ ಪರೀಕ್ಷೆಯಲ್ಲಿ ನೆಗೆಟಿವ್​ ಬಂದಿದ್ದರೂ ಕ್ವಾರಂಟೈನ್​ ಆಗುವುದು ಕಡ್ಡಾಯವಾಗಿದೆ. ಜೈಲಿನಲ್ಲಿ ಇವರಿಗೆ ಸಾಮಾನ್ಯ ಅಡುಗೆಯನ್ನೇ ನೀಡಲಾಗುತ್ತದೆ. ಇನ್ನು, ನಿದ್ರಿಸೋಕೆ ಸಾಮಾನ್ಯ ವ್ಯವಸ್ಥೆ ಇರಲಿದೆ.

ಶಾರುಖ್​ ಖಾನ್​ ಹೆಂಡತಿ ಗೌರಿ ಖಾನ್​ಗೆ ಇಂದು (ಅಕ್ಟೋಬರ್ 8) ಜನ್ಮದಿನ. ಆದರೆ, ಅವರಿಗೆ ಈ ವರ್ಷ ಜನ್ಮದಿನ ಆಚರಿಸಿಕೊಳ್ಳಲು ಆಸಕ್ತಿ ಉಳಿದಿಲ್ಲ. ಮಗ ನ್ಯಾಯಾಂಗ ಬಂಧನದಲ್ಲಿರುವುದರಿಂದ ಗೌರಿ ಬರ್ತ್​​ಡೇ ಆಚರಿಸಿಕೊಳ್ಳುತ್ತಿಲ್ಲ. ಅವರು ಈ ಜನ್ಮದಿನವನ್ನು ದುಖಃದಲ್ಲೇ ಕಳೆಯುವಂತಾಗಿದೆ. ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್​ ಪಾರ್ಟಿಯಲ್ಲಿ ಆರ್ಯನ್​ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಆರ್ಯನ್​ ಅವರನ್ನು ವಶಕ್ಕೆ ಪಡೆದಿತ್ತು. ಈಗ ಆರ್ಯನ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ: ಗೌರಿ ಖಾನ್​ ಬರ್ತ್​ಡೇ; ಮಗ ಆರ್ಯನ್​ ಇಲ್ಲದೆ ಜನ್ಮದಿನಾಚರಣೆ ಮಾಡಿಕೊಳ್ಳಲ್ಲ ಎಂದ ತಾಯಿ

Aryan Khan: ಆರ್ಯನ್​ ಜಾಮೀನು ಅರ್ಜಿ ವಜಾ ಮಾಡಿದ ಮುಂಬೈ ಕೋರ್ಟ್​

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?