AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಮಗ ಆರ್ಯನ್​ ಖಾನ್​ ಜೈಲಿನಲ್ಲಿ ಈ ನಿಯಮ ಪಾಲಿಸಲೇಬೇಕು

ಆರ್ಯನ್​ ಖಾನ್​ಗೆ ಜಾಮೀನು ನೀಡಬೇಕು ಎಂದು ಅವರ ಪರ ವಕೀಲ ಸತೀಶ್​ ಮಾನೇಶಿಂಧೆ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಇದಕ್ಕೆ ಎನ್​ಸಿಬಿ ಪರ ವಕೀಲರು ವಿರೋಧ ವ್ಯಕ್ತಪಡಿಸಿದರು.

ಶಾರುಖ್​ ಮಗ ಆರ್ಯನ್​ ಖಾನ್​ ಜೈಲಿನಲ್ಲಿ ಈ ನಿಯಮ ಪಾಲಿಸಲೇಬೇಕು
ಆರ್ಯನ್ ಖಾನ್
TV9 Web
| Edited By: |

Updated on: Oct 08, 2021 | 10:23 PM

Share

ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ಗೆ ಸಂಕಷ್ಟ ಹೆಚ್ಚುತ್ತಲೇ ಇದೆ. ಮುಂಬೈ ಕಿಲ್ಲಾ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮತ್ತೊಂದೆಡೆ ಅವರಿಗೆ ಜಾಮೀನು ಸಿಗುತ್ತಿಲ್ಲ. ಈ ಕಾರಣಕ್ಕೆ ಆರ್ಯನ್​ ಖಾನ್​ ಅವರನ್ನು ಆರ್ಥರ್​ ರೋಡ್​ ಜೈಲಿಗೆ ಕಳುಹಿಸಲಾಗಿದೆ. ಅವರು ಸ್ಟಾರ್​ ಕಿಡ್​ ಆಗಿದ್ದರೂ ಜೈಲಿನಲ್ಲಿ ಸಾಮಾನ್ಯರಂತೆ ನೋಡಿಕೊಳ್ಳಲಾಗುತ್ತಿದೆ.

ಆರ್ಯನ್​ ಖಾನ್​ಗೆ ಜಾಮೀನು ನೀಡಬೇಕು ಎಂದು ಅವರ ಪರ ವಕೀಲ ಸತೀಶ್​ ಮಾನೇಶಿಂಧೆ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಇದಕ್ಕೆ ಎನ್​ಸಿಬಿ ಪರ ವಕೀಲರು ವಿರೋಧ ವ್ಯಕ್ತಪಡಿಸಿದರು. ಅಂತಿಮವಾಗಿ ಕೋರ್ಟ್​ ಜಾಮೀನು ಅರ್ಜಿಯನ್ನು ವಜಾ ಮಾಡಿತು. ಈ ಕಾರಣಕ್ಕೆ ಆರ್ಯನ್​ ಅವರು ಜೈಲಿಗೆ ತೆರಳೋದು ಅನಿವಾರ್ಯ ಆಗಿದೆ.

ಆರ್ಯನ್​ ಮತ್ತು ಇತರ ಆರೋಪಿಗಳನ್ನು ಆರ್ಥರ್​ ರೋಡ್​ ಜೈಲಿಗೆ ಕಳುಹಿಸಲಾಗಿದೆ. ಜೈಲಿನ ನಿಯಮದ ಪ್ರಕಾರ 2-5 ದಿನಗಳ ಕಾಲ ಇಲ್ಲಿನ ಸೆಲ್​ನಲ್ಲಿ ಕ್ವಾರಂಟೈನ್​ ಆಗಬೇಕು. ಕೊವಿಡ್​ ಪರೀಕ್ಷೆಯಲ್ಲಿ ನೆಗೆಟಿವ್​ ಬಂದಿದ್ದರೂ ಕ್ವಾರಂಟೈನ್​ ಆಗುವುದು ಕಡ್ಡಾಯವಾಗಿದೆ. ಜೈಲಿನಲ್ಲಿ ಇವರಿಗೆ ಸಾಮಾನ್ಯ ಅಡುಗೆಯನ್ನೇ ನೀಡಲಾಗುತ್ತದೆ. ಇನ್ನು, ನಿದ್ರಿಸೋಕೆ ಸಾಮಾನ್ಯ ವ್ಯವಸ್ಥೆ ಇರಲಿದೆ.

ಶಾರುಖ್​ ಖಾನ್​ ಹೆಂಡತಿ ಗೌರಿ ಖಾನ್​ಗೆ ಇಂದು (ಅಕ್ಟೋಬರ್ 8) ಜನ್ಮದಿನ. ಆದರೆ, ಅವರಿಗೆ ಈ ವರ್ಷ ಜನ್ಮದಿನ ಆಚರಿಸಿಕೊಳ್ಳಲು ಆಸಕ್ತಿ ಉಳಿದಿಲ್ಲ. ಮಗ ನ್ಯಾಯಾಂಗ ಬಂಧನದಲ್ಲಿರುವುದರಿಂದ ಗೌರಿ ಬರ್ತ್​​ಡೇ ಆಚರಿಸಿಕೊಳ್ಳುತ್ತಿಲ್ಲ. ಅವರು ಈ ಜನ್ಮದಿನವನ್ನು ದುಖಃದಲ್ಲೇ ಕಳೆಯುವಂತಾಗಿದೆ. ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್​ ಪಾರ್ಟಿಯಲ್ಲಿ ಆರ್ಯನ್​ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಆರ್ಯನ್​ ಅವರನ್ನು ವಶಕ್ಕೆ ಪಡೆದಿತ್ತು. ಈಗ ಆರ್ಯನ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ: ಗೌರಿ ಖಾನ್​ ಬರ್ತ್​ಡೇ; ಮಗ ಆರ್ಯನ್​ ಇಲ್ಲದೆ ಜನ್ಮದಿನಾಚರಣೆ ಮಾಡಿಕೊಳ್ಳಲ್ಲ ಎಂದ ತಾಯಿ

Aryan Khan: ಆರ್ಯನ್​ ಜಾಮೀನು ಅರ್ಜಿ ವಜಾ ಮಾಡಿದ ಮುಂಬೈ ಕೋರ್ಟ್​

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?