AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asur 2: ಸೀಕ್ವೆಲ್​​ನಲ್ಲೂ ಮುಂದುವರಿದ ‘ಅಸುರ’ನ ಹುಡುಕಾಟ; ಇದು ಡಿಜಿಟಲ್ ವಾರ್

Asur 2: ‘ಅಸುರ್ 2’  ಸರಣಿ ಜೂನ್ 1ರಿಂದ ಜಿಯೋ ಸಿನಿಮಾದಲ್ಲಿ ಪ್ರಸಾರ ಕಾಣಲಿದೆ. ಈ ವಿಚಾರ ಕೇಳಿ ಸಿನಿಪ್ರಿಯರು ಖುಷಿಪಟ್ಟಿದ್ದಾರೆ.

Asur 2: ಸೀಕ್ವೆಲ್​​ನಲ್ಲೂ ಮುಂದುವರಿದ ‘ಅಸುರ’ನ ಹುಡುಕಾಟ; ಇದು ಡಿಜಿಟಲ್ ವಾರ್
ಅಸುರ್ 2
ರಾಜೇಶ್ ದುಗ್ಗುಮನೆ
|

Updated on: May 27, 2023 | 7:46 AM

Share

2020ರಲ್ಲಿ ಪ್ರಸಾರ ಕಂಡಿದ್ದ ‘ಅಸುರ್’ (Asur) ವೆಬ್ ಸೀರಿಸ್ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಈ ಕ್ರೈಮ್ ಥ್ರಿಲ್ಲರ್ ವೆಬ್ ಸರಣಿ ನೋಡಿದ ಅನೇಕರು ಮೆಚ್ಚಿಕೊಂಡಿದ್ದರು. ಅಪರಾಧಗಳ ಜೊತೆಗೆ ಪುರಾಣದ ವಿಚಾರಗಳನ್ನು ಸೇರಿಸಲಾಗಿತ್ತು. ಮೊದಲ ಸೀಸನ್​ನಲ್ಲಿ ‘ಅಸುರ’ನ ಹುಡುಕಾಟ ನಡೆದಿತ್ತು. ಎರಡನೇ ಪಾರ್ಟ್​​ನಲ್ಲೂ ಅದು ಮುಂದುವರಿದಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ‘ಅಸುರ್ 2’  (Asur 2) ಸರಣಿ ಜೂನ್ 1ರಿಂದ ಜಿಯೋ ಸಿನಿಮಾದಲ್ಲಿ ಪ್ರಸಾರ ಕಾಣಲಿದೆ. ಈ ವಿಚಾರ ಕೇಳಿ ಸಿನಿಪ್ರಿಯರು ಖುಷಿಪಟ್ಟಿದ್ದಾರೆ.

‘ಅಸುರ್​’ ಚಿತ್ರದಲ್ಲಿ ಅರ್ಷದ್ ವರ್ಸಿ, ಬರುಣ್ ಸೋಬ್ತಿ ಮೊದಲಾದವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಸರಣಿ ಕೊಲೆಗಳು ನಡೆಯುತ್ತಿರುತ್ತವೆ. ಇದೆಲ್ಲವನ್ನೂ ಮಾಡುತ್ತಿರುವುದು ಅಸುರ ಅನ್ನೋದು ಗೊತ್ತಾಗುತ್ತದೆ. ಈ ಅಸುರ ಯಾರು ಎಂಬುದನ್ನು ಹುಡುಕಿ ಹೊರಡುತ್ತಾನೆ ನಿಖಿಲ್ ನಾಯರ್ (ಬರುಣ್ ಸೋಬ್ತಿ). ಆತ ಫಾರೆನ್ಸಿಕ್​ ಎಕ್ಸಪರ್ಟ್. ನಿಖಿಲ್​ಗೆ ಧನಂಜಯ್ ರಜಪೂತ್ (ಅರ್ಷದ್) ಸಹಕಾರವೂ ಸಿಗುತ್ತದೆ. ಆದರೆ, ಅಸುರ ಸಿಗುವುದಿಲ್ಲ. ಎರಡನೇ ಪಾರ್ಟ್​ನಲ್ಲೂ ಅಸುರನ ಹುಡುಕಾಟ ಮುಂದುವರಿದಿದೆ.

‘ಅಸುರ್ 2’ ಟ್ರೇಲರ್ ಸಾಕಷ್ಟು ಸಸ್ಪೆನ್ಸ್​ನಿಂದ ಕೂಡಿದೆ. ಕಥೆಯಲ್ಲಿ ಪುರಾಣ ಸೇರಿಸಲಾಗಿದೆ. ಈಗಿನ ಡಿಜಿಟಲ್ ಯುಗಕ್ಕೆ ತಕ್ಕಂತೆ ವೆಬ್ ಸೀರಿಸ್ ಮಾಡಲಾಗಿದೆ. ಇಲ್ಲಿಯೂ ಡಿಜಿಟಲ್ ವಾರ್​ ಇದೆ. ಈ ಸರಣಿ ನೋಡಲು ಸಿನಿಪ್ರಿಯರು ಕಾದಿದ್ದಾರೆ. ಅಸುರ ಯಾರು ಎಂಬುದು ತಿಳಿಯಲಿದೆಯೇ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಇದನ್ನೂ ಓದಿ: ಚಿರಂಜೀವಿಯನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದ, ಕನ್ನಡದಲ್ಲೂ ಸಿನಿಮಾ ಮಾಡಿದ್ದ ನಿರ್ದೇಶಕ ಕೆ. ವಾಸು ನಿಧನ

ಕಳೆದ ಬಾರಿ ‘ಅಸುರ್’ ವೂಟ್​ನಲ್ಲಿ ಲಭ್ಯವಿತ್ತು. ಈ ಬಾರಿ ‘ಜಿಯೋ ಸಿನಿಮಾಸ್’ ಮೂಲಕ ಪ್ರಸಾರ ಕಾಣಲಿದೆ. ಇಷ್ಟು ದಿನ ಜನರು ಐಪಿಎಲ್​ನಲ್ಲಿ ಬ್ಯುಸಿ ಇದ್ದರು. ಈ ಕಾರಣಕ್ಕೆ ಐಪಿಎಲ್ ಮುಗಿದ ಬಳಿಕ ‘ಅಸುರ್ 2’ ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ