ಹೈದರಾಬಾದ್​ಗೆ ಬಂದ ಆಶಿಕಾಗೆ ಮನೆ ಊಟ ಕಳುಹಿಸುತ್ತಿದ್ದ ಅಕ್ಕಿನೇನಿ ನಾಗಾರ್ಜುನ; ಧನ್ಯವಾದ ಹೇಳಿದ ನಟಿ

ಪರಭಾಷೆಯಲ್ಲಿ ಕನ್ನಡದ ನಟಿಯರಿಗೆ ಸಾಕಷ್ಟು ಗೌರವ ಹಾಗೂ ಪ್ರೀತಿ ಸಿಗುತ್ತಿದೆ. ಅಲ್ಲಿಯೂ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗುತ್ತಿದೆ. ಆಶಿಕಾ ರಂಗನಾಥ್ ಅವರಿಗೂ ಈ ಅನುಭವ ಆಗಿದೆ.

ಹೈದರಾಬಾದ್​ಗೆ ಬಂದ ಆಶಿಕಾಗೆ ಮನೆ ಊಟ ಕಳುಹಿಸುತ್ತಿದ್ದ ಅಕ್ಕಿನೇನಿ ನಾಗಾರ್ಜುನ; ಧನ್ಯವಾದ ಹೇಳಿದ ನಟಿ
ಆಶಿಕಾ-ಅಕ್ಕಿನೇನಿ ನಾಗಾರ್ಜುನ
Follow us
|

Updated on: Jan 11, 2024 | 12:14 PM

ಕನ್ನಡದ ನಟಿಯರು ಪರಭಾಷೆಯಲ್ಲಿ ಮಿಂಚುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ತೆಲುಗು, ಹಿಂದಿಯಲ್ಲಿ ದೊಡ್ಡ ಗೆಲುವು ಸಿಗುತ್ತಿದೆ. ಶ್ರದ್ಧಾ ಶ್ರೀನಾಥ್, ಶ್ರೀಲೀಲಾ (Srileela), ಮೊದಲಾದವರು ಪರಭಾಷೆಯಲ್ಲಿ ಮಿಂಚುತ್ತಿದ್ದಾರೆ. ಕನ್ನಡದ ನಟಿ ಆಶಿಕಾ ರಂಗನಾಥ್ ಅವರ ಎರಡನೇ ತೆಲುಗು ಸಿನಿಮಾ ‘ನಾ ಸಾಮಿ ರಂಗ’ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಅವರು ಮಾತನಾಡಿದ್ದಾರೆ. ಅಕ್ಕಿನೇನಿ ನಾಗಾರ್ಜುನ ಅವರು ತಮ್ಮನ್ನು ಯಾವ ರೀತಿ ಟ್ರೀಟ್ ಮಾಡಿದರು ಎಂಬುದನ್ನು ಅವರು ವಿವರಿಸಿದ್ದಾರೆ.

ಪರಭಾಷೆಯಲ್ಲಿ ಕನ್ನಡದ ನಟಿಯರಿಗೆ ಸಾಕಷ್ಟು ಗೌರವ ಹಾಗೂ ಪ್ರೀತಿ ಸಿಗುತ್ತಿದೆ. ಅಲ್ಲಿಯೂ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗುತ್ತಿದೆ. ಆಶಿಕಾ ರಂಗನಾಥ್ ಅವರಿಗೂ ಈ ಅನುಭವ ಆಗಿದೆ. ‘ನಾ ಸಾಮಿ ರಂಗ’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ನಡೆದಿದೆ. ವೇದಿಕೆ ಮೇಲೆ ಹಲವು ವಿಚಾರಗಳು ರಿವೀಲ್ ಆಗಿವೆ. ಈ ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಆಶಿಕಾಗೆ ಮನೆಯ ಊಟವೇ ಸಪ್ಲೈ ಆಗಿದೆ.

‘ನಾ ಸಾಮಿ ರಂಗ’ ಸಿನಿಮಾದ ಶೂಟಿಂಗ್​ಗಾಗಿ ಆಶಿಕಾ ಹಲವು ಬಾರಿ ಹೈದರಾಬಾದ್​ಗೆ ತೆರಳಿದ್ದಾರೆ. ಈ ವೇಳೆ ಅವರು ಹೋಟೆಲ್​ನಲ್ಲಿ ಉಳಿದುಕೊಳ್ಳುತ್ತಿದ್ದರು. ಫಿಟ್ನೆಸ್​ ಕಾಯ್ದುಕೊಳ್ಳಲು ಸ್ಟ್ರಿಕ್ಟ್ ಆಗಿ ಅವರು ಡಯಟ್ ಫಾಲೋ ಮಾಡುತ್ತಿದ್ದರು. ಅವರಿಗೆ ಹೋಟೆಲ್ ಊಟ ಅಡ್ಜಸ್ಟ್​ ಆಗುತ್ತಿರಲಿಲ್ಲ. ಹೀಗಾಗಿ, ಅವರಿಗೆ ಆರಂಭದಲ್ಲಿ ಇದು ಕಷ್ಟ ಎನಿಸಿತು.

ಇದನ್ನು ತಿಳಿದ ಅಕ್ಕಿನೇನಿ ನಾಗಾರ್ಜುನ ಅವರು ಆಶಿಕಾ ಹೈದರಾಬಾದ್​ನಲ್ಲಿ ಇದ್ದಷ್ಟೂ ದಿನ ಮನೆಯ ಊಟವನ್ನೇ ಕಳುಹಿಸಿಕೊಟ್ಟರು. ಪ್ರೀರಿಲೀಸ್ ಇವೆಂಟ್ ವೇದಿಕೆ ಮೇಲೆ ಆಶಿಕಾ ಅವರು ಇದಕ್ಕೆ ಧನ್ಯವಾದ ಹೇಳಿದ್ದಾರೆ. ‘ನನಗೆ ಎರಡನೇ ಮನೆ ಸಿಕ್ಕಿದೆ’ ಎಂದು ಆಶಿಕಾ ರಂಗನಾಥ್ ಹೇಳಿದ್ದಾರೆ. ಪ್ರೀ ರಿಲೀಸ್ ಇವೆಂಟ್​ನಲ್ಲಿ ಆಶಿಕಾ ಸಖತ್ ಆಗಿ ಡ್ಯಾನ್ಸ್​ ಮಾಡಿದ್ದಾರೆ.

ಇದನ್ನೂ ಓದಿ: ವೇದಿಕೆ ಮೇಲೆ ಆಶಿಕಾ ರಂಗನಾಥ್ ಡ್ಯಾನ್ಸ್ ನೋಡಿ ಫಿದಾ ಆದ ತೆಲುಗು ಮಂದಿ

ಆಶಿಕಾ ರಂಗನಾಥ್ ಅವರು ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಮೊದಲು ‘ಅಮಿಗೋಸ್’ ಹೆಸರಿನ ತೆಲುಗು ಸಿನಿಮಾದಲ್ಲಿ ಅವರು ನಟಿಸಿದ್ದರು. ಈಗ ಅವರ ಎರಡನೇ ತೆಲುಗು ಸಿನಿಮಾ ‘ನಾ ಸಾಮಿ ರಂಗ’ ಸಂಕ್ರಾಂತಿ ಪ್ರಯುಕ್ತ ಜನವರಿ 14ರಂದು ಬಿಡುಗಡೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ