‘ಮೆಗಾಸ್ಟಾರ್​’ ಚಿರಂಜೀವಿ ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದ ಆಶಿಕಾ ರಂಗನಾಥ್​

‘ನಾ ಸಾಮಿ ರಂಗ’ ಸಿನಿಮಾದಲ್ಲಿ ಅಕ್ಕಿನೇನಿ ನಾಗಾರ್ಜುನ ಜೊತೆ ಕನ್ನಡದ ನಟಿ ಆಶಿಕಾ ರಂಗನಾಥ್​ ಅಭಿನಯಿಸಿದ್ದರು. ಈಗ ಅವರು ತೆಲುಗಿನಲ್ಲಿ ಮೂರನೇ ಸಿನಿಮಾ ಒಪ್ಪಿಕೊಂಡಿದ್ದಾರೆ. ಚಿರಂಜೀವಿ ಅಭಿನಯದ ‘ವಿಶ್ವಂಭರ’ ಸಿನಿಮಾದಲ್ಲಿ ನಟಿಸುವ ಚಾನ್ಸ್​ ಆಶಿಕಾ ರಂಗನಾಥ್​ ಅವರಿಗೆ ಸಿಕ್ಕಿದೆ. ನಿರ್ಮಾಪಕರ ಕಡೆಯಿಂದ ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.

‘ಮೆಗಾಸ್ಟಾರ್​’ ಚಿರಂಜೀವಿ ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದ ಆಶಿಕಾ ರಂಗನಾಥ್​
ಆಶಿಕಾ ರಂಗನಾಥ್
Follow us
|

Updated on: May 24, 2024 | 5:48 PM

ನಟಿ ಆಶಿಕಾ ರಂಗನಾಥ್​ (Ashika Ranganath) ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕನ್ನಡದಲ್ಲಿ ಜನಪ್ರಿಯತೆ ಪಡೆದ ಅವರು ತೆಲುಗು ಚಿತ್ರರಂಗದಲ್ಲೂ ಶೈನ್​ ಆಗುತ್ತಿದ್ದಾರೆ. ಟಾಲಿವುಡ್​ನ ಸ್ಟಾರ್​ ಹೀರೋಗಳ ಜೊತೆ ನಟಿಸುವ ಅವಕಾಶ ಅವರಿಗೆ ಸಿಗುತ್ತಿದೆ. ಈಗಾಗಲೇ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿರುವ ಅವರಿಗೆ ಹೊಸದೊಂದು ಆಫರ್​ ಸಿಕ್ಕಿದೆ. ಮೆಗಾ ಸ್ಟಾರ್​ ಚಿರಂಜೀವಿ (Megastar Chiranjeevi) ಜೊತೆ ಆಶಿಕಾ ರಂಗನಾಥ್​ ನಟಿಸಲಿದ್ದಾರೆ. ಚಿರಂಜೀವಿ ಮುಖ್ಯ ಭೂಮಿಕೆ ನಿಭಾಯಿಸುತ್ತಿರುವ ‘ವಿಶ್ವಂಭರ’ (Viswambhara) ಸಿನಿಮಾದ ಪಾತ್ರವರ್ಗಕ್ಕೆ ಆಶಿಕಾ ರಂಗನಾಥ್​ ಸೇರ್ಪಡೆ ಆಗಿದ್ದಾರೆ.

2016ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಆಶಿಕಾ ರಂಗನಾಥ್​ ಅವರು ಕನ್ನಡದಲ್ಲಿ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಶರಣ್​, ಗಣೇಶ್​, ಸುದೀಪ್​, ಶಿವರಾಜ್​ಕುಮಾರ್​ ಮುಂತಾದ ಸ್ಟಾರ್​ ಹೀರೋಗಳ ಜೊತೆ ಅಭಿನಯಿಸಿದ್ದಾರೆ. ಈಗ ಅವರು ಕನ್ನಡದ ಜೊತೆ ತೆಲುಗಿನಲ್ಲೂ ಮಿಂಚುತ್ತಿದ್ದಾರೆ. ‘ವಿಶ್ವಂಭರ’ ಸಿನಿಮಾದ ಅವಕಾಶ ಸಿಕ್ಕಿರುವುದೇ ಈ ಮಾತಿಗೆ ಸಾಕ್ಷಿ.

ಇದನ್ನೂ ಓದಿ: ಕಣ್ಮನ ಸೆಳೆಯುವ ಫೋಟೋಗಳಿಂದ ಫ್ಯಾನ್ಸ್​ ಎದೆಗೆ ಲಗ್ಗೆಯಿಟ್ಟ ಆಶಿಕಾ

‘ಯು.ವಿ. ಕ್ರಿಯೇಷನ್ಸ್​’ ಮೂಲಕ ‘ವಿಶ್ವಂಭರ’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾಗೆ ತ್ರಿಷಾ ಕೃಷ್ಣನ್​ ನಾಯಕಿ. ಅವರ ಜೊತೆ ಆಶಿಕಾ ರಂಗನಾಥ್​ ಕೂಡ ಪಾತ್ರವರ್ಗದಲ್ಲಿ ಇರಲಿದ್ದಾರೆ. ಅವರ ಪಾತ್ರ ಯಾವ ರೀತಿ ಇರಲಿದೆ ಎಂಬುದನ್ನು ತಿಳಿಯುವ ಕೌತುಕ ಅಭಿಮಾನಿಗಳಿಗೆ ಇದೆ. ಆಶಿಕಾ ಆಯ್ಕೆ ಆಗಿರುವ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ.

2025ರ ಜನವರಿ 10ರಂದು ‘ವಿಶ್ವಂಭರ’ ಸಿನಿಮಾ ಬಿಡುಗಡೆ ಆಗಲಿದೆ. ಎಂಎಂ ಕೀರವಾಣಿ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಮಲ್ಲಿದಿ ವಸಿಷ್ಠ ಅವರು ‘ಬಿಂಬಿಸಾರ’ ಸಿನಿಮಾದ ಯಶಸ್ವಿನ ಬಳಿಕ ‘ವಿಶ್ವಂಭರ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಟಾಲಿವುಡ್​ನಲ್ಲಿ ಇದು ಬಹುನಿರೀಕ್ಷಿತ ಸಿನಿಮಾ ಆಗಿದೆ. ಇಂಥ ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದ ಅಶಿಕಾ ರಂಗನಾಥ್​ ಅವರಿಗೆ ಅಭಿಮಾನಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್