AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೆಗಾಸ್ಟಾರ್​’ ಚಿರಂಜೀವಿ ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದ ಆಶಿಕಾ ರಂಗನಾಥ್​

‘ನಾ ಸಾಮಿ ರಂಗ’ ಸಿನಿಮಾದಲ್ಲಿ ಅಕ್ಕಿನೇನಿ ನಾಗಾರ್ಜುನ ಜೊತೆ ಕನ್ನಡದ ನಟಿ ಆಶಿಕಾ ರಂಗನಾಥ್​ ಅಭಿನಯಿಸಿದ್ದರು. ಈಗ ಅವರು ತೆಲುಗಿನಲ್ಲಿ ಮೂರನೇ ಸಿನಿಮಾ ಒಪ್ಪಿಕೊಂಡಿದ್ದಾರೆ. ಚಿರಂಜೀವಿ ಅಭಿನಯದ ‘ವಿಶ್ವಂಭರ’ ಸಿನಿಮಾದಲ್ಲಿ ನಟಿಸುವ ಚಾನ್ಸ್​ ಆಶಿಕಾ ರಂಗನಾಥ್​ ಅವರಿಗೆ ಸಿಕ್ಕಿದೆ. ನಿರ್ಮಾಪಕರ ಕಡೆಯಿಂದ ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.

‘ಮೆಗಾಸ್ಟಾರ್​’ ಚಿರಂಜೀವಿ ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದ ಆಶಿಕಾ ರಂಗನಾಥ್​
ಆಶಿಕಾ ರಂಗನಾಥ್
ಮದನ್​ ಕುಮಾರ್​
|

Updated on: May 24, 2024 | 5:48 PM

Share

ನಟಿ ಆಶಿಕಾ ರಂಗನಾಥ್​ (Ashika Ranganath) ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕನ್ನಡದಲ್ಲಿ ಜನಪ್ರಿಯತೆ ಪಡೆದ ಅವರು ತೆಲುಗು ಚಿತ್ರರಂಗದಲ್ಲೂ ಶೈನ್​ ಆಗುತ್ತಿದ್ದಾರೆ. ಟಾಲಿವುಡ್​ನ ಸ್ಟಾರ್​ ಹೀರೋಗಳ ಜೊತೆ ನಟಿಸುವ ಅವಕಾಶ ಅವರಿಗೆ ಸಿಗುತ್ತಿದೆ. ಈಗಾಗಲೇ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿರುವ ಅವರಿಗೆ ಹೊಸದೊಂದು ಆಫರ್​ ಸಿಕ್ಕಿದೆ. ಮೆಗಾ ಸ್ಟಾರ್​ ಚಿರಂಜೀವಿ (Megastar Chiranjeevi) ಜೊತೆ ಆಶಿಕಾ ರಂಗನಾಥ್​ ನಟಿಸಲಿದ್ದಾರೆ. ಚಿರಂಜೀವಿ ಮುಖ್ಯ ಭೂಮಿಕೆ ನಿಭಾಯಿಸುತ್ತಿರುವ ‘ವಿಶ್ವಂಭರ’ (Viswambhara) ಸಿನಿಮಾದ ಪಾತ್ರವರ್ಗಕ್ಕೆ ಆಶಿಕಾ ರಂಗನಾಥ್​ ಸೇರ್ಪಡೆ ಆಗಿದ್ದಾರೆ.

2016ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಆಶಿಕಾ ರಂಗನಾಥ್​ ಅವರು ಕನ್ನಡದಲ್ಲಿ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಶರಣ್​, ಗಣೇಶ್​, ಸುದೀಪ್​, ಶಿವರಾಜ್​ಕುಮಾರ್​ ಮುಂತಾದ ಸ್ಟಾರ್​ ಹೀರೋಗಳ ಜೊತೆ ಅಭಿನಯಿಸಿದ್ದಾರೆ. ಈಗ ಅವರು ಕನ್ನಡದ ಜೊತೆ ತೆಲುಗಿನಲ್ಲೂ ಮಿಂಚುತ್ತಿದ್ದಾರೆ. ‘ವಿಶ್ವಂಭರ’ ಸಿನಿಮಾದ ಅವಕಾಶ ಸಿಕ್ಕಿರುವುದೇ ಈ ಮಾತಿಗೆ ಸಾಕ್ಷಿ.

ಇದನ್ನೂ ಓದಿ: ಕಣ್ಮನ ಸೆಳೆಯುವ ಫೋಟೋಗಳಿಂದ ಫ್ಯಾನ್ಸ್​ ಎದೆಗೆ ಲಗ್ಗೆಯಿಟ್ಟ ಆಶಿಕಾ

‘ಯು.ವಿ. ಕ್ರಿಯೇಷನ್ಸ್​’ ಮೂಲಕ ‘ವಿಶ್ವಂಭರ’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾಗೆ ತ್ರಿಷಾ ಕೃಷ್ಣನ್​ ನಾಯಕಿ. ಅವರ ಜೊತೆ ಆಶಿಕಾ ರಂಗನಾಥ್​ ಕೂಡ ಪಾತ್ರವರ್ಗದಲ್ಲಿ ಇರಲಿದ್ದಾರೆ. ಅವರ ಪಾತ್ರ ಯಾವ ರೀತಿ ಇರಲಿದೆ ಎಂಬುದನ್ನು ತಿಳಿಯುವ ಕೌತುಕ ಅಭಿಮಾನಿಗಳಿಗೆ ಇದೆ. ಆಶಿಕಾ ಆಯ್ಕೆ ಆಗಿರುವ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ.

2025ರ ಜನವರಿ 10ರಂದು ‘ವಿಶ್ವಂಭರ’ ಸಿನಿಮಾ ಬಿಡುಗಡೆ ಆಗಲಿದೆ. ಎಂಎಂ ಕೀರವಾಣಿ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಮಲ್ಲಿದಿ ವಸಿಷ್ಠ ಅವರು ‘ಬಿಂಬಿಸಾರ’ ಸಿನಿಮಾದ ಯಶಸ್ವಿನ ಬಳಿಕ ‘ವಿಶ್ವಂಭರ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಟಾಲಿವುಡ್​ನಲ್ಲಿ ಇದು ಬಹುನಿರೀಕ್ಷಿತ ಸಿನಿಮಾ ಆಗಿದೆ. ಇಂಥ ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದ ಅಶಿಕಾ ರಂಗನಾಥ್​ ಅವರಿಗೆ ಅಭಿಮಾನಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್