AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಐ ಲವ್ ಯಶ್’; ‘ಟಾಕ್ಸಿಕ್’ ಬಗ್ಗೆ ನಿರೀಕ್ಷೆ ಹೊರಹಾಕಿದ ಆಶಿಶ್ ಚಂಚ್ಲಾನಿ

ಬಾಲಿವುಡ್ ಯೂಟ್ಯೂಬರ್ ಆಶಿಶ್ ಚಂಚಲಾನಿ, ಯಶ್ ಅವರ ಬಹು ನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಬಗ್ಗೆ ಅಪಾರ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. 'ಐ ಲವ್ ಯಶ್' ಎಂದಿರುವ ಅವರು, ಈ ಚಿತ್ರ ಸೂಪರ್ ಹಿಟ್ ಆಗಲಿದೆ ಎಂದಿದ್ದಾರೆ. ಮಾರ್ಚ್ 19ರಂದು ರಣವೀರ್ ಸಿಂಗ್ ಅವರ 'ಧುರಂಧರ್ 2' ಜೊತೆ 'ಟಾಕ್ಸಿಕ್' ದೊಡ್ಡ ಕ್ಲ್ಯಾಶ್ ಎದುರಿಸುತ್ತಿದ್ದು, ಆಶಿಶ್ ಎರಡೂ ಚಿತ್ರಗಳು ಗೆಲ್ಲಬೇಕು ಎಂದು ಹಾರೈಸಿದ್ದಾರೆ.

‘ಐ ಲವ್ ಯಶ್’; ‘ಟಾಕ್ಸಿಕ್’ ಬಗ್ಗೆ ನಿರೀಕ್ಷೆ ಹೊರಹಾಕಿದ ಆಶಿಶ್ ಚಂಚ್ಲಾನಿ
ಆಶಿಶ್ ಚಂಚ್ಲಾನಿ
ರಾಜೇಶ್ ದುಗ್ಗುಮನೆ
|

Updated on: Feb 05, 2026 | 9:08 AM

Share

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಸೂಪರ್ ಹಿಟ್ ಆಗುವ ನಿರೀಕ್ಷೆ ಇದೆ. ಮಲಯಾಳಂನ ಗೀತು ಮೋಹನ್​​ದಾಸ್ ನಿರ್ದೇಶನದ ಈ ಚಿತ್ರ ಮಾರ್ಚ್ 19ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಬಾಲಿವುಡ್ ಯೂಟ್ಯೂಬರ್ ಹಾಗೂ ನಟ ಆಶಿಶ್ ಚಂಚ್ಲಾನಿ ನಿರೀಕ್ಷೆ ಹೊರಹಾಕಿದ್ದಾರೆ. ‘ಐ ಲವ್ ಯಶ್’ ಎಂದು ಅವರು ಪ್ರೀತಿಯಿಂದ ಹೇಳಿಕೊಂಡಿದ್ದಾರೆ.

ಯಶ್ ಅವರು ಭಾರತ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ‘ಕೆಜಿಎಫ್ 2’ ಬಳಿಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಅವರಿಗೆ ಅಭಿಮಾನಿಗಳು ಸೃಷ್ಟಿ ಆಗಿದೆ. ಈ ಕಾರಣಕ್ಕೆ ‘ಟಾಕ್ಸಿಕ್’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಸಿನಿಮಾದ ಟೀಸರ್ ಹಲ್​​ಚಲ್ ಸೃಷ್ಟಿಸಿದೆ. ಈ ಟೀಸರ್ ನೋಡಿದ ಅನೇಕರು ಅಚ್ಚರಿ ಹೊರಹಾಕಿದ್ದಾರೆ. ಹೀಗಿರುವಾಗಲೇ ಆಶಿಶ್ ಚಂಚ್ಲಾನಿ ಈ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ.

ಮಾರ್ಚ್ 19ರಂದು ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ರಿಲೀಸ್ ಆಗುತ್ತಿದೆ. ‘ಟಾಕ್ಸಿಕ್’ ಕೂಡ ಅದೇ ದಿನ ತೆರೆಗೆ ಬರುತ್ತಿದೆ. ಎರಡೂ ಸಿನಿಮಾಗಳ ಮಧ್ಯೆ ದೊಡ್ಡ ಕ್ಲ್ಯಾಶ್ ಏರ್ಪಡೋದು ಪಕ್ಕಾ ಆಗಿದೆ. ಈ ಎರಡು ಸಿನಿಮಾಗಳಲ್ಲಿ ಯಾರು ಗೆಲ್ಲಬೇಕು ಎಂದು ಹೇಳಿಕೊಂಡಿದ್ದಾರೆ.

ಆಶಿಶ್ ಅವರಿಗೆ ಎರಡೂ ಸಿನಿಮಾ ಗೆಲ್ಲಬೇಕು ಎಂಬ ಬಯಕೆ ಇದೆ. ‘ಟಾಕ್ಸಿಕ್ ಹಾಗೂ ಧರುಂಧರ್ 2 ಬರ್ತಾ ಇದೆ. ಯಾವ ಸಿನಿಮಾ ಚೆನ್ನಾಗಿ ಮಾಡುತ್ತದೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಐ ಲವ್ ಯಶ್. ರಣವೀರ್ ಕೂಡ ಇಷ್ಟ. ಎರಡೂ ಸಿನಿಮಾಗಳು ಗೆಲ್ಲಬೇಕು’ ಎಂದು ಆಶಿಶ್ ಚಂಚ್ಲಾನಿ ಹೇಳಿದ್ದಾರೆ.

ಇದನ್ನೂ ಓದಿ: ‘ಧುರಂಧಂರ್ 2’ ಟೀಸರ್ 9 ಮಿಲಿಯನ್, ‘ಟಾಕ್ಸಿಕ್’ ಟೀಸರ್ 97 ಮಿಲಿಯನ್; ಅಜಗಜಾಂತರ ವ್ಯತ್ಯಾಸ

‘ಧುರಂಧರ್’ ಸಿನಿಮಾ ಈಗಾಗಲೇ ತನ್ನನ್ನು ತಾನು ಸಾಬೀತು ಮಾಡಿಕೊಂಡಿದೆ. ‘ಧುರಂಧರ್ 2’ ಚಿತ್ರದ ಬಗ್ಗೆ ನಿರೀಕ್ಷೆ ಮೂಡಲು ಇದುವೇ ಕಾರಣ. ‘ಟಾಕ್ಸಿಕ್’ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಹೊಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ
ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ
ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 1 ಕೋಟಿಗೂ ಅಧಿಕ ಮೌಲ್ಯದ ಕಾರುಗಳು ಭಸ್ಮ
ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 1 ಕೋಟಿಗೂ ಅಧಿಕ ಮೌಲ್ಯದ ಕಾರುಗಳು ಭಸ್ಮ
ಹವಳ ಧಾರಣೆಯಿಂದ ಏನು ಲಾಭಗಳು, ಇದು ಯಾರಿಗೆ ಸೂಕ್ತ?
ಹವಳ ಧಾರಣೆಯಿಂದ ಏನು ಲಾಭಗಳು, ಇದು ಯಾರಿಗೆ ಸೂಕ್ತ?
ದಿನದ ಪಂಚಾಂಗ ಮತ್ತು ಸಂಕಷ್ಟಿ ಚತುರ್ಥಿಯ ಮಹತ್ವ
ದಿನದ ಪಂಚಾಂಗ ಮತ್ತು ಸಂಕಷ್ಟಿ ಚತುರ್ಥಿಯ ಮಹತ್ವ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ