‘ಎಲ್ಲವನ್ನೂ ಸಮಾನವಾಗಿ ಸ್ವೀಕರಿಸಬೇಕು’; ‘ಗಜಪಡೆ’ ಪೋಸ್ಟ್ ಬಗ್ಗೆ ಅಶ್ವಿನಿ ಪರೋಕ್ಷ ಮಾತು

ಪಿಆರ್​ಕೆ ಸ್ಟುಡಿಯೋ ಅಡಿಯಲ್ಲಿ  ‘ಓ2’ ಸಿನಿಮಾ ನಿರ್ಮಾಣ ಮಾಡಿದ್ದಾರೆ ಅವರು. ಈ ಚಿತ್ರದ ಸುದ್ದಿಗೋಷ್ಠಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಹೋಟೆಲ್ ಒಂದರಲ್ಲಿ ನಡೆದಿದೆ. ಈ ವೇಳೆ ಅಶ್ವಿನಿ ಮಾತನಾಡಿದ್ದಾರೆ.

‘ಎಲ್ಲವನ್ನೂ ಸಮಾನವಾಗಿ ಸ್ವೀಕರಿಸಬೇಕು’; ‘ಗಜಪಡೆ’ ಪೋಸ್ಟ್ ಬಗ್ಗೆ ಅಶ್ವಿನಿ ಪರೋಕ್ಷ ಮಾತು
ಪುನೀತ್-ಅಶ್ವಿನಿ
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 06, 2024 | 2:22 PM

ಪುನೀತ್ ರಾಜ್​ಕುಮಾರ್ (Puneeth Rajkumar) ಪತ್ನಿ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಸದ್ಯ ಸುದ್ದಿಯಲ್ಲಿದ್ದಾರೆ. ‘ಗಜಪಡೆ’ ಹೆಸರಿನ ಟ್ವಿಟರ್ ಖಾತೆ ಮೂಲಕ ವ್ಯಕ್ತಿಯೋರ್ವ ಅಶ್ವಿನಿ ಅವರ ಬಗ್ಗೆ ತುಂಬಾನೇ ಕೀಳುಮಟ್ಟದ ಪದ ಬಳಕೆ ಮಾಡಿದ್ದ. ಇದು ದರ್ಶನ್ ಅಭಿಮಾನಿಯ ಖಾತೆ ಎಂದು ಹೇಳಲಾಗುತ್ತಿದೆ. ಈ ವಿಚಾರ ತನಿಖೆ ಬಳಿಕವೇ ಗೊತ್ತಾಗಬೇಕಿದೆ. ಈಗ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.

ಪುನೀತ್ ನಿಧನದ ನಂತರ ಪಿಆರ್​ಕೆ ಸ್ಟುಡಿಯೋ ಜವಾಬ್ದಾರಿಯನ್ನು ಅಶ್ವಿನಿ ಅವರೇ ತೆಗೆದುಕೊಂಡಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಿಆರ್​ಕೆ ಸ್ಟುಡಿಯೋ ಅಡಿಯಲ್ಲಿ  ‘ಓ2’ ಸಿನಿಮಾ ನಿರ್ಮಾಣ ಮಾಡಿದ್ದಾರೆ ಅವರು. ಈ ಚಿತ್ರದ ಸುದ್ದಿಗೋಷ್ಠಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಹೋಟೆಲ್ ಒಂದರಲ್ಲಿ ನಡೆದಿದೆ. ಈ ವೇಳೆ ಅಶ್ವಿನಿ ಮಾತನಾಡಿದ್ದಾರೆ.

ಇದನ್ನೂ ಓದಿ: Exclusive: ಅಶ್ವಿನಿ ಪುನೀತ್ ಕುರಿತ ಪೋಸ್ಟ್ ನೋಡಿ ಬೇಸರಗೊಂಡ ದರ್ಶನ್; ಕೊಟ್ಟ ಸೂಚನೆ ಏನು?

‘ಪಾಸಿಟಿವ್ ಮತ್ತು ನೆಗೆಟಿವ್​ನ ಹೇಗೆ ತೆಗೆದುಕೊಳ್ಳುತ್ತಿರಿ’ ಎನ್ನುವ ಪ್ರಶ್ನೆಯನ್ನು ಮಾಡಲಾಗಿದೆ. ಇದಕ್ಕೆ ಅವರು ನೇರ ಉತ್ತರ ನೀಡಿದ್ದಾರೆ. ‘ಬೇರೆ ಆಯ್ಕೆ ಇಲ್ಲ. ಜೀವನ ಸಾಗಲೇಬೇಕು. ಎರಡನ್ನೂ ಸಮಾನವಾಗಿ ಸ್ವೀಕರಿಸುತ್ತೇನೆ’ ಎಂದಿದ್ದಾರೆ ಅವರು. ಈ ಮೂಲಕ ಸಾಕಷ್ಟು ಚರ್ಚೆ ಆದ ಘಟನೆಗೆ ಪರೋಕ್ಷವಾಗಿ ಅವರು ಉತ್ತರಿಸಿದ್ದಾರೆ. ಪಿಆರ್​​ಕೆ ಅಡಿಯಲ್ಲಿ ಸಿದ್ಧವಾಗುತ್ತಿದ್ದ ಸಿನಿಮಾಗಳಿಗೆ ಪುನೀತ್ ಅವರು ಕಥೆ ಕೇಳಿ ಫೈನಲ್ ಮಾಡುತ್ತಿದ್ದರು. ‘ಒ2’ ಚಿತ್ರದವರೆಗೂ ಅಪ್ಪು ಕಥೆಯನ್ನು ಕೇಳಿದ್ದರು. ಇನ್ಮುಂದೆ ನನ್ನ ಮತ್ತು ನನ್ನ ಟೀಮ್ ನಿರ್ಧಾರ ಇರುತ್ತದೆ’ ಎಂದು ಅವರು ಹೇಳಿದ್ದಾರೆ.

ಅಪ್ಪು ರೀ-ರಿಲೀಸ್

ಈ ವರ್ಷ ಪುನೀತ್ ರಾಜ್​ಕುಮಾರ್ ಬರ್ತ್​​ಡೇ ಪ್ರಯುಕ್ತ ‘ಜಾಕಿ’ ಸಿನಿಮಾ ರಿಲೀಸ್ ಆಗಿತ್ತು. ಅನೇಕರು ‘ಅಪ್ಪು’ ಚಿತ್ರನ್ನು ಮರು ಬಿಡುಗಡೆ ಮಾಡಲು ಕೋರಿಕೊಂಡಿದ್ದರು. ಈ ಬಗ್ಗೆ ಅವರು ಮಾತನಾಡಿದ್ದಾರೆ. 2025ರ ಪುನೀತ್ ಬರ್ತ್​ಡೇಗೆ (ಮಾರ್ಚ್ 17) ‘ಅಪ್ಪು’ ಮತ್ತೆ ಬಿಡುಗಡೆ ಆಗಲಿದೆಯಂತೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಪುನೀತ್ ಹೀರೋ ಆಗಿ ಎಂಟ್ರಿ ಕೊಟ್ಟಿದ್ದು ‘ಅಪ್ಪು’ ಸಿನಿಮಾ ಮೂಲಕ. ಅವರ ಜನಪ್ರಿಯತೆಯನ್ನು ಸಿನಿಮಾ ಹೆಚ್ಚಿಸಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?