AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲ್ಲವನ್ನೂ ಸಮಾನವಾಗಿ ಸ್ವೀಕರಿಸಬೇಕು’; ‘ಗಜಪಡೆ’ ಪೋಸ್ಟ್ ಬಗ್ಗೆ ಅಶ್ವಿನಿ ಪರೋಕ್ಷ ಮಾತು

ಪಿಆರ್​ಕೆ ಸ್ಟುಡಿಯೋ ಅಡಿಯಲ್ಲಿ  ‘ಓ2’ ಸಿನಿಮಾ ನಿರ್ಮಾಣ ಮಾಡಿದ್ದಾರೆ ಅವರು. ಈ ಚಿತ್ರದ ಸುದ್ದಿಗೋಷ್ಠಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಹೋಟೆಲ್ ಒಂದರಲ್ಲಿ ನಡೆದಿದೆ. ಈ ವೇಳೆ ಅಶ್ವಿನಿ ಮಾತನಾಡಿದ್ದಾರೆ.

‘ಎಲ್ಲವನ್ನೂ ಸಮಾನವಾಗಿ ಸ್ವೀಕರಿಸಬೇಕು’; ‘ಗಜಪಡೆ’ ಪೋಸ್ಟ್ ಬಗ್ಗೆ ಅಶ್ವಿನಿ ಪರೋಕ್ಷ ಮಾತು
ಪುನೀತ್-ಅಶ್ವಿನಿ
Mangala RR
| Updated By: ರಾಜೇಶ್ ದುಗ್ಗುಮನೆ|

Updated on: Apr 06, 2024 | 2:22 PM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಪತ್ನಿ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಸದ್ಯ ಸುದ್ದಿಯಲ್ಲಿದ್ದಾರೆ. ‘ಗಜಪಡೆ’ ಹೆಸರಿನ ಟ್ವಿಟರ್ ಖಾತೆ ಮೂಲಕ ವ್ಯಕ್ತಿಯೋರ್ವ ಅಶ್ವಿನಿ ಅವರ ಬಗ್ಗೆ ತುಂಬಾನೇ ಕೀಳುಮಟ್ಟದ ಪದ ಬಳಕೆ ಮಾಡಿದ್ದ. ಇದು ದರ್ಶನ್ ಅಭಿಮಾನಿಯ ಖಾತೆ ಎಂದು ಹೇಳಲಾಗುತ್ತಿದೆ. ಈ ವಿಚಾರ ತನಿಖೆ ಬಳಿಕವೇ ಗೊತ್ತಾಗಬೇಕಿದೆ. ಈಗ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.

ಪುನೀತ್ ನಿಧನದ ನಂತರ ಪಿಆರ್​ಕೆ ಸ್ಟುಡಿಯೋ ಜವಾಬ್ದಾರಿಯನ್ನು ಅಶ್ವಿನಿ ಅವರೇ ತೆಗೆದುಕೊಂಡಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಿಆರ್​ಕೆ ಸ್ಟುಡಿಯೋ ಅಡಿಯಲ್ಲಿ  ‘ಓ2’ ಸಿನಿಮಾ ನಿರ್ಮಾಣ ಮಾಡಿದ್ದಾರೆ ಅವರು. ಈ ಚಿತ್ರದ ಸುದ್ದಿಗೋಷ್ಠಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಹೋಟೆಲ್ ಒಂದರಲ್ಲಿ ನಡೆದಿದೆ. ಈ ವೇಳೆ ಅಶ್ವಿನಿ ಮಾತನಾಡಿದ್ದಾರೆ.

ಇದನ್ನೂ ಓದಿ: Exclusive: ಅಶ್ವಿನಿ ಪುನೀತ್ ಕುರಿತ ಪೋಸ್ಟ್ ನೋಡಿ ಬೇಸರಗೊಂಡ ದರ್ಶನ್; ಕೊಟ್ಟ ಸೂಚನೆ ಏನು?

‘ಪಾಸಿಟಿವ್ ಮತ್ತು ನೆಗೆಟಿವ್​ನ ಹೇಗೆ ತೆಗೆದುಕೊಳ್ಳುತ್ತಿರಿ’ ಎನ್ನುವ ಪ್ರಶ್ನೆಯನ್ನು ಮಾಡಲಾಗಿದೆ. ಇದಕ್ಕೆ ಅವರು ನೇರ ಉತ್ತರ ನೀಡಿದ್ದಾರೆ. ‘ಬೇರೆ ಆಯ್ಕೆ ಇಲ್ಲ. ಜೀವನ ಸಾಗಲೇಬೇಕು. ಎರಡನ್ನೂ ಸಮಾನವಾಗಿ ಸ್ವೀಕರಿಸುತ್ತೇನೆ’ ಎಂದಿದ್ದಾರೆ ಅವರು. ಈ ಮೂಲಕ ಸಾಕಷ್ಟು ಚರ್ಚೆ ಆದ ಘಟನೆಗೆ ಪರೋಕ್ಷವಾಗಿ ಅವರು ಉತ್ತರಿಸಿದ್ದಾರೆ. ಪಿಆರ್​​ಕೆ ಅಡಿಯಲ್ಲಿ ಸಿದ್ಧವಾಗುತ್ತಿದ್ದ ಸಿನಿಮಾಗಳಿಗೆ ಪುನೀತ್ ಅವರು ಕಥೆ ಕೇಳಿ ಫೈನಲ್ ಮಾಡುತ್ತಿದ್ದರು. ‘ಒ2’ ಚಿತ್ರದವರೆಗೂ ಅಪ್ಪು ಕಥೆಯನ್ನು ಕೇಳಿದ್ದರು. ಇನ್ಮುಂದೆ ನನ್ನ ಮತ್ತು ನನ್ನ ಟೀಮ್ ನಿರ್ಧಾರ ಇರುತ್ತದೆ’ ಎಂದು ಅವರು ಹೇಳಿದ್ದಾರೆ.

ಅಪ್ಪು ರೀ-ರಿಲೀಸ್

ಈ ವರ್ಷ ಪುನೀತ್ ರಾಜ್​ಕುಮಾರ್ ಬರ್ತ್​​ಡೇ ಪ್ರಯುಕ್ತ ‘ಜಾಕಿ’ ಸಿನಿಮಾ ರಿಲೀಸ್ ಆಗಿತ್ತು. ಅನೇಕರು ‘ಅಪ್ಪು’ ಚಿತ್ರನ್ನು ಮರು ಬಿಡುಗಡೆ ಮಾಡಲು ಕೋರಿಕೊಂಡಿದ್ದರು. ಈ ಬಗ್ಗೆ ಅವರು ಮಾತನಾಡಿದ್ದಾರೆ. 2025ರ ಪುನೀತ್ ಬರ್ತ್​ಡೇಗೆ (ಮಾರ್ಚ್ 17) ‘ಅಪ್ಪು’ ಮತ್ತೆ ಬಿಡುಗಡೆ ಆಗಲಿದೆಯಂತೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಪುನೀತ್ ಹೀರೋ ಆಗಿ ಎಂಟ್ರಿ ಕೊಟ್ಟಿದ್ದು ‘ಅಪ್ಪು’ ಸಿನಿಮಾ ಮೂಲಕ. ಅವರ ಜನಪ್ರಿಯತೆಯನ್ನು ಸಿನಿಮಾ ಹೆಚ್ಚಿಸಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?