Sign In

By signing in or creating an account, you agree with Associated Broadcasting Company's Terms & Conditions and Privacy Policy.

Saran Raj Passes Away: ಸಹಾಯಕ ನಿರ್ದೇಶಕ ಶರಣ್​ ರಾಜ್ ಅಪಘಾತದಲ್ಲಿ ನಿಧನ; ಪೋಷಕ ನಟನ ಕುಡಿತದಿಂದ ಸಂಭವಿಸಿತು ಸಾವು

ಜೂನ್ 8ರಂದು ರಾತ್ರಿ 11:30ರ ಸುಮಾರಿಗೆ ಶರಣ್ ರಾಜ್ ಅವರು ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪೋಷಕ ನಟ ಪಳನಿಪ್ಪನ್​ ಅವರು ಶರಣ್ ರಾಜ್ ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ.

Saran Raj Passes Away: ಸಹಾಯಕ ನಿರ್ದೇಶಕ ಶರಣ್​ ರಾಜ್ ಅಪಘಾತದಲ್ಲಿ ನಿಧನ; ಪೋಷಕ ನಟನ ಕುಡಿತದಿಂದ ಸಂಭವಿಸಿತು ಸಾವು
ಶರಣ್ ರಾಜ್
Follow us
ರಾಜೇಶ್ ದುಗ್ಗುಮನೆ
|

Updated on:Jun 09, 2023 | 2:15 PM

ತಮಿಳು ಚಿತ್ರರಂಗದ ನಟ ಹಾಗೂ ಸಹಾಯಕ ನಿರ್ದೇಶಕ ಶರಣ್ ರಾಜ್ (Saran Raj) ಅವರು ಚೆನ್ನೈನ ಕೆಕೆ ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಣ್ಣ ವಯಸ್ಸಿಗೆ ಅವರು ನಿಧನ ಹೊಂದಿದ್ದು ಅವರ ಗೆಳೆಯರು ಹಾಗೂ ಅಭಿಮಾನಿಗಳಿಗೆ ದುಃಖ ಆಗಿದೆ. ಸೋಶಿಯಲ್ ಮೀಡಿಯಾ ಮೂಲಕ ಅವರ ಸಾವಿಗೆ ಸಂತಾಪ ಸೂಚಿಸಲಾಗುತ್ತಿದೆ. ಪಳನಿಪ್ಪನ್ ಹೆಸರಿನ ಪೋಷಕ ನಟ ಕುಡಿದು ಕಾರು ಚಲಾಯಿಸಿ ಶರಣ್ ರಾಜ್​ ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ ಎಂಬುದು ತಿಳಿದು ಬಂದಿದೆ. ಶರಣ್ ರಾಜ್ ಆಸ್ಪತ್ರೆಗೆ ದಾಖಲಾದರೂ ಯಾವುದೇ ಪ್ರಯೋಜನ ಆಗಿಲ್ಲ.

ಜೂನ್ 8ರಂದು ರಾತ್ರಿ 11:30ರ ಸುಮಾರಿಗೆ ಶರಣ್ ರಾಜ್ ಅವರು ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪೋಷಕ ನಟ ಪಳನಿಪ್ಪನ್​ ಅವರು ಶರಣ್ ರಾಜ್ ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ. ಶರಣ್ ರಾಜ್ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ.

ಈ ಘಟನೆ ಬೆನ್ನಲ್ಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಪಳನಿಪ್ಪನ್ ವಿರುದ್ಧ ಕೇಸ್ ದಾಖಲಾಗಿದೆ. ಸದ್ಯ ಶರಣ್ ರಾಜ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸದ್ಯ ಪಳನಿಪ್ಪನ್ ಪೊಲೀಸರ ಎದುರು ಹಾಜರಾಗಿದ್ದಾರೆ ಎನ್ನಲಾಗಿದೆ. ಶರಣ್ ರಾಜ್ ಕುಟುಂಬ ಹಾಗೂ ಗೆಳೆಯರಿಗೆ ಈ ಘಟನೆ ಶಾಕ್ ತಂದಿದೆ. ಈ ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ. (Source)

ಇದನ್ನೂ ಓದಿ: Adipurush: ಸಿಕ್ತು ‘ಆದಿಪುರುಷ್​’ ಚಿತ್ರದ ಸೆನ್ಸಾರ್​ ಸರ್ಟಿಫಿಕೇಟ್​; ಅಬ್ಬಬ್ಬಾ ಈ ಸಿನಿಮಾದ ಅವಧಿ ಇಷ್ಟೊಂದಾ?

ದಕ್ಷಿಣ ಭಾರತದಲ್ಲಿ ವೆಟ್ರಿಮಾರನ್​ಗೆ ಸಾಕಷ್ಟು ಹೆಸರು ಇದೆ. ಅವರಿಗೆ ಸಹಾಯಕರಾಗಿ ಶರಣ್ ರಾಜ್​ ಅವರು ಇದ್ದರು. ವೆಟ್ರಿಮಾರನ್ ಅವರು ‘ವಡಾ ಚೆನ್ನೈ’ ‘ಅಸುರನ್’ ಸೇರಿ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.  ‘ಅಸುರನ್​’ ಸಿನಿಮಾದಲ್ಲಿ ಶರಣ್ ರಾಜ್ ಅವರು ಸಹಾಯಕ ನಿರ್ದೇಶಕರಾಗಿದ್ದರು. ಜೊತೆಗೆ ಒಂದು ಪಾತ್ರದಲ್ಲಿ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:30 pm, Fri, 9 June 23

ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ