AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saran Raj Passes Away: ಸಹಾಯಕ ನಿರ್ದೇಶಕ ಶರಣ್​ ರಾಜ್ ಅಪಘಾತದಲ್ಲಿ ನಿಧನ; ಪೋಷಕ ನಟನ ಕುಡಿತದಿಂದ ಸಂಭವಿಸಿತು ಸಾವು

ಜೂನ್ 8ರಂದು ರಾತ್ರಿ 11:30ರ ಸುಮಾರಿಗೆ ಶರಣ್ ರಾಜ್ ಅವರು ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪೋಷಕ ನಟ ಪಳನಿಪ್ಪನ್​ ಅವರು ಶರಣ್ ರಾಜ್ ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ.

Saran Raj Passes Away: ಸಹಾಯಕ ನಿರ್ದೇಶಕ ಶರಣ್​ ರಾಜ್ ಅಪಘಾತದಲ್ಲಿ ನಿಧನ; ಪೋಷಕ ನಟನ ಕುಡಿತದಿಂದ ಸಂಭವಿಸಿತು ಸಾವು
ಶರಣ್ ರಾಜ್
ರಾಜೇಶ್ ದುಗ್ಗುಮನೆ
|

Updated on:Jun 09, 2023 | 2:15 PM

Share

ತಮಿಳು ಚಿತ್ರರಂಗದ ನಟ ಹಾಗೂ ಸಹಾಯಕ ನಿರ್ದೇಶಕ ಶರಣ್ ರಾಜ್ (Saran Raj) ಅವರು ಚೆನ್ನೈನ ಕೆಕೆ ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಣ್ಣ ವಯಸ್ಸಿಗೆ ಅವರು ನಿಧನ ಹೊಂದಿದ್ದು ಅವರ ಗೆಳೆಯರು ಹಾಗೂ ಅಭಿಮಾನಿಗಳಿಗೆ ದುಃಖ ಆಗಿದೆ. ಸೋಶಿಯಲ್ ಮೀಡಿಯಾ ಮೂಲಕ ಅವರ ಸಾವಿಗೆ ಸಂತಾಪ ಸೂಚಿಸಲಾಗುತ್ತಿದೆ. ಪಳನಿಪ್ಪನ್ ಹೆಸರಿನ ಪೋಷಕ ನಟ ಕುಡಿದು ಕಾರು ಚಲಾಯಿಸಿ ಶರಣ್ ರಾಜ್​ ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ ಎಂಬುದು ತಿಳಿದು ಬಂದಿದೆ. ಶರಣ್ ರಾಜ್ ಆಸ್ಪತ್ರೆಗೆ ದಾಖಲಾದರೂ ಯಾವುದೇ ಪ್ರಯೋಜನ ಆಗಿಲ್ಲ.

ಜೂನ್ 8ರಂದು ರಾತ್ರಿ 11:30ರ ಸುಮಾರಿಗೆ ಶರಣ್ ರಾಜ್ ಅವರು ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪೋಷಕ ನಟ ಪಳನಿಪ್ಪನ್​ ಅವರು ಶರಣ್ ರಾಜ್ ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ. ಶರಣ್ ರಾಜ್ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ.

ಈ ಘಟನೆ ಬೆನ್ನಲ್ಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಪಳನಿಪ್ಪನ್ ವಿರುದ್ಧ ಕೇಸ್ ದಾಖಲಾಗಿದೆ. ಸದ್ಯ ಶರಣ್ ರಾಜ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸದ್ಯ ಪಳನಿಪ್ಪನ್ ಪೊಲೀಸರ ಎದುರು ಹಾಜರಾಗಿದ್ದಾರೆ ಎನ್ನಲಾಗಿದೆ. ಶರಣ್ ರಾಜ್ ಕುಟುಂಬ ಹಾಗೂ ಗೆಳೆಯರಿಗೆ ಈ ಘಟನೆ ಶಾಕ್ ತಂದಿದೆ. ಈ ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ. (Source)

ಇದನ್ನೂ ಓದಿ: Adipurush: ಸಿಕ್ತು ‘ಆದಿಪುರುಷ್​’ ಚಿತ್ರದ ಸೆನ್ಸಾರ್​ ಸರ್ಟಿಫಿಕೇಟ್​; ಅಬ್ಬಬ್ಬಾ ಈ ಸಿನಿಮಾದ ಅವಧಿ ಇಷ್ಟೊಂದಾ?

ದಕ್ಷಿಣ ಭಾರತದಲ್ಲಿ ವೆಟ್ರಿಮಾರನ್​ಗೆ ಸಾಕಷ್ಟು ಹೆಸರು ಇದೆ. ಅವರಿಗೆ ಸಹಾಯಕರಾಗಿ ಶರಣ್ ರಾಜ್​ ಅವರು ಇದ್ದರು. ವೆಟ್ರಿಮಾರನ್ ಅವರು ‘ವಡಾ ಚೆನ್ನೈ’ ‘ಅಸುರನ್’ ಸೇರಿ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.  ‘ಅಸುರನ್​’ ಸಿನಿಮಾದಲ್ಲಿ ಶರಣ್ ರಾಜ್ ಅವರು ಸಹಾಯಕ ನಿರ್ದೇಶಕರಾಗಿದ್ದರು. ಜೊತೆಗೆ ಒಂದು ಪಾತ್ರದಲ್ಲಿ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:30 pm, Fri, 9 June 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ