AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್​ 4ನೇ ಮದುವೆಯಾಗ್ತಾರೆ, ರಾಜಕೀಯದಲ್ಲಿ ಏಳ್ಗೆಯಿಲ್ಲ: ವೇಣು ಸ್ವಾಮಿ ಭವಿಷ್ಯ

Pawan Kalyan: ನಟ ಪವನ್ ಕಲ್ಯಾಣ್​ ಈಗಾಗಲೇ ಮೂರು ಮದುವೆಯಾಗಿದ್ದಾರೆ. ಆದರೆ ಪವನ್​ರ ವೈವಾಹಿಕ ಜೀವನದ ಬಗ್ಗೆ ಭವಿಷ್ಯ ನುಡಿದಿರುವ ವೇಣುಸ್ವಾಮಿ, ಪವನ್​ ಮತ್ತೆ ಮದುವೆ ಆಗಲಿದ್ದಾರೆ ಎಂದಿದ್ದಾರೆ.

ಪವನ್ ಕಲ್ಯಾಣ್​ 4ನೇ ಮದುವೆಯಾಗ್ತಾರೆ, ರಾಜಕೀಯದಲ್ಲಿ ಏಳ್ಗೆಯಿಲ್ಲ: ವೇಣು ಸ್ವಾಮಿ ಭವಿಷ್ಯ
ಪವನ್ ಕಲ್ಯಾಣ್
ಮಂಜುನಾಥ ಸಿ.
|

Updated on: Jan 05, 2024 | 8:57 PM

Share

ತೆಲುಗು ರಾಜ್ಯಗಳ ಸೆಲೆಬ್ರಿಟಿ ಜ್ಯೋತಿಷಿ (Astrologer) ಎನಿಸಿಕೊಂಡಿರುವ ವೇಣು ಸ್ವಾಮಿ, ತೆಲುಗಿನ ಜನಪ್ರಿಯ ಸ್ಟಾರ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ (Pawan Kalyan) ಕುರಿತು ಭವಿಷ್ಯ ನುಡಿದಿದ್ದಾರೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಪವನ್ ಕಲ್ಯಾಣ್​ರ ಖಾಸಗಿ ಜೀವನ, ರಾಜಕೀಯ ಜೀವನದ ಬಗ್ಗೆ ವೇಣು ಸ್ವಾಮಿ ಮಾತನಾಡಿದ್ದಾರೆ. ಪವನ್ ಕಲ್ಯಾಣ್ ಮುಂದೆ ಏನು ಮಾಡಿದರೆ ಅವರ ಜಿವನದಲ್ಲಿ ಏಳ್ಗೆ ಇರುತ್ತದೆ ಎಂಬ ಬಗ್ಗೆಯೂ ಭವಿಷ್ಯ ಹೇಳಿದ್ದಾರೆ.

ಪವನ್ ಕಲ್ಯಾಣ್ ರ ರಾಜಕೀಯ ವಿರೋಧಿಗಳು ಅವರ ಮೂರು ಮದುವೆ ವಿಷಯವನ್ನು ಸದಾ ಪವನ್​ರ ವಿರುದ್ಧ ಅಸ್ತ್ರವಾಗಿ ಬಳಸುತ್ತಿರುತ್ತಾರೆ. ಪವನ್​ಗೆ ಈಗಾಗಲೇ ಮೂರು ಮದುವೆಗಳಾಗಿವೆ, ಮೂರನೇ ಪತ್ನಿಗೂ ವಿಚ್ಛೇದನ ನೀಡಿ ನಾಲ್ಕನೇ ಮದುವೆ ಆಗಲು ತಯಾರಾಗಿದ್ದಾರೆ ಎಂದು ಕೆಲವು ದಿನಗಳ ಹಿಂದಷ್ಟೆ ವೈಸಿಪಿ ಪಕ್ಷದ ಮುಖಂಡರೊಬ್ಬರು ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಮಾತನಾಡಿರುವ ವೇಣು ಸ್ವಾಮಿ, ‘ಈ ವರ್ಷದ ಜೂನ್ ವರೆಗೆ ಆ ರೀತಿಯ ಘಟನೆಗಳು ನಡೆಯುವುದಿಲ್ಲ ಆದರೆ ಜೂನ್ ತಿಂಗಳ ನಂತರ ಪವನ್ ಕಲ್ಯಾಣ್ ತಮ್ಮ ಮೂರನೇ ಪತ್ನಿಗೆ ವಿಚ್ಛೇದನ ನೀಡಿ ನಾಲ್ಕನೇ ಮದುವೆ ಆಗುವ ಸಾಧ್ಯತೆ ಇದೆ’ ಎಂದಿದ್ದಾರೆ.

ಅವರ ಖಾಸಗಿ ಜೀವನದಲ್ಲಿ ಬಹಳಷ್ಟು ಏರು-ಪೇರುಗಳು ಜೂನ್ ತಿಂಗಳ ಬಳಿಕ ನಡೆಯಲಿವೆ ಎಂದಿರುವ ವೇಣು ಸ್ವಾಮಿ, ಪವನ್​ ಹಠಾತ್ತನೆ ನಿರ್ಣಯ ತೆಗೆದುಕೊಳ್ಳುವ ವ್ಯಕ್ತಿ. ಅವರ ಎಲ್ಲ ನಿರ್ಣಯಗಳು ಹೃದಯದಿಂದ ಬಂದಿರುತ್ತವೆ, ಯೋಚನೆ ಮಾಡುವುದಿಲ್ಲ ಹಾಗಾಗಿ ಹಲವು ತಪ್ಪುಗಳನ್ನು ಅವರು ಜೀವನದಲ್ಲಿ ಮಾಡುತ್ತಾ ಬಂದಿದ್ದಾರೆ ಮುಂದೆಯೂ ಮಾಡುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ:ಪವನ್ ಕಲ್ಯಾಣ್ ಆಸ್ತಿ ಎಷ್ಟು? ಇರುವ ಸಾಲವೆಷ್ಟು?

ಪವನ್ ಕಲ್ಯಾಣ್ ರಾಜಕೀಯ ಜೀವನದ ಬಗ್ಗೆ ಮಾತನಾಡಿರುವ ವೇಣು ಸ್ವಾಮಿ, ‘ಪವನ್ ಕಲ್ಯಾಣ್​ಗೆ ರಾಜಕೀಯದಲ್ಲಿ ಯೋಗವಿಲ್ಲ. ಅವರು ರಾಜಕೀಯದಿಂದ ಆದಷ್ಟು ಶೀಘ್ರವೇ ದೂರವಾದರೆ ಒಳ್ಳೆಯದು. ಆದರೆ ಅವರಿಗೆ ಸಿನಿಮಾ ರಂಗದಲ್ಲಿ ಎದುರಾಳಿಯೇ ಇಲ್ಲ. ಈ ವಿಚಾರದಲ್ಲಿ ರಜನೀಕಾಂತ್ ಹಾಗೂ ಪವನ್​ರದ್ದು ಒಂದೇ ರೀತಿಯ ಗ್ರಹಗತಿ. ಇಬ್ಬರಿಗೂ ರಾಜಕೀಯದಲ್ಲಿ ಏಳ್ಗೆಯಿಲ್ಲ ಆದರೆ ಸಿನಿಮಾದಲ್ಲಿ ಎದುರೇ ಇಲ್ಲ’ ಎಂದಿದ್ದಾರೆ ವೇಣು ಸ್ವಾಮಿ.

ವೇಣು ಸ್ವಾಮಿ ತೆಲುಗು ರಾಜ್ಯಗಳ ಸೆಲೆಬ್ರಿಟಿ ಜ್ಯೋತಿಷಿ, ರಶ್ಮಿಕಾ ಮಂದಣ್ಣ ಸಹ ಇವರ ಬಳಿ ವಿಶೇಷ ಪೂಜೆ ಮಾಡಿಸಿಕೊಂಡಿದ್ದರು. ಆ ಬಳಿಕ ಅವರ ವೃತ್ತಿ ಜೀವನದಲ್ಲಿ ಭಾರಿ ಜಿಗಿತ ಉಂಟಾಯ್ತು. ಹಲವು ಸ್ಟಾರ್ ನಟರ ಸಿನಿಮಾಗಳಿಗೆ ಮುಹೂರ್ತ ನೆರವೇರಿಸಿದ್ದಾರೆ. ಚಂದ್ರಬಾಬು ನಾಯ್ಡು ಸರ್ಕಾರದಲ್ಲಿ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ಪೂಜೆ ಮಾಡಿದವರು ಇವರೇ. ಸೆಲೆಬ್ರಿಟಿಗಳ ಭವಿಷ್ಯ ಹೇಳುವ ವೇಣು ಸ್ವಾಮಿ, ಸಮಂತಾ-ನಾಗಚೈತನ್ಯ ವಿಚ್ಛೇದನ ಪಡೆದುಕೊಳ್ಳುತ್ತಾರೆಂದು ಮೊದಲೇ ನುಡಿದಿದ್ದರು. ಇದೀಗ ರಶ್ಮಿಕಾ-ವಿಜಯ್ ಮದುವೆಯಾದರೆ ಅವರೂ ಸಹ ವಿಚ್ಛೇದನ ಪಡೆದುಕೊಳ್ಳುತ್ತಾರೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!