AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್​ 4ನೇ ಮದುವೆಯಾಗ್ತಾರೆ, ರಾಜಕೀಯದಲ್ಲಿ ಏಳ್ಗೆಯಿಲ್ಲ: ವೇಣು ಸ್ವಾಮಿ ಭವಿಷ್ಯ

Pawan Kalyan: ನಟ ಪವನ್ ಕಲ್ಯಾಣ್​ ಈಗಾಗಲೇ ಮೂರು ಮದುವೆಯಾಗಿದ್ದಾರೆ. ಆದರೆ ಪವನ್​ರ ವೈವಾಹಿಕ ಜೀವನದ ಬಗ್ಗೆ ಭವಿಷ್ಯ ನುಡಿದಿರುವ ವೇಣುಸ್ವಾಮಿ, ಪವನ್​ ಮತ್ತೆ ಮದುವೆ ಆಗಲಿದ್ದಾರೆ ಎಂದಿದ್ದಾರೆ.

ಪವನ್ ಕಲ್ಯಾಣ್​ 4ನೇ ಮದುವೆಯಾಗ್ತಾರೆ, ರಾಜಕೀಯದಲ್ಲಿ ಏಳ್ಗೆಯಿಲ್ಲ: ವೇಣು ಸ್ವಾಮಿ ಭವಿಷ್ಯ
ಪವನ್ ಕಲ್ಯಾಣ್
ಮಂಜುನಾಥ ಸಿ.
|

Updated on: Jan 05, 2024 | 8:57 PM

Share

ತೆಲುಗು ರಾಜ್ಯಗಳ ಸೆಲೆಬ್ರಿಟಿ ಜ್ಯೋತಿಷಿ (Astrologer) ಎನಿಸಿಕೊಂಡಿರುವ ವೇಣು ಸ್ವಾಮಿ, ತೆಲುಗಿನ ಜನಪ್ರಿಯ ಸ್ಟಾರ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ (Pawan Kalyan) ಕುರಿತು ಭವಿಷ್ಯ ನುಡಿದಿದ್ದಾರೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಪವನ್ ಕಲ್ಯಾಣ್​ರ ಖಾಸಗಿ ಜೀವನ, ರಾಜಕೀಯ ಜೀವನದ ಬಗ್ಗೆ ವೇಣು ಸ್ವಾಮಿ ಮಾತನಾಡಿದ್ದಾರೆ. ಪವನ್ ಕಲ್ಯಾಣ್ ಮುಂದೆ ಏನು ಮಾಡಿದರೆ ಅವರ ಜಿವನದಲ್ಲಿ ಏಳ್ಗೆ ಇರುತ್ತದೆ ಎಂಬ ಬಗ್ಗೆಯೂ ಭವಿಷ್ಯ ಹೇಳಿದ್ದಾರೆ.

ಪವನ್ ಕಲ್ಯಾಣ್ ರ ರಾಜಕೀಯ ವಿರೋಧಿಗಳು ಅವರ ಮೂರು ಮದುವೆ ವಿಷಯವನ್ನು ಸದಾ ಪವನ್​ರ ವಿರುದ್ಧ ಅಸ್ತ್ರವಾಗಿ ಬಳಸುತ್ತಿರುತ್ತಾರೆ. ಪವನ್​ಗೆ ಈಗಾಗಲೇ ಮೂರು ಮದುವೆಗಳಾಗಿವೆ, ಮೂರನೇ ಪತ್ನಿಗೂ ವಿಚ್ಛೇದನ ನೀಡಿ ನಾಲ್ಕನೇ ಮದುವೆ ಆಗಲು ತಯಾರಾಗಿದ್ದಾರೆ ಎಂದು ಕೆಲವು ದಿನಗಳ ಹಿಂದಷ್ಟೆ ವೈಸಿಪಿ ಪಕ್ಷದ ಮುಖಂಡರೊಬ್ಬರು ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಮಾತನಾಡಿರುವ ವೇಣು ಸ್ವಾಮಿ, ‘ಈ ವರ್ಷದ ಜೂನ್ ವರೆಗೆ ಆ ರೀತಿಯ ಘಟನೆಗಳು ನಡೆಯುವುದಿಲ್ಲ ಆದರೆ ಜೂನ್ ತಿಂಗಳ ನಂತರ ಪವನ್ ಕಲ್ಯಾಣ್ ತಮ್ಮ ಮೂರನೇ ಪತ್ನಿಗೆ ವಿಚ್ಛೇದನ ನೀಡಿ ನಾಲ್ಕನೇ ಮದುವೆ ಆಗುವ ಸಾಧ್ಯತೆ ಇದೆ’ ಎಂದಿದ್ದಾರೆ.

ಅವರ ಖಾಸಗಿ ಜೀವನದಲ್ಲಿ ಬಹಳಷ್ಟು ಏರು-ಪೇರುಗಳು ಜೂನ್ ತಿಂಗಳ ಬಳಿಕ ನಡೆಯಲಿವೆ ಎಂದಿರುವ ವೇಣು ಸ್ವಾಮಿ, ಪವನ್​ ಹಠಾತ್ತನೆ ನಿರ್ಣಯ ತೆಗೆದುಕೊಳ್ಳುವ ವ್ಯಕ್ತಿ. ಅವರ ಎಲ್ಲ ನಿರ್ಣಯಗಳು ಹೃದಯದಿಂದ ಬಂದಿರುತ್ತವೆ, ಯೋಚನೆ ಮಾಡುವುದಿಲ್ಲ ಹಾಗಾಗಿ ಹಲವು ತಪ್ಪುಗಳನ್ನು ಅವರು ಜೀವನದಲ್ಲಿ ಮಾಡುತ್ತಾ ಬಂದಿದ್ದಾರೆ ಮುಂದೆಯೂ ಮಾಡುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ:ಪವನ್ ಕಲ್ಯಾಣ್ ಆಸ್ತಿ ಎಷ್ಟು? ಇರುವ ಸಾಲವೆಷ್ಟು?

ಪವನ್ ಕಲ್ಯಾಣ್ ರಾಜಕೀಯ ಜೀವನದ ಬಗ್ಗೆ ಮಾತನಾಡಿರುವ ವೇಣು ಸ್ವಾಮಿ, ‘ಪವನ್ ಕಲ್ಯಾಣ್​ಗೆ ರಾಜಕೀಯದಲ್ಲಿ ಯೋಗವಿಲ್ಲ. ಅವರು ರಾಜಕೀಯದಿಂದ ಆದಷ್ಟು ಶೀಘ್ರವೇ ದೂರವಾದರೆ ಒಳ್ಳೆಯದು. ಆದರೆ ಅವರಿಗೆ ಸಿನಿಮಾ ರಂಗದಲ್ಲಿ ಎದುರಾಳಿಯೇ ಇಲ್ಲ. ಈ ವಿಚಾರದಲ್ಲಿ ರಜನೀಕಾಂತ್ ಹಾಗೂ ಪವನ್​ರದ್ದು ಒಂದೇ ರೀತಿಯ ಗ್ರಹಗತಿ. ಇಬ್ಬರಿಗೂ ರಾಜಕೀಯದಲ್ಲಿ ಏಳ್ಗೆಯಿಲ್ಲ ಆದರೆ ಸಿನಿಮಾದಲ್ಲಿ ಎದುರೇ ಇಲ್ಲ’ ಎಂದಿದ್ದಾರೆ ವೇಣು ಸ್ವಾಮಿ.

ವೇಣು ಸ್ವಾಮಿ ತೆಲುಗು ರಾಜ್ಯಗಳ ಸೆಲೆಬ್ರಿಟಿ ಜ್ಯೋತಿಷಿ, ರಶ್ಮಿಕಾ ಮಂದಣ್ಣ ಸಹ ಇವರ ಬಳಿ ವಿಶೇಷ ಪೂಜೆ ಮಾಡಿಸಿಕೊಂಡಿದ್ದರು. ಆ ಬಳಿಕ ಅವರ ವೃತ್ತಿ ಜೀವನದಲ್ಲಿ ಭಾರಿ ಜಿಗಿತ ಉಂಟಾಯ್ತು. ಹಲವು ಸ್ಟಾರ್ ನಟರ ಸಿನಿಮಾಗಳಿಗೆ ಮುಹೂರ್ತ ನೆರವೇರಿಸಿದ್ದಾರೆ. ಚಂದ್ರಬಾಬು ನಾಯ್ಡು ಸರ್ಕಾರದಲ್ಲಿ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ಪೂಜೆ ಮಾಡಿದವರು ಇವರೇ. ಸೆಲೆಬ್ರಿಟಿಗಳ ಭವಿಷ್ಯ ಹೇಳುವ ವೇಣು ಸ್ವಾಮಿ, ಸಮಂತಾ-ನಾಗಚೈತನ್ಯ ವಿಚ್ಛೇದನ ಪಡೆದುಕೊಳ್ಳುತ್ತಾರೆಂದು ಮೊದಲೇ ನುಡಿದಿದ್ದರು. ಇದೀಗ ರಶ್ಮಿಕಾ-ವಿಜಯ್ ಮದುವೆಯಾದರೆ ಅವರೂ ಸಹ ವಿಚ್ಛೇದನ ಪಡೆದುಕೊಳ್ಳುತ್ತಾರೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?