AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದ ಬಗ್ಗೆ ಭವಿಷ್ಯ ನುಡಿದಿದ್ದ ಜ್ಯೋತಿಷಿ, ಸಮಂತಾ ಎರಡನೇ ಮದುವೆ ಬಗ್ಗೆಯೂ ಭವಿಷ್ಯ

Samantha: ಟಾಲಿವುಡ್​ನ ಸೆಲೆಬ್ರಿಟಿ ಜ್ಯೋತಿಷಿಯಾಗಿಯೇ ಗುರುತಿಸಿಕೊಂಡಿರುವ ವೇಣು ಸ್ವಾಮಿ, ಈ ಹಿಂದೆ ಸಮಂತಾ ಹಾಗೂ ನಾಗ ಚೈತನ್ಯರ ವಿಚ್ಚೇದನದ ಬಗ್ಗೆ ಭವಿಷ್ಯ ನುಡಿದಿದ್ದರು. ಇದೀಗ ಸಮಂತಾರ ಎರಡನೇ ಮದುವೆ ಬಗ್ಗೆ ಮಾತನಾಡಿರುವ ಹಳೆಯ ವಿಡಿಯೋ ವೈರಲ್ ಆಗಿದೆ.

ವಿಚ್ಛೇದನದ ಬಗ್ಗೆ ಭವಿಷ್ಯ ನುಡಿದಿದ್ದ ಜ್ಯೋತಿಷಿ, ಸಮಂತಾ ಎರಡನೇ ಮದುವೆ ಬಗ್ಗೆಯೂ ಭವಿಷ್ಯ
ಸಮಂತಾ-ವೇಣು ಸ್ವಾಮಿ
ಮಂಜುನಾಥ ಸಿ.
|

Updated on: Aug 26, 2023 | 4:17 PM

Share

ತೆಲುಗು ಚಿತ್ರರಂಗದಲ್ಲಿ (Tollywood) ಸ್ಟಾರ್ ನಟ-ನಟಿಯರು ಇರುವಂತೆಯೇ ವೇಣು ಸ್ವಾಮಿ (Venu Swamy) ಟಾಲಿವುಡ್​ನ ಸೆಲೆಬ್ರಿಟಿ ಜ್ಯೋತಿಷಿ ಎನಿಸಿಕೊಂಡಿದ್ದಾರೆ. ಹಲವು ದಶಕಗಳಿಂದಲೂ ತೆಲುಗು ಸಿನಿಮಾಗಳ ಮುಹೂರ್ತ ಪೂಜೆ, ಬಿಡುಗಡೆ ದಿನಾಂಕ ನಿಗದಿ ಇತ್ಯಾದಿಗಳನ್ನು ಮಾಡುತ್ತಾ ಬಂದಿರುವ ವೇಣು ಸ್ವಾಮಿ ಕಳೆದ ಕೆಲ ವರ್ಷಗಳಿಂದ ಯೂಟ್ಯೂಬ್​ನಲ್ಲಿ (YouTube) ತೆಲುಗು ಸೆಲೆಬ್ರಿಟಿಗಳ ಭವಿಷ್ಯ, ಅವರ ವೃತ್ತಿಯ ಏರಿಳಿತ, ಮದುವೆ, ಪ್ರೇಮ ಇನ್ನಿತರೆಗಳ ಬಗ್ಗೆ ಮಾತನಾಡುತ್ತಿದ್ದಾರೆ. ಸಮಂತಾ (Samantha) ಹಾಗೂ ನಾಗ ಚೈತನ್ಯ ವಿಚ್ಚೇದನದ ಬಗ್ಗೆ ಮುಂಚಿತವಾಗಿಯೇ ಭವಿಷ್ಯ ನುಡಿದಿದ್ದ ವೇಣು ಸ್ವಾಮಿ ಸಮಂತಾರ ಎರಡನೇ ಮದುವೆ ಬಗ್ಗೆಯೂ ಮಾತನಾಡಿರುವ ಹಳೆಯ ವಿಡಿಯೋ ಇದೀಗ ವೈರಲ್ ಆಗಿದೆ.

ಹಳೆಯ ವಿಡಿಯೋ ಒಂದರಲ್ಲಿ ಸಮಂತಾ, ಪವನ್ ಕಲ್ಯಾಣ್, ಚಿರಂಜೀವಿ ಪುತ್ರಿಯ ಮರು ಮದುವೆ, ನಾಗ ಚೈತನ್ಯ ಸಹೋದರ ಅಖಿಲ್ ಮದುವೆ ಇನ್ನಿತರೆ ವಿಷಯಗಳ ಬಗ್ಗೆ ಮಾತನಾಡಿದ್ದರು. ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನದ ಬಗ್ಗೆ ಭವಿಷ್ಯ ನುಡಿದಾಗ ಹಲವರು ನನ್ನ ವಿಪರೀತವಾಗಿ ಟೀಕಿಸಿದ್ದರು, ಆದರೆ ನಾನು ಭವಿಷ್ಯ ನುಡಿದಂತೆಯೇ ಆಯಿತು ಎಂದಿರುವ ವೇಣು ಸ್ವಾಮಿ, ಇಬ್ಬರೂ ಎರಡನೇ ಮದುವೆ ಆಗಲಿದ್ದಾರೆ ಎಂದೂ ಸಹ ಹೇಳಿದ್ದಾರೆ.

ವೈವಾಹಿಕ ಜೀವನ ಸರಿಯಿಲ್ಲದೇ ಹೋಗುವುದಕ್ಕೆ ಗುರುವಿನ ಸ್ಥಾನವೇ ಪ್ರಮುಖ ಕಾರಣ ಎಂದಿರುವ ವೇಣು ಸ್ವಾಮಿ, ತೆಲುಗು ನಟ ಪವನ್ ಕಲ್ಯಾಣ್ ಮೂರು ಮದುವೆಗಳಾಗಿರುವುದು ಇದೇ ಕಾರಣಕ್ಕೆ, ಅವರ ಜಾತಕದಲ್ಲಿ ಸುಮಾರು ಮೂರು-ನಾಲ್ಕು ಮದುವೆಗಳ ಯೋಗವಿದೆ ಎಂದಿದ್ದಾರೆ. ಇನ್ನು ಚಿರಂಜೀವಿ ಪುತ್ರಿ ಶ್ರಿಜಾ ಜಾತಕದ ಬಗ್ಗೆ ಮಾತನಾಡಿ, ಆಕೆಯ ಜಾತಕದಲ್ಲಿಯೂ ಬಹು ವಿವಾಹ ಬರೆದಿದ್ದು, ಎರಡು ಮದುವೆ ಆಗಿರುವ ಆಕೆ ಇನ್ನೂ ಎರಡು ಮದುವೆ ಆಗುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ:ನ್ಯೂಯಾರ್ಕ್ ನಗರದಲ್ಲಿ ಸೀರೆ ಉಟ್ಟು ಸುತ್ತಾಡಿದ ಸಮಂತಾ; ಇಲ್ಲಿವೆ ಫೋಟೋಸ್

ಇನ್ನು ನಾಗಾರ್ಜುನ ಕುಟುಂಬದಲ್ಲಿ ವಿಚ್ಛೇದನ ಎಂಬುದು ಅವರ ಕುಟುಂಬ ಜಾತಕದಲ್ಲಿಯೇ ಇದೆ. ಇನ್ನೂ ಮದುವೆ ಆಗದಿರುವ ಅಖಿಲ್ ಸಹ ಮುಂದೆ ಮದುವೆ ಆದಾಗ ವಿಚ್ಚೇದನಕ್ಕೆ ಒಳಗಾಗುತ್ತಾರೆ. ನಾಗಾರ್ಜುನ ಸಹ ವಿಚ್ಛೇದನ ಪಡೆದುಕೊಂಡಿದ್ದರು. ಅಖಿಲ್ ಜಾತಕ ಸಹ ಬಹಳ ಚೆನ್ನಾಗಿಯೇನೂ ಇಲ್ಲ. ಅವರೂ ಸಹ ವೈಯಕ್ತಿಕ ಹಾಗೂ ವೃತ್ತಿ ಜೀವನದಲ್ಲಿ ಅಭಿವೃದ್ಧಿ ಹೊಂದುವುದು ಕಷ್ಟವೆಂದು ವೇಣು ಸ್ವಾಮಿ ಹಳೆಯ ಸಂದರ್ಶನದಲ್ಲಿ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ