AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​ ಕಲ್ಯಾಣ್​ ಭವಿಷ್ಯದ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗಪಡಿಸಿದ ಜ್ಯೋತಿಷಿಗಳು

ಯುಗಾದಿ ಹಬ್ಬಕ್ಕೆ ಜ್ಯೋತಿಷಿಗಳು ಪವನ್​ ಕಲ್ಯಾಣ್​ ಕುಂಡಲಿ ನೋಡಿ ಭವಿಷ್ಯ ನುಡಿದಿದ್ದಾರೆ. ಅವರ ಜಾತಕದ ಪ್ರಕಾರ ಪವನ್​ ಕಲ್ಯಾಣ್​ಗೆ ಸಿನಿಮಾ ರಂಗದಲ್ಲಿ ಈ ವರ್ಷ ಯಶಸ್ಸು ಸಿಗಲಿದೆ.

ಪವನ್​ ಕಲ್ಯಾಣ್​ ಭವಿಷ್ಯದ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗಪಡಿಸಿದ ಜ್ಯೋತಿಷಿಗಳು
ನಟ ಪವನ್ ಕಲ್ಯಾಣ್
ರಾಜೇಶ್ ದುಗ್ಗುಮನೆ
|

Updated on: Apr 15, 2021 | 7:41 PM

Share

ಪವನ್​ ಕಲ್ಯಾಣ್​ ನಟನೆಯ ವಕೀಲ್​ ಸಾಬ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತಿದೆ. ಕೊರೊನಾ ಎರಡನೇ ಅಲೆ, ಚಿತ್ರಮಂದಿರಗಳಲ್ಲಿ ಆಸನ ಮಿತಿ ಮತ್ತಿತ್ಯಾದಿ ಅಡೆತಡೆಗಳನ್ನು ಮೆಟ್ಟಿನಿಂತು ಸಿನಿಮಾ ಮುನ್ನುಗ್ಗುತ್ತಿದೆ. ಹೀಗಿರುವಾಗಲೇ ಪವನ್​ ಕಲ್ಯಾಣ್​ ಭವಿಷ್ಯದ ಬಗ್ಗೆ ಜ್ಯೋತಿಷಿಗಳು ಕೆಲ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಈ ವರ್ಷ ಸಿನಿಮಾ ರಂಗದಲ್ಲಿ ಪವನ್​ ಮಿಂಚಿದರೂ, ರಾಜಕೀಯದಲ್ಲಿ ಅವರಿಗೆ ಯಶಸ್ಸು ಸಿಗುವುದು ಅನುಮಾನ ಎಂದು ಹೇಳಲಾಗಿದೆ. ಯುಗಾದಿ ಹಬ್ಬಕ್ಕೆ ಜ್ಯೋತಿಷಿಗಳು ಪವನ್​ ಕಲ್ಯಾಣ್​ ಕುಂಡಲಿ ನೋಡಿ ಭವಿಷ್ಯ ನುಡಿದಿದ್ದಾರೆ. ಅವರ ಜಾತಕದ ಪ್ರಕಾರ ಪವನ್​ ಕಲ್ಯಾಣ್​ಗೆ ಸಿನಿಮಾ ರಂಗದಲ್ಲಿ ಈ ವರ್ಷ ಯಶಸ್ಸು ಸಿಗಲಿದೆ. ಈಗಾಗಲೇ ಅವರ ಖ್ಯಾತಿ ದೇಶಾದ್ಯಂತ ಹಬ್ಬಿದ್ದು, ಇದು ದುಪ್ಪಟ್ಟು ಆಗಲಿದೆ ಎಂದು ಅಭಿಪ್ರಾಯಪಡಲಾಗಿದೆ.

ಆದರೆ, ರಾಜಕೀಯದಲ್ಲಿ ಅವರಿಗೆ ಅಂದುಕೊಂಡಮಟ್ಟದಲ್ಲಿ ಯಶಸ್ಸು ಸಿಗುವುದು ಸಾಧ್ಯವಿಲ್ಲವಂತೆ. ಪವನ್​ ಕಲ್ಯಾಣ್​ಗೆ ರಾಜಕೀಯ ಕ್ಷೇತ್ರದಲ್ಲಿ ಯಶಸ್ಸು ಸಿಗಬೇಕು ಎಂದರೆ ಇನ್ನೂ ಹಲವು ವರ್ಷಗಳಕಾಲ ಅವರು ಶ್ರಮವಹಿಸಬೇಕು. ಅದಾದ ನಂತರವೇ ರಾಜಕೀಯ ವಲಯದಲ್ಲಿ ಅವರ ವರ್ಚಸ್ಸು ಬೆಳೆಯಲು ಸಾಧ್ಯ. ಸದ್ಯಕ್ಕಂತೂ ರಾಜಕೀಯ ವಲಯದಲ್ಲಿ ಅವರಿಗೆ ಯಶಸ್ಸು ಕೈ ಹಿಡಿಯುವುದಿಲ್ಲ ಎಂದು ಜ್ಯೋತಿಷಿಗಳು ಹೇಳಿದ್ದಾರೆ.

ಒಂದೊಮ್ಮೆ ಪವನ್​ ಕಲ್ಯಾಣ್​ ರಾಜಕೀಯದಲ್ಲಿ ಯಶಸ್ಸು ಕಂಡರೆ ಕೇವಲ ರಾಜ್ಯ ನಾಯಕನಾಗಿ ಉಳಿಯುವುದಿಲ್ಲವಂತೆ. ರಾಷ್ಟ್ರ ರಾಜಕಾರಣದಲ್ಲಿ ಅವರ ಪ್ರಭಾವ ಹೆಚ್ಚಿರಲಿದೆ. ಇದಕ್ಕೆ ಅವರು ತುಂಬಾನೇ ತಾಳ್ಮೆಯಿಂದ ಕಾಯಬೇಕು ಎಂಬುದು ಜ್ಯೋತಿಷಿಗಳ ಭವಿಷ್ಯ.

ಇತ್ತೀಚೆಗೆ ಪವನ್​ ಕಲ್ಯಾಣ್​ ಕ್ವಾರಂಟೈನ್​ ಆಗಿದ್ದಾರೆ. ಪವನ್​ ಕಲ್ಯಾಣ್​ ಸಿನಿಮಾ ಪ್ರಚಾರಕ್ಕಾಗಿ ಸಾಕಷ್ಟು ಸುತ್ತಾಟ ನಡೆಸಿದ್ದರು. ಪರಿಣಾಮ ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿದೆ. ಇದು ಪವನ್​ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಮುಂಜಾಗೃತಾ ಕ್ರಮವಾಗಿ ಅವರು ಕ್ವಾರಂಟೈನ್​ ಆಗಿದ್ದಾರೆ.

ಇದನ್ನೂ ಓದಿ: ಪವನ್ ಕಲ್ಯಾಣ್ ಗೆಂದು ಕೈ ಕತ್ತರಿಸಿಕೊಂಡ ಅಭಿಮಾನಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ