AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುನೀಲ್ ಶೆಟ್ಟಿ ಮನೆಯಲ್ಲೇ ನಡೆಯಲಿದೆ ಆಥಿಯಾ ಮದುವೆ; ಡಿಸೆಂಬರ್ ಅಂತ್ಯಕ್ಕೆ ರಾಹುಲ್ ಜತೆ ವಿವಾಹ?

ಸುನೀಲ್ ಶೆಟ್ಟಿ ಅವರ ಖಾಂಡಾಲಾದಲ್ಲಿ ‘ಜಹಾನ್’ ಬಂಗಲೆಯಲ್ಲಿ ಆಥಿಯಾ ಹಾಗೂ ರಾಹುಲ್ ವಿವಾಹ ನಡೆಯಲಿದೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಆಥಿಯಾ ಹಾಗೂ ರಾಹುಲ್ ಫ್ಯಾನ್ಸ್ ಖುಷಿಯಾಗಿದ್ದಾರೆ.

ಸುನೀಲ್ ಶೆಟ್ಟಿ ಮನೆಯಲ್ಲೇ ನಡೆಯಲಿದೆ ಆಥಿಯಾ ಮದುವೆ; ಡಿಸೆಂಬರ್ ಅಂತ್ಯಕ್ಕೆ ರಾಹುಲ್ ಜತೆ ವಿವಾಹ?
ರಾಹುಲ್-ಆಥಿಯಾ
TV9 Web
| Edited By: |

Updated on: Sep 06, 2022 | 6:55 PM

Share

ನಟಿ ಆಥಿಯಾ ಶೆಟ್ಟಿ (Athiya Shetty) ಹಾಗೂ ಟೀಂ ಇಂಡಿಯಾ ಆಟಗಾರ ಕೆ.ಎಲ್​. ರಾಹುಲ್ (KL Rahul) ವಿವಾಹದ ವಿಚಾರ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಚರ್ಚೆಗೆ ಬರುತ್ತಿದೆ. ಮದುವೆ ವಿಚಾರವನ್ನು ಈ ಜೋಡಿ ಅಲ್ಲಗಳೆಯುತ್ತಲೇ ಬಂದಿದೆ. ಈಗ ಮತ್ತೆ ಈ ಸುದ್ದಿ ಹರಿದಾಡೋಕೆ ಶುರುವಾಗಿದೆ. ಮದುವೆ ನಡೆಯುವ ಸ್ಥಳ ಹಾಗೂ ಸಮಯದ ಬಗ್ಗೆ ಹೊಸ ಮಾಹಿತಿ ಹೊರ ಬಿದ್ದಿದೆ. ಕೆಲವರು ಇದನ್ನು ವದಂತಿ ಎಂದು ಪ್ರಬಲವಾಗಿ ವಾದಿಸಿದರೆ ಇನ್ನೂ ಕೆಲವರು ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಎಂಬ ವಾದವನ್ನು ಮುಂದಿಡುತ್ತಿದ್ದಾರೆ.

ರಾಹುಲ್ ಹಾಗೂ ಆಥಿಯಾ ಪರಸ್ಪರ ಪ್ರೀತಿಸುತ್ತಿದ್ದಾರೆ. ಅನೇಕ ಬಾರಿ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ. ಆದರೆ, ಎಲ್ಲಿಯೂ ಈ ಬಗ್ಗೆ ಅಧಿಕೃತವಾಗಿ ಮಾತನಾಡಿಲ್ಲ. ಆಥಿಯಾ ತಂದೆ ಸುನೀಲ್ ಶೆಟ್ಟಿ ಕೂಡ ಅನೇಕ ಬಾರಿ ರಾಹುಲ್ ಹಾಗೂ ಆಥಿಯಾ ಬಗ್ಗೆ ಮಾತನಾಡಿದ್ದಿದೆ. ಈ ಮೊದಲು ಮದುವೆ ವಿಚಾರದ ವದಂತಿ ಹುಟ್ಟಿಕೊಂಡಾಗ ಅವರು ಅಲ್ಲಗಳೆದಿದ್ದರು. ಈಗ ಮತ್ತೆ ಇದೇ ರೀತಿಯ ಸುದ್ದಿ ಹರಿದಾಡುತ್ತಿದೆ.

ಇಟೈಮ್ಸ್ ವರದಿ ಮಾಡಿರುವ ಪ್ರಕಾರ ಸುನೀಲ್ ಶೆಟ್ಟಿ ಅವರ ಖಾಂಡಾಲಾದಲ್ಲಿ ‘ಜಹಾನ್’ ಬಂಗಲೆಯಲ್ಲಿ ಆಥಿಯಾ ಹಾಗೂ ರಾಹುಲ್ ವಿವಾಹ ನಡೆಯಲಿದೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಆಥಿಯಾ ಹಾಗೂ ರಾಹುಲ್ ಫ್ಯಾನ್ಸ್ ಖುಷಿಯಾಗಿದ್ದಾರೆ.

ಅಕ್ಟೋಬರ್​ನಲ್ಲಿ ಟಿ20 ವಿಶ್ವಕಪ್ ಇದೆ. ಅದಾದ ಬಳಿಕ ಹಲವು ಸರಣಿಗಳಿವೆ. ಏಪ್ರಿಲ್ ವೇಳೆಗೆ ಐಪಿಎಲ್ ಆರಂಭ ಆಗುತ್ತದೆ. ಈ ಎಲ್ಲಾ ಕಾರಣದಿಂದ ಡಿಸೆಂಬರ್ ಅಂತ್ಯಕ್ಕೆ ಮದುವೆ ನಡೆಸಲು ಈ ಜೋಡಿ ನಿರ್ಧರಿಸಿದೆ. ಸುನೀಲ್ ಶೆಟ್ಟಿ ಕೂಡ ಇದಕ್ಕೆ ಖುಷಿಯಿಂದ ಒಪ್ಪಿಗೆ ನೀಡಿದ್ದಾರೆ ಎನ್ನಲಾಗುತ್ತಿದೆ. ಡಿಸೆಂಬರ್ ಕೊನೆಯ ವಾರ ಅಥವಾ ಜನವರಿ ಮೊದಲ ವಾರದಲ್ಲಿ ಮದುವೆ ನಡೆಯುವ ಸಾಧ್ಯತೆ ಇದೆ ಎಂದು ಇವರ ಫ್ರೆಂಡ್ಸ್​ಗೆ ಸಂದೇಶ ರವಾನೆ ಆಗಿರುವ ಬಗ್ಗೆ ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಮುಂದಿನ ವರ್ಷ ಹಸೆಮಣೆ ಏರಲಿದ್ದಾರೆ ಕೆಎಲ್‌ ರಾಹುಲ್‌-ಆಥಿಯಾ ಜೋಡಿ

ಈ ಮದುವೆ ಅದ್ದೂರಿಯಾಗಿ ನಡೆಯಲಿದೆ. ಕೇವಲ ಆಪ್ತರಿಗಷ್ಟೇ ಆಮಂತ್ರಣ ನೀಡಲು ನಿರ್ಧರಿಸಲಾಗಿದೆ. ಮದುವೆ ಬಳಿಕ ನಡೆಯುವ ಆರತಕ್ಷತೆಗೆ ಬಾಲಿವುಡ್ ಸೆಲೆಬ್ರಿಟಿಗಳು ಹಾಗೂ ಟೀಂ ಇಂಡಿಯಾ ಆಟಗಾರರಿಗೆ ಆಮಂತ್ರಣ ನೀಡುವ ಆಲೋಚನೆಯಲ್ಲಿ ಅವರಿದ್ದಾರೆ ಎನ್ನಲಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ