AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುನೀಲ್ ಶೆಟ್ಟಿ ಮನೆಯಲ್ಲೇ ನಡೆಯಲಿದೆ ಆಥಿಯಾ ಮದುವೆ; ಡಿಸೆಂಬರ್ ಅಂತ್ಯಕ್ಕೆ ರಾಹುಲ್ ಜತೆ ವಿವಾಹ?

ಸುನೀಲ್ ಶೆಟ್ಟಿ ಅವರ ಖಾಂಡಾಲಾದಲ್ಲಿ ‘ಜಹಾನ್’ ಬಂಗಲೆಯಲ್ಲಿ ಆಥಿಯಾ ಹಾಗೂ ರಾಹುಲ್ ವಿವಾಹ ನಡೆಯಲಿದೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಆಥಿಯಾ ಹಾಗೂ ರಾಹುಲ್ ಫ್ಯಾನ್ಸ್ ಖುಷಿಯಾಗಿದ್ದಾರೆ.

ಸುನೀಲ್ ಶೆಟ್ಟಿ ಮನೆಯಲ್ಲೇ ನಡೆಯಲಿದೆ ಆಥಿಯಾ ಮದುವೆ; ಡಿಸೆಂಬರ್ ಅಂತ್ಯಕ್ಕೆ ರಾಹುಲ್ ಜತೆ ವಿವಾಹ?
ರಾಹುಲ್-ಆಥಿಯಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 06, 2022 | 6:55 PM

Share

ನಟಿ ಆಥಿಯಾ ಶೆಟ್ಟಿ (Athiya Shetty) ಹಾಗೂ ಟೀಂ ಇಂಡಿಯಾ ಆಟಗಾರ ಕೆ.ಎಲ್​. ರಾಹುಲ್ (KL Rahul) ವಿವಾಹದ ವಿಚಾರ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಚರ್ಚೆಗೆ ಬರುತ್ತಿದೆ. ಮದುವೆ ವಿಚಾರವನ್ನು ಈ ಜೋಡಿ ಅಲ್ಲಗಳೆಯುತ್ತಲೇ ಬಂದಿದೆ. ಈಗ ಮತ್ತೆ ಈ ಸುದ್ದಿ ಹರಿದಾಡೋಕೆ ಶುರುವಾಗಿದೆ. ಮದುವೆ ನಡೆಯುವ ಸ್ಥಳ ಹಾಗೂ ಸಮಯದ ಬಗ್ಗೆ ಹೊಸ ಮಾಹಿತಿ ಹೊರ ಬಿದ್ದಿದೆ. ಕೆಲವರು ಇದನ್ನು ವದಂತಿ ಎಂದು ಪ್ರಬಲವಾಗಿ ವಾದಿಸಿದರೆ ಇನ್ನೂ ಕೆಲವರು ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಎಂಬ ವಾದವನ್ನು ಮುಂದಿಡುತ್ತಿದ್ದಾರೆ.

ರಾಹುಲ್ ಹಾಗೂ ಆಥಿಯಾ ಪರಸ್ಪರ ಪ್ರೀತಿಸುತ್ತಿದ್ದಾರೆ. ಅನೇಕ ಬಾರಿ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ. ಆದರೆ, ಎಲ್ಲಿಯೂ ಈ ಬಗ್ಗೆ ಅಧಿಕೃತವಾಗಿ ಮಾತನಾಡಿಲ್ಲ. ಆಥಿಯಾ ತಂದೆ ಸುನೀಲ್ ಶೆಟ್ಟಿ ಕೂಡ ಅನೇಕ ಬಾರಿ ರಾಹುಲ್ ಹಾಗೂ ಆಥಿಯಾ ಬಗ್ಗೆ ಮಾತನಾಡಿದ್ದಿದೆ. ಈ ಮೊದಲು ಮದುವೆ ವಿಚಾರದ ವದಂತಿ ಹುಟ್ಟಿಕೊಂಡಾಗ ಅವರು ಅಲ್ಲಗಳೆದಿದ್ದರು. ಈಗ ಮತ್ತೆ ಇದೇ ರೀತಿಯ ಸುದ್ದಿ ಹರಿದಾಡುತ್ತಿದೆ.

ಇಟೈಮ್ಸ್ ವರದಿ ಮಾಡಿರುವ ಪ್ರಕಾರ ಸುನೀಲ್ ಶೆಟ್ಟಿ ಅವರ ಖಾಂಡಾಲಾದಲ್ಲಿ ‘ಜಹಾನ್’ ಬಂಗಲೆಯಲ್ಲಿ ಆಥಿಯಾ ಹಾಗೂ ರಾಹುಲ್ ವಿವಾಹ ನಡೆಯಲಿದೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಆಥಿಯಾ ಹಾಗೂ ರಾಹುಲ್ ಫ್ಯಾನ್ಸ್ ಖುಷಿಯಾಗಿದ್ದಾರೆ.

ಅಕ್ಟೋಬರ್​ನಲ್ಲಿ ಟಿ20 ವಿಶ್ವಕಪ್ ಇದೆ. ಅದಾದ ಬಳಿಕ ಹಲವು ಸರಣಿಗಳಿವೆ. ಏಪ್ರಿಲ್ ವೇಳೆಗೆ ಐಪಿಎಲ್ ಆರಂಭ ಆಗುತ್ತದೆ. ಈ ಎಲ್ಲಾ ಕಾರಣದಿಂದ ಡಿಸೆಂಬರ್ ಅಂತ್ಯಕ್ಕೆ ಮದುವೆ ನಡೆಸಲು ಈ ಜೋಡಿ ನಿರ್ಧರಿಸಿದೆ. ಸುನೀಲ್ ಶೆಟ್ಟಿ ಕೂಡ ಇದಕ್ಕೆ ಖುಷಿಯಿಂದ ಒಪ್ಪಿಗೆ ನೀಡಿದ್ದಾರೆ ಎನ್ನಲಾಗುತ್ತಿದೆ. ಡಿಸೆಂಬರ್ ಕೊನೆಯ ವಾರ ಅಥವಾ ಜನವರಿ ಮೊದಲ ವಾರದಲ್ಲಿ ಮದುವೆ ನಡೆಯುವ ಸಾಧ್ಯತೆ ಇದೆ ಎಂದು ಇವರ ಫ್ರೆಂಡ್ಸ್​ಗೆ ಸಂದೇಶ ರವಾನೆ ಆಗಿರುವ ಬಗ್ಗೆ ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಮುಂದಿನ ವರ್ಷ ಹಸೆಮಣೆ ಏರಲಿದ್ದಾರೆ ಕೆಎಲ್‌ ರಾಹುಲ್‌-ಆಥಿಯಾ ಜೋಡಿ

ಈ ಮದುವೆ ಅದ್ದೂರಿಯಾಗಿ ನಡೆಯಲಿದೆ. ಕೇವಲ ಆಪ್ತರಿಗಷ್ಟೇ ಆಮಂತ್ರಣ ನೀಡಲು ನಿರ್ಧರಿಸಲಾಗಿದೆ. ಮದುವೆ ಬಳಿಕ ನಡೆಯುವ ಆರತಕ್ಷತೆಗೆ ಬಾಲಿವುಡ್ ಸೆಲೆಬ್ರಿಟಿಗಳು ಹಾಗೂ ಟೀಂ ಇಂಡಿಯಾ ಆಟಗಾರರಿಗೆ ಆಮಂತ್ರಣ ನೀಡುವ ಆಲೋಚನೆಯಲ್ಲಿ ಅವರಿದ್ದಾರೆ ಎನ್ನಲಾಗಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ