Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇಶವೇ ಹೆಮ್ಮೆಪಡೋ ಸಿನಿಮಾ ಮಾಡುವೆ’; ಸಲ್ಮಾನ್ ಜೊತೆಗಿನ ಚಿತ್ರ ಘೋಷಿಸಿದ ಅಟ್ಲಿ 

ಅಟ್ಲಿ ಅವರು ‘ಜವಾನ್’ ಚಿತ್ರದ ನಂತರ ತಮ್ಮ ಆರನೇ ಚಿತ್ರ ‘A6’ಘೋಷಿಸಿದ್ದಾರೆ. ಸಲ್ಮಾನ್ ಖಾನ್ ಈ ಚಿತ್ರದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ರಜನಿಕಾಂತ್ ಅಥವಾ ಕಮಲ್ ಹಾಸನ್ ನಟಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

‘ದೇಶವೇ ಹೆಮ್ಮೆಪಡೋ ಸಿನಿಮಾ ಮಾಡುವೆ’; ಸಲ್ಮಾನ್ ಜೊತೆಗಿನ ಚಿತ್ರ ಘೋಷಿಸಿದ ಅಟ್ಲಿ 
ಸಲ್ಲು-ಅಟ್ಲಿ
Follow us
ರಾಜೇಶ್ ದುಗ್ಗುಮನೆ
|

Updated on:Dec 18, 2024 | 12:48 PM

‘ಜವಾನ್’ ಸಿನಿಮಾ ನಿರ್ದೇಶನ ಮಾಡಿದ ಕಾಲಿವುಡ್ ನಿರ್ದೇಶಕ ಅಟ್ಲಿ ಅವರ ಖ್ಯಾತಿ ಹೆಚ್ಚಾಗಿದೆ. ಅವರು ಈಗ ಬಾಲಿವುಡ್​ನಲ್ಲಿ ಬ್ಯುಸಿ ಇದ್ದಾರೆ. ಅವರ ಮುಂದಿನ ಚಿತ್ರಗಳ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಈಗ ಅವರ ನಿರ್ದೇಶನದ ಆರನೇ ಸಿನಿಮಾ ಅನೌನ್ಸ್ ಆಗಿದೆ. ಇದಕ್ಕೆ ಸದ್ಯ ‘A6’ ಎನ್ನುವ ಟೈಟಲ್ ಇಡಲಾಗಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಪ್ರಮುಖ ಪಾತ್ರವಹಿಸಲಿದ್ದಾರೆ.

ಅಟ್ಲಿ ಅವರು ‘ಬೇಬಿ ಜಾನ್’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಇದು ಅವರ ನಿರ್ಮಾಣದ ಮೊದಲ ಸಿನಿಮಾ. ಈ ಚಿತ್ರವನ್ನು ಕಲೀಸ್ ಅವರು ನಿರ್ದೇಶನ ಮಾಡಿದ್ದು, ‘ತೇರಿ’ ಚಿತ್ರವನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ವರುಣ್ ಧವನ್ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್ 25ರಂದು ಸಿನಿಮಾ ರಿಲೀಸ್ ಆಗಲಿದೆ.

‘ಎ6 ಚಿತ್ರಕ್ಕೆ ಸಾಕಷ್ಟು ಸಮಯ ಹಾಗೂ ಎನರ್ಜಿ ಬೇಕಿದೆ. ನಾವು ಸ್ಕ್ರಿಪ್ಟ್​ನ ಪೂರ್ಣಗೊಳಿಸುವ ಹಂತದಲ್ಲಿ ಇದ್ದೇವೆ. ದೇವರ ಅನುಗೃಹದಿಂದ ಶೀಘ್ರವೇ ದೊಡ್ಡ ಅನೌನ್ಸ್​ಮೆಂಟ್ ಆಗಲಿದೆ’ ಎಂದು ಅಟ್ಲಿ ಅವರು ಹೇಳಿದ್ದಾರೆ. ಈ ವಿಚಾರ ಅನೇಕರಿಗೆ ಖುಷಿ ನೀಡಿದೆ.

‘ನಾನು ಪಾತ್ರವರ್ಗದ ಮೂಲಕ ಎಲ್ಲರಿಗೂ ಸರ್​ಪ್ರೈಸ್ ನೀಡಲಿದ್ದೇನೆ. ನೀವು ಏನನ್ನು ಯೋಚಿಸುತ್ತಿದ್ದೀರೋ ಅದು ನಿಜ (ಸಲ್ಮಾನ್ ಖಾನ್ ನಟಿಸುತ್ತಾರೆ ಎಂಬ ವಿಚಾರ). ಆದಾಗ್ಯೂ ನಿಮಗೆ ಸರ್​ಪ್ರೈಸ್ ಇದೆ. ಇದು ಭಾರತವೇ ಹೆಮ್ಮೆ ಪಡೋ ಸಿನಿಮಾ ಆಗಲಿದೆ. ನಮಗೆ ಸಾಕಷ್ಟು ಆಶೀರ್ವಾದ ಹಾಗೂ ಪ್ರಾರ್ಥನೆ ಬೇಕು. ಸದ್ಯ ಪಾತ್ರಗಳ ಆಯ್ಕೆ ನಡೆಯುತ್ತಿದೆ. ಕೆಲವೇ ವಾರಗಳಲ್ಲಿ ಎಲ್ಲವೂ ಅಂತಿಮ ಆಗಲಿದೆ’ ಎಂದು ಅವರು ಹೇಳಿದ್ದಾರೆ. ಈ ಚಿತ್ರದಲ್ಲಿ ರಜನಿ ಅಥವಾ ಕಮಲ್ ಹಾಸನ್ ಪ್ರಮುಖ ಪಾತ್ರ ನಿರ್ವಹಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಅಟ್ಲಿ ಬಣ್ಣದ ಬಗ್ಗೆ ಕಪಿಲ್ ಶರ್ಮಾ ಟೀಕೆ; ನಗದೆ ಖಡಕ್ ಉತ್ತರ ಕೊಟ್ಟ ನಿರ್ದೇಶಕ

ಸದ್ಯ ಅಟ್ಲಿ ಅವರು ಪಾತ್ರವರ್ಗದ ಬಗ್ಗೆ ನೀಡಿರುವ ವಿವರ ಸಾಕಷ್ಟು ಕುತೂಹಲ ಮೂಡಿಸಿದೆ. ಅವರು ‘ಜವಾನ್’ ಬಳಿಕ ಬ್ರೇಕ್ ತೆಗೆದುಕೊಂಡಿದ್ದು ಯಾವುದೇ ಸಿನಿಮಾ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:45 pm, Wed, 18 December 24

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ