Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ಗೆ ಪ್ರಿಯಾಂಕಾ ಚೋಪ್ರಾ ನಾಯಕಿ? ನಿರ್ದೇಶಕ ಅಟ್ಲಿ ಮಾಸ್ಟರ್ ಪ್ಲ್ಯಾನ್

ಖ್ಯಾತ ನಿರ್ದೇಶಕ ಅಟ್ಲಿ ಅವರು ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡಲಿದ್ದಾರೆ. ಆ ಪ್ರಾಜೆಕ್ಟ್​ಗೆ ಈಗಾಗಲೇ ತಯಾರಿ ನಡೆಯುತ್ತಿದೆ. ನಾಯಕಿಯಾಗಿ ಪ್ರಿಯಾಂಕಾ ಚೋಪ್ರಾ ಅವರನ್ನು ಆಯ್ಕೆ ಮಾಡಿಕೊಳ್ಳಲು ಅಟ್ಲಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಅವರು ಒಂದು ಸುತ್ತಿನ ಮಾತುಕಥೆ ನಡೆಸಿದ್ದಾರೆ ಎಂದು ವರದಿ ಆಗಿದೆ.

ಅಲ್ಲು ಅರ್ಜುನ್​ಗೆ ಪ್ರಿಯಾಂಕಾ ಚೋಪ್ರಾ ನಾಯಕಿ? ನಿರ್ದೇಶಕ ಅಟ್ಲಿ ಮಾಸ್ಟರ್ ಪ್ಲ್ಯಾನ್
Atlee, Priyanka Chopra, Allu Arjun
Follow us
ಮದನ್​ ಕುಮಾರ್​
|

Updated on: Apr 04, 2025 | 6:24 PM

ನಿರ್ದೇಶಕ ಅಟ್ಲಿ (Atlee) ಅವರಿಗೆ ಸಖತ್ ಬೇಡಿಕೆ ಇದೆ. ಬಾಲಿವುಡ್​ನಲ್ಲಿ ‘ಜವಾನ್’ ಸಿನಿಮಾ ಮಾಡಿ ಭಾರಿ ಗೆಲುವು ಕಂಡ ಅವರ ಜೊತೆ ಸಿನಿಮಾ ಮಾಡಲು ಘಟಾನುಘಟಿ ಸ್ಟಾರ್​ ನಟರು ಕಾಯುತ್ತಿದ್ದಾರೆ. ಟಾಲಿವುಡ್ ನಟ ಅಲ್ಲು ಅರ್ಜುನ್ (Allu Arjun) ಅವರು ಅಟ್ಲಿ ಜೊತೆ ಸಿನಿಮಾ ಮಾಡುತ್ತಾರೆ ಎಂಬ ಮಾತು ಕೇಳಿಬಂದಿದೆ. ಆ ಸಿನಿಮಾಗೆ ತೆರೆಮರೆಯಲ್ಲಿ ತಯಾರಿ ನಡೆಯುತ್ತಿದೆ. ಈ ಸಿನಿಮಾದ ಹೀರೋಯಿನ್ ಆಯ್ಕೆ ಬಗ್ಗೆ ಅಟ್ಲಿ ಅವರು ತಲೆ ಕೆಡಿಸಿಕೊಂಡಿದ್ದಾರೆ. ವರದಿಗಳ ಪ್ರಕಾರ ಅವರು ಈಗ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಜೊತೆ ಮಾತುಕಥೆ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಿಯಾಂಕಾ ಚೋಪ್ರಾ ಅವರು ಇತ್ತೀಚಿನ ಕೆಲವು ವರ್ಷಗಳಿಂದ ಹಾಲಿವುಡ್​ನಲ್ಲೇ ಬ್ಯುಸಿ ಆಗಿದ್ದಾರೆ. ಭಾರತೀಯ ಸಿನಿಮಾಗಳಿಂದ ಅವರು ದೂರ ಉಳಿದುಕೊಂಡಿದ್ದಾರೆ. ಈಗ ಅವರು ಮೊದಲ ಟಾಲಿವುಡ್ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ರಾಜಮೌಳಿ ನಿರ್ದೇಶನದ ಹೊಸ ಸಿನಿಮಾದಲ್ಲಿ ಮಹೇಶ್​ ಬಾಬುಗೆ ಜೋಡಿಯಾಗಿ ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದಾರೆ. ಆ ಬಳಿಕ ಅವರು ಅಟ್ಲಿ ನಿರ್ದೇಶನದ ಸಿನಿಮಾವನ್ನು ಒಪ್ಪಿಕೊಳ್ಳುವ ಸಾಧ್ಯತೆ ಇದೆ.

ಅಟ್ಲಿ ಅವರಿಗೆ ಅಲ್ಲು ಅರ್ಜುನ್ ಜೊತೆಗಿನ ಸಿನಿಮಾ ಚಾಲೆಂಜಿಂಗ್ ಆಗಿರಲಿದೆ. ಯಾಕೆಂದರೆ, ‘ಪುಷ್ಪ 2’ ಬಳಿಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಆ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಮಾಡಬೇಕು. ಆ ಒತ್ತಡದಲ್ಲಿ ಇರುವ ಅಟ್ಲಿ ಅವರು ಪಾತ್ರವರ್ಗವನ್ನು ಬಲಪಡಿಸುವ ಪಯತ್ನದಲ್ಲಿದ್ದಾರೆ. ರಾಜಮೌಳಿ ನಿರ್ದೇಶನದ ಸಿನಿಮಾದಿಂದ ಪ್ರಿಯಾಂಕಾ ಚೋಪ್ರಾ ಅವರು ಟಾಲಿವುಡ್​ನಲ್ಲಿ ಧೂಳೆಬ್ಬಿಸುವುದು ಖಚಿತ. ಆ ಬಳಿಕ ಅವರು ಅಲ್ಲು ಅರ್ಜುನ್​ಗೆ ಜೋಡಿಯಾದರೆ ಭರ್ಜರಿ ಹೈಪ್ ಸಿಗಲಿದೆ ಎಂಬುದು ಅಟ್ಲಿ ಅವರ ಮಾಸ್ಟರ್ ಪ್ಲ್ಯಾನ್ ಆದಂತಿದೆ.

ಇದನ್ನೂ ಓದಿ
Image
ಹೆಸರು ಬದಲಾವಣೆ ಮಾಡಿಕೊಳ್ಳಲಿರುವ ಅಲ್ಲು ಅರ್ಜುನ್, ಕಾರಣವೇನು?
Image
ಚಿತ್ರರಂಗದಲ್ಲಿ 22 ವರ್ಷ ಪೂರೈಸಿದ ಅಲ್ಲು ಅರ್ಜುನ್; ಮುಂದಿದೆ ದೊಡ್ಡ ಸವಾಲು
Image
‘ಪುಷ್ಪ 3’ ಚಿತ್ರಕ್ಕಾಗಿ ಎಷ್ಟು ವರ್ಷ ಕಾಯಬೇಕು? ಮಾಹಿತಿ ಕೊಟ್ಟ ನಿರ್ಮಾಪಕ
Image
ನಿರ್ಮಾಪಕರ ಜೊತೆ ಕಿರಿಕ್; ಸಲ್ಲುಗೆ ಮಾಡಬೇಕಿದ್ದ ಸಿನಿಮಾನ ಅಲ್ಲುಗೆ ಶಿಫ್ಟ್

ಇದನ್ನೂ ಓದಿ: ನಿರ್ಮಾಪಕರ ಜೊತೆ ಕಿರಿಕ್; ಸಲ್ಲುಗೆ ಮಾಡಬೇಕಿದ್ದ ಸಿನಿಮಾನ ಅಲ್ಲು ಅರ್ಜುನ್​ಗೆ ಶಿಫ್ಟ್ ಮಾಡಿದ ಅಟ್ಲಿ

ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಸದ್ಯಕ್ಕೆ ಎಲ್ಲವೂ ಅಂತೆ-ಕಂತೆಯ ಹಂತದಲ್ಲಿದೆ. ಅಟ್ಲಿ ಅವರು ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಯಶಸ್ಸಿನ ಬಳಿಕ ಬ್ರೇಕ್ ಪಡೆದಿದ್ದಾರೆ. ಅಟ್ಲಿ, ಅಲ್ಲು ಅರ್ಜುನ್, ಪ್ರಿಯಾಂಕಾ ಚೋಪ್ರಾ ಕಾಂಬಿನೇಷನ್​ ಇದ್ದರೆ ಖಂಡಿತವಾಗಿಯೂ ನಿರೀಕ್ಷೆ ಜಾಸ್ತಿ ಆಗಲಿದೆ. ಪ್ರಿಯಾಂಕಾ ಚೋಪ್ರಾ ಅವರಿಗೆ ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಇದೆ. ಹಾಗಾಗಿ ಅವರು ನಾಯಕಿಯಾದರೆ ಸಿನಿಮಾಗೆ ದೊಡ್ಡ ಮಟ್ಟದ ಪ್ರಚಾರ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ