AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ಗೆ ಪ್ರಿಯಾಂಕಾ ಚೋಪ್ರಾ ನಾಯಕಿ? ನಿರ್ದೇಶಕ ಅಟ್ಲಿ ಮಾಸ್ಟರ್ ಪ್ಲ್ಯಾನ್

ಖ್ಯಾತ ನಿರ್ದೇಶಕ ಅಟ್ಲಿ ಅವರು ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡಲಿದ್ದಾರೆ. ಆ ಪ್ರಾಜೆಕ್ಟ್​ಗೆ ಈಗಾಗಲೇ ತಯಾರಿ ನಡೆಯುತ್ತಿದೆ. ನಾಯಕಿಯಾಗಿ ಪ್ರಿಯಾಂಕಾ ಚೋಪ್ರಾ ಅವರನ್ನು ಆಯ್ಕೆ ಮಾಡಿಕೊಳ್ಳಲು ಅಟ್ಲಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಅವರು ಒಂದು ಸುತ್ತಿನ ಮಾತುಕಥೆ ನಡೆಸಿದ್ದಾರೆ ಎಂದು ವರದಿ ಆಗಿದೆ.

ಅಲ್ಲು ಅರ್ಜುನ್​ಗೆ ಪ್ರಿಯಾಂಕಾ ಚೋಪ್ರಾ ನಾಯಕಿ? ನಿರ್ದೇಶಕ ಅಟ್ಲಿ ಮಾಸ್ಟರ್ ಪ್ಲ್ಯಾನ್
Atlee, Priyanka Chopra, Allu Arjun
ಮದನ್​ ಕುಮಾರ್​
|

Updated on: Apr 04, 2025 | 6:24 PM

Share

ನಿರ್ದೇಶಕ ಅಟ್ಲಿ (Atlee) ಅವರಿಗೆ ಸಖತ್ ಬೇಡಿಕೆ ಇದೆ. ಬಾಲಿವುಡ್​ನಲ್ಲಿ ‘ಜವಾನ್’ ಸಿನಿಮಾ ಮಾಡಿ ಭಾರಿ ಗೆಲುವು ಕಂಡ ಅವರ ಜೊತೆ ಸಿನಿಮಾ ಮಾಡಲು ಘಟಾನುಘಟಿ ಸ್ಟಾರ್​ ನಟರು ಕಾಯುತ್ತಿದ್ದಾರೆ. ಟಾಲಿವುಡ್ ನಟ ಅಲ್ಲು ಅರ್ಜುನ್ (Allu Arjun) ಅವರು ಅಟ್ಲಿ ಜೊತೆ ಸಿನಿಮಾ ಮಾಡುತ್ತಾರೆ ಎಂಬ ಮಾತು ಕೇಳಿಬಂದಿದೆ. ಆ ಸಿನಿಮಾಗೆ ತೆರೆಮರೆಯಲ್ಲಿ ತಯಾರಿ ನಡೆಯುತ್ತಿದೆ. ಈ ಸಿನಿಮಾದ ಹೀರೋಯಿನ್ ಆಯ್ಕೆ ಬಗ್ಗೆ ಅಟ್ಲಿ ಅವರು ತಲೆ ಕೆಡಿಸಿಕೊಂಡಿದ್ದಾರೆ. ವರದಿಗಳ ಪ್ರಕಾರ ಅವರು ಈಗ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಜೊತೆ ಮಾತುಕಥೆ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಿಯಾಂಕಾ ಚೋಪ್ರಾ ಅವರು ಇತ್ತೀಚಿನ ಕೆಲವು ವರ್ಷಗಳಿಂದ ಹಾಲಿವುಡ್​ನಲ್ಲೇ ಬ್ಯುಸಿ ಆಗಿದ್ದಾರೆ. ಭಾರತೀಯ ಸಿನಿಮಾಗಳಿಂದ ಅವರು ದೂರ ಉಳಿದುಕೊಂಡಿದ್ದಾರೆ. ಈಗ ಅವರು ಮೊದಲ ಟಾಲಿವುಡ್ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ರಾಜಮೌಳಿ ನಿರ್ದೇಶನದ ಹೊಸ ಸಿನಿಮಾದಲ್ಲಿ ಮಹೇಶ್​ ಬಾಬುಗೆ ಜೋಡಿಯಾಗಿ ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದಾರೆ. ಆ ಬಳಿಕ ಅವರು ಅಟ್ಲಿ ನಿರ್ದೇಶನದ ಸಿನಿಮಾವನ್ನು ಒಪ್ಪಿಕೊಳ್ಳುವ ಸಾಧ್ಯತೆ ಇದೆ.

ಅಟ್ಲಿ ಅವರಿಗೆ ಅಲ್ಲು ಅರ್ಜುನ್ ಜೊತೆಗಿನ ಸಿನಿಮಾ ಚಾಲೆಂಜಿಂಗ್ ಆಗಿರಲಿದೆ. ಯಾಕೆಂದರೆ, ‘ಪುಷ್ಪ 2’ ಬಳಿಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಆ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಮಾಡಬೇಕು. ಆ ಒತ್ತಡದಲ್ಲಿ ಇರುವ ಅಟ್ಲಿ ಅವರು ಪಾತ್ರವರ್ಗವನ್ನು ಬಲಪಡಿಸುವ ಪಯತ್ನದಲ್ಲಿದ್ದಾರೆ. ರಾಜಮೌಳಿ ನಿರ್ದೇಶನದ ಸಿನಿಮಾದಿಂದ ಪ್ರಿಯಾಂಕಾ ಚೋಪ್ರಾ ಅವರು ಟಾಲಿವುಡ್​ನಲ್ಲಿ ಧೂಳೆಬ್ಬಿಸುವುದು ಖಚಿತ. ಆ ಬಳಿಕ ಅವರು ಅಲ್ಲು ಅರ್ಜುನ್​ಗೆ ಜೋಡಿಯಾದರೆ ಭರ್ಜರಿ ಹೈಪ್ ಸಿಗಲಿದೆ ಎಂಬುದು ಅಟ್ಲಿ ಅವರ ಮಾಸ್ಟರ್ ಪ್ಲ್ಯಾನ್ ಆದಂತಿದೆ.

ಇದನ್ನೂ ಓದಿ
Image
ಹೆಸರು ಬದಲಾವಣೆ ಮಾಡಿಕೊಳ್ಳಲಿರುವ ಅಲ್ಲು ಅರ್ಜುನ್, ಕಾರಣವೇನು?
Image
ಚಿತ್ರರಂಗದಲ್ಲಿ 22 ವರ್ಷ ಪೂರೈಸಿದ ಅಲ್ಲು ಅರ್ಜುನ್; ಮುಂದಿದೆ ದೊಡ್ಡ ಸವಾಲು
Image
‘ಪುಷ್ಪ 3’ ಚಿತ್ರಕ್ಕಾಗಿ ಎಷ್ಟು ವರ್ಷ ಕಾಯಬೇಕು? ಮಾಹಿತಿ ಕೊಟ್ಟ ನಿರ್ಮಾಪಕ
Image
ನಿರ್ಮಾಪಕರ ಜೊತೆ ಕಿರಿಕ್; ಸಲ್ಲುಗೆ ಮಾಡಬೇಕಿದ್ದ ಸಿನಿಮಾನ ಅಲ್ಲುಗೆ ಶಿಫ್ಟ್

ಇದನ್ನೂ ಓದಿ: ನಿರ್ಮಾಪಕರ ಜೊತೆ ಕಿರಿಕ್; ಸಲ್ಲುಗೆ ಮಾಡಬೇಕಿದ್ದ ಸಿನಿಮಾನ ಅಲ್ಲು ಅರ್ಜುನ್​ಗೆ ಶಿಫ್ಟ್ ಮಾಡಿದ ಅಟ್ಲಿ

ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಸದ್ಯಕ್ಕೆ ಎಲ್ಲವೂ ಅಂತೆ-ಕಂತೆಯ ಹಂತದಲ್ಲಿದೆ. ಅಟ್ಲಿ ಅವರು ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಯಶಸ್ಸಿನ ಬಳಿಕ ಬ್ರೇಕ್ ಪಡೆದಿದ್ದಾರೆ. ಅಟ್ಲಿ, ಅಲ್ಲು ಅರ್ಜುನ್, ಪ್ರಿಯಾಂಕಾ ಚೋಪ್ರಾ ಕಾಂಬಿನೇಷನ್​ ಇದ್ದರೆ ಖಂಡಿತವಾಗಿಯೂ ನಿರೀಕ್ಷೆ ಜಾಸ್ತಿ ಆಗಲಿದೆ. ಪ್ರಿಯಾಂಕಾ ಚೋಪ್ರಾ ಅವರಿಗೆ ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಇದೆ. ಹಾಗಾಗಿ ಅವರು ನಾಯಕಿಯಾದರೆ ಸಿನಿಮಾಗೆ ದೊಡ್ಡ ಮಟ್ಟದ ಪ್ರಚಾರ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು